ಪಿಐಬಿ ಮೂಲಕ ಸರ್ಕಾರಿ ವಿರೋಧಿ ‘ನಕಲಿ’ ಸುದ್ದಿಗಳಿಗೆ ಕಡಿವಾಣಕ್ಕೆ ಸಿದ್ಧತೆ

Date:

  • ನಕಲಿ ಸುದ್ದಿ ಕಡಿವಾಣದ ಹೊಣೆ ಹೊತ್ತ ಪಿಐಬಿ
  • 2021ರ ಐಟಿ ನಿಯಮಗಳಿಗೆ ಇದೀಗ ತಿದ್ದುಪಡಿ

ಸಾಮಾಜಿಕ ಮಾಧ್ಯಮಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ‘ನಕಲಿ ಸುದ್ದಿ’, ಲೇಖನಗಳನ್ನು ಪ್ರಕಟಿಸುವುದಕ್ಕೆ ತಡೆ ಒಡ್ಡಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮುಂದಾಗಿದೆ.

ಸಚಿವಾಲಯದಡಿಯಲ್ಲಿರುವ ಪ್ರೆಸ್ ಇನ್‌ಫಾರ್ಮೇಷನ್ ಬ್ಯೂರೋದ ಅಥವಾ ಪಿಐಬಿ ಫ್ಯಾಕ್ಟ್ ಚೆಕ್ ವಿಭಾಗವು ನಕಲಿ ಸುದ್ದಿ ಎಂದು ಖಚಿತಪಡಿಸಿದರೆ, ಆರಂಭದಲ್ಲಿ ಅಂತಹ ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗುತ್ತದೆ.

ಬಳಿಕ ಸುದ್ದಿಗಳನ್ನು ಫೇಸ್‌ಬುಕ್‌, ಟ್ವಟರ್‌, ಇನ್‌ಸ್ಟಾಗ್ರಾಮ್‌ ಸೇರಿದಂತೆ ಆಯಾ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲು ಪಿಐಬಿ ಮೂಲಕ ಸರ್ಕಾರಿ ವಿರೋಧಿ ಸುದ್ದಿಗಳಿಗೆ ಕಡಿವಾಣಕ್ಕೆ ಸಿದ್ಧತೆ ನಿರ್ದೇಶನ ನೀಡುತ್ತದೆ.  ಆ ಮೂಲಕ ಸರ್ಕಾರದ ವಿರುದ್ಧ ನಕಲಿ ಸುದ್ದಿಗಳು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಿಐಬಿ ಬಳಸಿಕೊಂಡು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) 2021ರ ಐಟಿ ನಿಯಮಗಳಿಗೆ  ತಿದ್ದುಪಡಿ ಮಾಡಿರುವ ಕುರಿತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.  

ಈ ಸುದ್ದಿ ಓದಿದ್ದೀರಾ?: ಬದಲಾಯ್ತು ಟ್ವಿಟರ್‌ ಲೋಗೋ; ಮಸ್ಕ್‌ ಮಸ್ತಿಗೆ ಹಕ್ಕಿ ಬದಲಿಗೆ ನಾಯಿ ಬಂತು

ಕೇಂದ್ರ ಸರ್ಕಾರದ ಕುರಿತು ಪ್ರಸಾರವಾಗುವ ಸುದ್ದಿಗಳ ಕುರಿತು ಕಣ್ಣಿಡಲಿರುವ ಪಿಐಬಿ ಫ್ಯಾಕ್ಟ್ ಚೆಕ್ ವಿಭಾಗವು, ಸಂಬಂಧಿತ ಸರ್ಕಾರಿ ಇಲಾಖೆಗಳನ್ನು ಸಂಪರ್ಕಿಸಿ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಲಿದೆ.  ಬಳಿಕ ಆಯಾ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳಲಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕೇಂದ್ರ ಸರ್ಕಾರದ ನೀತಿ-ನಿಯಮಗಳನ್ನು ಪ್ರಶ್ನಿಸುವ, ವಿರ್ಮಶಿಸುವ ಟೀಕಿಸುವ ಸ್ವಾತಂತ್ರ್ಯವನ್ನು ಈ ತಿದ್ದುಪಡಿಯ ಮೂಲಕ ಕಸಿದುಕೊಳ್ಳಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ.

ಆದರೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿನ ಪೋಸ್ಟ್‌ಗಳ ಸೆನ್ಸಾರ್‌ಶಿಪ್‌ಗೆ ಕಾರಣವಾಗುತ್ತದೆ ಎಂಬ ಕಳವಳವನ್ನು ಕೇಂದ್ರ ಸಚಿವ ಚಂದ್ರಶೇಖರ್ ತಳ್ಳಿಹಾಕಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ...

ನಿಜವಾದ ಬದಲಾವಣೆ ಮಾಡುವವರು ನೀವು: ಮೊದಲ ಬಾರಿ ಮತದಾನ ಮಾಡುವವರಿಗೆ ಖರ್ಗೆ ಸಂದೇಶ

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ...

ವಿವಿಪ್ಯಾಟ್ ಪರಿಶೀಲನಾ ಗುರುತಿನ ಚೀಟಿ, ಮತಪತ್ರ ಚುನಾವಣಾ ಪ್ರಕ್ರಿಯೆಗೆ ಸುಪ್ರೀಂ ತಿರಸ್ಕಾರ

ಇವಿಎಂನಲ್ಲಿ ಮತ ಚಲಾಯಿಸಿದ ನಂತರ ಮತದಾರರಿಗೆ ವಿವಿಪ್ಯಾಟ್ ಮೂಲಕ ಪರಿಶೀಲನಾ ಚೀಟಿ...

ಗೌಪ್ಯತೆಯ ಬದ್ದತೆ ಮುರಿಯಲು ಒತ್ತಾಯಿಸಿದರೆ ಭಾರತವನ್ನೇ ತೊರೆಯುತ್ತೇವೆ: ವಾಟ್ಸಾಪ್‌

ವಾಟ್ಸಾಪ್‌ನಲ್ಲಿ ಸಂದೇಶಗಳ ಖಾಸಗಿತನ/ಗೌಪ್ಯತೆ (ಎಂಡ್‌-ಟು-ಎಂಚ್‌ ಎನ್‌ಕ್ರಿಪ್ಶನ್‌) - ಸಂದೇಶ ಕಳಿಸಿದವರು, ಸ್ವೀಕರಿಸಿದವರಲ್ಲದೆ...