ಸೋಷಿಯಲ್ ಮೀಡಿಯಾಗಳಲ್ಲಿ ಟ್ರೆಂಡ್ ಆದ INDIAvsNDA ಹ್ಯಾಷ್‌ಟ್ಯಾಗ್

Date:

2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯನ್ನು ಎದುರಿಸಲು ಸಜ್ಜಾಗಿರುವ 26 ವಿರೋಧ ಪಕ್ಷಗಳು, ತಮ್ಮ ಒಕ್ಕೂಟಕ್ಕಿದ್ದ ಹಳೆಯ ‘ಯುಪಿಎ’ ಎಂಬ ಹೆಸರನ್ನು ಬದಲಿಸಿ, ‘ಇಂಡಿಯಾ (I.N.D.I.A)’ ಎಂಬ ಹೆಸರನ್ನಿಟ್ಟ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ INDIAvsNDA ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ವಿಪಕ್ಷಗಳ ಸಭೆಯ ಬಳಿಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಇಂಡಿಯಾ (I.N.D.I.A)’ ಹೆಸರನ್ನು ಘೋಷಿಸಿದರು.

ಇಂಡಿಯಾ ಅಥವಾ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್‌ ಇನ್‌ಕ್ಲೂಸಿವ್ ಅಲಯನ್ಸ್ (ಭಾರತ ರಾಷ್ಟ್ರೀಯ ಅಭಿವೃದ್ಧಿಶೀಲ ಸರ್ವಸಮ್ಮಿಳಿತ ಒಕ್ಕೂಟ) ಎಂಬ ಸಂಕ್ಷಿಪ್ತ ರೂಪವನ್ನು ಹೆಸರನ್ನಾಗಿ ಇಡಲಾಗಿದೆ.

ಈ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಇದು ಸೋಷಿಯಲ್ ಮೀಡಿಯಾಗಳಲ್ಲಿ ಟ್ರೆಂಡ್ ಆಗಿದೆ. ಇದು ಹಲವರ ಕುತೂಹಲಕ್ಕೂ ಕಾರಣವಾಗಿದೆ.

ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಿ, ಎಲ್ಲರನ್ನೂ ಒಳಗೊಂಡು, ದೇಶದ ಸಾರ್ವಭೌಮತ್ವವನ್ನು ಈ ಒಕ್ಕೂಟ ಕಾಪಾಡಲಿದೆ ಎಂಬ ಅಭಿಪ್ರಾಯಗಳನ್ನು ಹಲವರು ವ್ಯಕ್ತಪಡಿಸುತ್ತಿದ್ದಾರೆ.

ಅಧಿಕೃತವಾಗಿ ಈ ಹೆಸರು ಘೋಷಣೆಗೂ ಮುನ್ನವೇ ಟ್ವೀಟ್ ಮಾಡಿದ್ದ ಟಿಎಂಸಿ ಮುಖಂಡ ಡೆರೆಕ್ ಓಬ್ರಿಯಾನ್, ಚಕ್‌ದೇ ಇಂಡಿಯಾ ಎಂದು ತಿಳಿಸಿದ್ದರು.

ಸಭೆಯ ಬಳಿಕ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿಯವರು, ‘ಭಾರತ ಒಂದಾಗಲಿದೆ, INDIA ಗೆಲ್ಲಲಿದೆ’ ಎಂದಿದ್ದರು.

“ಭಾರತದ ಸಂವಿಧಾನದ 1 ನೇ ವಿಧಿ, ಅಂದರೆ ಭಾರತ. ಇದು ರಾಜ್ಯಗಳ ಒಕ್ಕೂಟ. ಇಂದು ಬೆಂಗಳೂರಿನಲ್ಲಿ 26 ರಾಜಕೀಯ ಪಕ್ಷಗಳು ಘೋಷಿಸಿದ ಭಾರತ ರಾಷ್ಟ್ರೀಯ ಅಭಿವೃದ್ಧಿಶೀಲ ಸರ್ವಸಮ್ಮಿಳಿತ ಒಕ್ಕೂಟದ ಹಿಂದಿನ ಸ್ಫೂರ್ತಿ ಇದು” ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಹೊಸ ಹೆಸರನ್ನು ಸೂಚಿಸಿದವರು ಯಾರು ಎಂಬ ಬಗ್ಗೆ ಪ್ರಶ್ನಿಸಿ, ಹಲವರು ಕುತೂಹಲ ವ್ಯಕ್ತಪಡಿಸಿದ್ದಾರೆ.

‘ಹೊಸ ಹೆಸರಿಗೆ ಅಂತಿಮವಾಗಿ ಸಂಕ್ಷಿಪ್ತ ರೂಪ ನೀಡಿದವರು ರಾಹುಲ್ ಗಾಂಧಿ’ ಎಂದು ಟ್ವೀಟ್ ಮಾಡಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಜಿತೇಂದ್ರ ಅಹ್ವಾದ್, “ಅವರ ಸೃಜನಶೀಲತೆಯನ್ನು ಪ್ರಶಂಸಿಸುತ್ತೇವೆ” ಎಂದಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು ದೆಹಲಿಯಲ್ಲಿ ಸಭೆ ನಡೆಸುತ್ತಿದೆ. ವಿಪಕ್ಷಗಳ ಒಗ್ಗೂಡುವಿಕೆಯು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ನಡುಕ ಹುಟ್ಟಿಸಿದೆ. ಹಾಗಾಗಿ, ಇಷ್ಟರವರೆಗೆ ಮರೆತು ಹೋಗಿದ್ದ ಸ್ನೇಹಿತರನ್ನು ಮತ್ತೆ ಒಂದುಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹಲವು ವಿಪಕ್ಷಗಳ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Live Updates | ಬೆಂಗಳೂರು ಬಂದ್: ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

25 Sep 2023, 07:15 PM ಬೆಂಗಳೂರು ಬಂದ್: ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...

ಮಣಿಪುರದಲ್ಲಿ ಇಂಟರ್‌ನೆಟ್‌ ಪುನರಾರಂಭ: ಸಿಎಂ ಬಿರೇನ್ ಸಿಂಗ್

ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಸ್ಫೋಟಗೊಂಡ ನಂತರ ಸ್ಥಗಿತಗೊಂಡಿದ್ದ ಮೊಬೈಲ್...

Live Updates | ಪ್ರತಿಭಟನೆ,ಚಳವಳಿಗಳನ್ನು ನಿಲ್ಲಿಸಲು ಹೋಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

23 Sep 2023, 06:35 PM ಚಳವಳಿಗಳನ್ನು ನಿಲ್ಲಿಸಲು ಹೋಗುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಜಾಪ್ರಭುತ್ವದಲ್ಲಿ...