ತಮಿಳುನಾಡು | ಚಿತ್ರಮಂದಿರಗಳಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ರದ್ದು

Date:

Advertisements
  • ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾ
  • ತಮಿಳುನಾಡಿನ 13 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಸಿನಿಮಾ

ಚಿತ್ರಕಥೆಯಿಂದಲೇ ಭಾರೀ ವಿವಾದಕ್ಕೆ ಈಡಾಗಿದ್ದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಚಿತ್ರಮಂದಿರಗಳ ಪ್ರದರ್ಶನ ತಮಿಳುನಾಡಿನಲ್ಲಿ ಭಾನುವಾರದಿಂದ (ಮೇ 7) ರದ್ದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಚಿತ್ರದ ಬಗ್ಗೆ ನೀರಸ ಪ್ರತಿಕ್ರಿಯೆ, ಪ್ರತಿಭಟನೆ ಮೊದಲಾದ ಕಾರಣಗಳಿಂದ ಸಿನಿಮಾ ಪ್ರದರ್ಶನ ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ರದ್ಧಾಗಿರುವ ಬಗ್ಗೆ ಪತ್ರಕರ್ತ ಶ್ರೀಧರ್‌ ಪಿಳೈ ಎಂಬುವವರು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

Advertisements

‘ಭಾನುವಾರ ಸಿನಿಮಾ ಟಿಕೆಟ್‌ ಬುಕ್‌ ಮಾಡಲು ಹೋದಾಗ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಪ್ರದರ್ಶನ ರದ್ದಾಗಿರುವುದು ತಿಳಿದು ಬಂದಿದೆ. ಕಾನೂನು ತೊಡಕು ಹಾಗೂ ಸಿನಿಮಾ ಪ್ರದರ್ಶನದ ಬಗ್ಗೆ ಇದ್ದ ನಿರಾಸಕ್ತಿ ಪ್ರದರ್ಶನ ರದ್ದತಿಗೆ ಕಾರಣ ಎಂದು ಮಲ್ಟಿಫ್ಲೆಕ್ಸ್‌ ಮಾಲೀಕರು ಹೇಳಿತ್ತಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

ರಾಜ್ಯದಲ್ಲಿ 13 ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನವಾಗುತ್ತಿತ್ತು. ಹಲವು ಆನ್‌ಲೈನ್‌ನ ಸಿನಿಮಾ ಬುಕಿಂಗ್‌ ವೇದಿಕೆಗಳು ಚೆನ್ನೈನಲ್ಲಿ ಸಿನಿಮಾ ಇದ್ದ ಚಿತ್ರಮಂದಿರಗಳ ಪಟ್ಟಿಯನ್ನು ಈಗಾಗಲೇ ತೆಗೆದುಹಾಕಿದೆ.

ಸಿನಿಮಾ ಪ್ರದರ್ಶನ ರದ್ದತಿಯ ಬಗ್ಗೆ ತಮಿಳುನಾಡು ಥಿಯೇಟರ್‌ ಮತ್ತು ಮಲ್ಟಿಫ್ಲೆಕ್ಸ್‌ ಮಾಲೀಕರ ಸಂಘದ ಅಧ್ಯಕ್ಷ ತಿರುಪ್ಪೂರ್‌ ಸುಬ್ರಹ್ಮಣ್ಯಂ ಮಾಹಿತಿ ನೀಡಿದ್ದು, “ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಪ್ರದರ್ಶಿಸುವ ಪಿವಿಆರ್‌ನಂತಹ ಚಿತ್ರಮಂದಿರಗಳು ಮಾತ್ರ ಸಿನಿಮಾ ಪ್ರದರ್ಶನಕ್ಕೆ ಮುಂದಾಗಿದ್ದವು. ಆದರೆ ಸ್ಥಳೀಯ ಚಿತ್ರಮಂದಿರಗಳು ಸಿನಿಮಾ ಪ್ರದರ್ಶನಕ್ಕೆ ಒಲವು ತೋರಿರಲಿಲ್ಲ. ಜನಪ್ರಿಯ ತಾರೆ ಇಲ್ಲದಿರುವುದೇ ಇದಕ್ಕೆ ಕಾರಣ” ಎಂದು ಹೇಳಿದರು.

