ಸಿಕ್ಕಿಂ ಹಿಮಪಾತ; ಏಳು ಪ್ರವಾಸಿಗರ ಸಾವು

Date:

  • ಸಿಕ್ಕಿಂನ ಗಾಂಗ್ಟಕ್-ನಾತು ಲಾ ರಸ್ತೆಯಲ್ಲಿ ಸಂಭವಿಸಿದ ಹಿಮಪಾತ
  • ಸುಮಾರು 20ರಿಂದ 30 ಪ್ರವಾಸಿಗರು ಹಿಮದಡಿ ಸಿಲುಕಿರುವ ಆತಂಕ

ಮಂಗಳವಾರ ಮಧ್ಯಾಹ್ನ ಸಿಕ್ಕಿಂನ ಗಾಂಗ್ಟಕ್-ನಾತು ಲಾ ರಸ್ತೆಯಲ್ಲಿ ಸಂಭವಿಸಿದ ಹಿಮಪಾತದಲ್ಲಿ ಏಳು ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.

ಹಿಮಪಾತ ಅಡಿಯಲ್ಲಿ ಸಿಲುಕಿದವರೆಲ್ಲರೂ ಪ್ರವಾಸಿಗರು ಮತ್ತು ಪ್ರವಾಸಿ ವಾಹನಗಳು ಎಂದು ಎನ್‌ಡಿಆರ್‌ಎಫ್‌ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ಹೇಳಿದೆ.

ಬಿಆರ್‌ಒ ಪ್ರಕಾರ ಗಾಂಗ್ಟಕ್‌ನಿಂದ ನಾತು ಲಾ ಪಾಸ್ ಸಂಪರ್ಕಿಸುವ ಜವಾಹರ್‌ಲಾಲ್ ನೆಹರು ರಸ್ತೆಯ 14ನೇ ಮೈಲಿಯಲ್ಲಿ ಹಿಮಪಾತ ಉಂಟಾಗಿದೆ. ಅಂದಾಜು ಪ್ರಕಾರ 20-30 ಪ್ರವಾಸಿಗರು ಹಿಮದಡಿ ಸಿಲುಕಿದ್ದಾರೆ. 5-10 ಪ್ರವಾಸಿ ವಾಹನಗಳು ಹಿಮಪಾತಕ್ಕೆ ಸಿಲುಕಿದ್ದವು.

“ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಹಿಮಪಾತ ಸಂಭವಿಸಿದಾಗ ಸಿಕ್ಕಿಬಿದ್ದ 14 ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಸಮೀಪದ ಸೇನಾ ವೈದ್ಯಕೀಯ ಚಿಕಿತ್ಸಾಲಯಕ್ಕೆ ಕಳುಹಿಸಲಾಗಿದೆ. ಆದರೆ, ಏಳು ಮಂದಿ ಮೃತಪಟ್ಟಿದ್ದಾರೆ. ಉಳಿದ ಏಳು ಮಂದಿಗೆ ಗಾಂಗ್ಟಕ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಸೇನೆ ಹೇಳಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

10 ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ಡಿಜೆ ಕತೆ ಏನು?: ಗುಜರಾತ್ ಹೈಕೋರ್ಟ್

'ಹತ್ತು ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ನಿಮ್ಮ ಡಿಜೆ, ಭಜನೆಗಳ...

ಅವಶೇಷಗಳು ಸುರಂಗದೊಳಗೆ ಬಿದ್ದಾಗ ಏನಾಯಿತು?: ಘಟನೆ ಬಿಚ್ಚಿಟ್ಟ ಸಿಲುಕಿಕೊಂಡಿದ್ದ ಕಾರ್ಮಿಕ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಿಲ್ಕ್ಯಾರಾದಲ್ಲಿ ಸುರಂಗ ಕುಸಿದು ಆತಂಕ ಸೃಷ್ಟಿಯಾಗಿದ್ದು ಕೊನೆಗೂ ನಿವಾರಣೆಯಾಗಿದೆ....

17 ದಿನಗಳ ಕಾರ್ಯಾಚರಣೆ ಯಶಸ್ವಿ: ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರ ರಕ್ಷಣೆ

ಕಳೆದ 17 ದಿನಗಳಿಂದ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದ ಸುರಂಗದಲ್ಲಿ...

ಮಣಿಪುರ ಫೈಲ್ಸ್ ಲೇಖಕ ಪ್ರಣಬಾನಂದ ದಾಸ್ ವಿರುದ್ಧ ಎಫ್ಐಆರ್ ದಾಖಲು

ಈಶಾನ್ಯ ರಾಜ್ಯದಲ್ಲಿನ ಜನಾಂಗೀಯ ಹಿಂಸಾಚಾರವನ್ನು ಆಧರಿಸಿದ 'ಮಣಿಪುರ ಫೈಲ್ಸ್' ಕೃತಿಯ ಮೂಲಕ...