“ಸಿನಿಮಾ ಕೊಯಮತ್ತೂರಿನ ಚಿತ್ರಮಂದಿರವೊಂದರಲ್ಲಿ ಎರಡು ದಿನ ಪ್ರದರ್ಶನವಾಯಿತು. ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಬಂದಿರಲಿಲ್ಲ. ಪ್ರತಿಭಟನೆ, ವಿವಾದ ಮತ್ತು ಪ್ರೇಕ್ಷಕರ ನೀರಸ ಪ್ರತಿಕ್ರಿಯೆಯಿಂದ ಚಿತ್ರಪ್ರದರ್ಶನ ರದ್ದತಿಗೆ ಮಾಲೀಕರು ನಿರ್ಧರಿಸಿದ್ದಾರೆ” ಎಂದು ಸುಬ್ರಹ್ಮಣಂ ತಿಳಿಸಿದರು.

ಸಿನಿಮಾ ಬಿಡುಗಡೆಯ ವಿರುದ್ಧ ತಮಿಳುನಾಡಿನ ‘ನಾಮ್‌ ತಮಿಳರ್‌ ಕಚ್ಚಿ’ ಪಕ್ಷ ಶನಿವಾರ ಪ್ರತಿಭಟನೆ ನಡೆಸಿತು. ಚಲನಚಿತ್ರದ ವಿರುದ್ಧ ಪಕ್ಷದ ಸಂಘಟಕ, ನಟ ಹಾಗೂ ನಿರ್ದೇಶಕ ಸೀಮನ್‌ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಚೆನ್ನೈ ಅಣ್ಣಾ ನಗರ ಪ್ರವೇಶ ದ್ವಾರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು.

‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕಳೆದ ವಾರದ ಆರಂಭದಲ್ಲಿ ಮದ್ರಾಸ್‌ ಹೈಕೋರ್ಟ್ ವಜಾಗೊಳಿಸಿತ್ತು.

ಈ ಸುದ್ದಿ ಓದಿದ್ದೀರಾ? ‘ಎಎಲ್‌ಎಚ್‌ ಧ್ರುವ’ ಕಾರ್ಯಾಚರಣೆ ಸ್ಥಗಿತ: ಭಾರತೀಯ ಸೇನೆ

ಈ ಮಧ್ಯೆ ಸಿನಿಮಾ ನಿರ್ಮಾಪಕರು ಟೀಸರ್‌ ಜೊತೆಗೆ ಬರೆಯಲಾಗಿದ್ದ ವಿವಾದಾತ್ಮಕ ವಿವರಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದು ಹಾಕುವುದಾಗಿ ಕೇರಳ ಹೈಕೋರ್ಟ್‌ಗೆ ತಿಳಿಸಿದ್ದರು, ನಂತರ ಟೀಸರ್‌ ವಿವರಗಳನ್ನು ಬದಲಿಸಲಾಯಿತು.

ಚಲನಚಿತ್ರ ತಂಡ ಬಿಡುಗಡೆ ಮಾಡಿದ್ದ ಟೀಸರ್‌ನಲ್ಲಿ “ಕೇರಳದ 32 ಸಾವಿರ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆ ಐಸಿಸ್‌ಗೆ ಯುವತಿಯರನ್ನು ಸೇರ್ಪಡೆ ಮಾಡಲಾಗಿದೆ. ಈ ವಾಸ್ತವದ ಕುರಿತ ಕಥೆ ಸಿನಿಮಾದಲ್ಲಿದೆ” ಎಂದು ಹೇಳಿತ್ತು. ನಂತರ ಹೈಕೋರ್ಟ್‌ನಲ್ಲಿ ಈ ಕಲ್ಪಿತ ವಿವರಗಳನ್ನು ಸಾಬೀತುಮಾಡಲಾಗದೆ, ಚಿತ್ರತಂಡ ವಿವರಗಳನ್ನು ಅಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X