ಲಂಕೇಶರು ಕಂಡ ಜಗಜೀವನ ರಾಮ್

Date:

Advertisements
ಛೇರ್ಮನ್‌ ಗಿರಿಯಿಂದ ಅಲ್ಲೊಂದು ಇಲ್ಲೊಂದು ಚರಂಡಿ ತೋಡಿಸಿ ರಸ್ತೆ ಸರಿ ಮಾಡಬಹುದು. ಆದರೆ ಈ ಪಂಚಾಯ್ತಿಯ ಕಪ್ಪು ಜನರ ಹೃದಯಗಳ ನೋವನ್ನು ಒಂದುಗೂಡಿಸಿದರೆ ಮಾತ್ರ ಆತನ ಬದುಕಿಗೆ ಅರ್ಥ ಬರುತ್ತದೆ. 

“ನಮ್ಮ ಜೀವನರಾಮು ಕೊನೆಗೂ ಛೇರ್ಮನ್‌ ಆಗಲಿಲ್ಲ. ಬರ್ತೂರಿನ ಬೇರನ್ನು ಈ ಪಂಚಾಯ್ತಿಯ ಕತ್ತೆಗಳು ಎಷ್ಟು ಗಲೀಜು ಮಾಡಿದ್ದಾರೆಂದರೆ, ನಮ್ಮ ರಾಮು ಹಿಡಿಯುತ್ತಿದ್ದುದು ಈ ದರಿದ್ರ ಛೇರನ್ನು, ಊರಿನ ಯಜಮಾನ ಸಂಜೀವಿಯ ಆಶೀರ್ವಾದದಿಂದ ರಾಮು ಕುರ್ಚಿ ಏರಬೇಕಾಗಿರಲಿಲ್ಲ. ರಾಮು ನಮ್ಮೆಲ್ಲರ ಮನಸ್ಸಿನಲ್ಲಿ ಬಹಳ ಕಾಲ ಉಳಿಯುವ ಕಪ್ಪು ಸಂಕೇತ. ನಮ್ಮ ಅನ್ಯಾಯಗಳ ಸಂಕೇತ ಕೂಡ.

“ಪಂಚಾಯ್ತಿಯ ಜನ ಬಹಳ ಮಾತಾಡಿಕೊಳ್ಳುತ್ತಾರೆ. ಗುಂಡಗೆ ಕಪ್ಪಗಿರುವ ಜೀವನ ರಾಮು ವ್ಯಂಗ್ಯ ಚಿತ್ರ ಬರೆಯುವವನಿಗೆ ಹಬ್ಬವಾಗಬಲ್ಲ, ಈತನನ್ನು ಬಿಳಿ ಹಾಳೆಯ ಮೇಲೆ ಕಪ್ಪು ಇಂಕು ಚೆಲ್ಲಿ ಎರಡು ಕಣ್ಣು ಬರೆದು ಬಿಳಿ ಟೋಪಿ ಹಾಕಿ ತಮಾಷೆ ಮಾಡುವುದು ಸುಲಭ. ಆದರೆ ಈ ಕಪ್ಪು ಆಕಾರದ ಹಿಂದೆ ಅರ್ಧಶತಮಾನದ ಅನುಭವ ಇದೆ. ಕೋಟ್ಯಂತರ ಕಪ್ಪು, ಜನರ ನೋವು ಇದೆ. ಗಾಂಧೀಜಿ ಅನುಭವಿಸಿದ ದುರಂತವಿದೆ. ವೇದೋಪನಿಷತ್ತು ಹೇಳಿ ಮೋಸ ಮಾಡಿದವರ, ಸುಲಿದು ಉಂಡವರ ಅಟ್ಟಹಾಸದ ನೆನಪುಗಳಿವೆ. ಚರಣಪ್ಪನಂತ ಕಟ್ಟೆ ಮುಖಂಡರ ತಾತ್ಸಾರ ಮತ್ತು ಶೋಷಣೆ ಇದೆ. ಯಜಮಾನ ಸಂಜೀವಿಯಂಥವರ ಪಿತೂರಿ ಮತ್ತು ಸೇಡುಗಳ ಬರೆ ಸ್ಪಷ್ಟವಾಗಿದೆ. ಜಾತಿ, ವರ್ಗಗಳ ಕೊಲೆಗಡುಕ ಚೌಕಟ್ಟು ನಮ್ಮೆಲ್ಲರ ಕಣ್ಣು ಕುಕ್ಕುವಷ್ಟು ಸರಳವಾಗಿ ಎದ್ದು ಕಾಣುತ್ತಿದೆ.

ಈ ಸುದ್ದಿ ಓದಿದ್ದೀರಾ?: ತಾಯಿ ಮೇಲೆ ಆಣೆಯಿಟ್ಟ ಬೊಮ್ಮಾಯಿಯಿಂದ ಪಂಚಮಸಾಲಿಗಳಿಗೆ ಮೋಸ; ಸ್ವಾಮೀಜಿಯೇಕೆ ಹೀಗೆ ಮಾಡಿದರು?

Advertisements

ಜೀವನರಾಮು ಈಗಲಾದರೂ ತನ್ನ ದಾರಿ ಕಂಡುಕೊಳ್ಳಬೇಕು. ಛೇರ್ಮನ್‌ಗಿರಿಯಿಂದ ಅಲ್ಲೊಂದು ಇಲ್ಲೊಂದು ಚರಂಡಿ ತೋಡಿಸಿ ರಸ್ತೆ ಸರಿ ಮಾಡಬಹುದು. ಆದರೆ ಈ ಪಂಚಾಯ್ತಿಯ ಕಪ್ಪು ಜನರ ಹೃದಯಗಳ ನೋವನ್ನು ಒಂದುಗೂಡಿಸಿದರೆ ಮಾತ್ರ ಆತನ ಬದುಕಿಗೆ ಮತ್ತು ಅವನ ಶತ್ರುಗಳೆನ್ನಿಸಿಕೊಂಡ ಖಳರೆಲ್ಲರ ಬದುಕಿಗೆ ಅರ್ಥ ಬರುತ್ತದೆ. ಮೂವತ್ತು ವರ್ಷಗಳ ಮರಳು ರಾಜಕೀಯದಿಂದ ಅಲ್ಲ, ಜೀವನ ರಾಮುವಿನ ಎರೆಮಣ್ಣಿನ ರಾಜಕೀಯದಿಂದ ಒಳ್ಳೆಯದಾಗುತ್ತದೆ. ಈ ನೆಲಕ್ಕಿನ್ನೂ ಜೀವ ಬರಿಸುವ ಶಕ್ತಿ ಉಳಿದಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ. ಗಾಳಿಯಲ್ಲಿ ಓಡಾಡುವ ಮೇಲುವರ್ಗದ ಜನಕ್ಕೆ ಕಾಣದ ಇದ್ದದ್ದು ಈ ಮಣ್ಣಿನ ಕಂದಮ್ಮನಿಗೆ ಕಾಣಬೇಕಾಗುತ್ತದೆ. ನಮ್ಮ ಕಪ್ಪು ಮುಖದ ಮಗುವಿನಂಥ ರಾಮುವಿನಲ್ಲಿ ಇನ್ನೂ ಸಾಕಷ್ಟು ಜೀವನದ್ರವ್ಯ ಇದೆಯೆಂದು ಆಶಿಸೋಣ. ಈತನ ನೋವಿನಲ್ಲಿ ಭಾಗಿಗಳಾಗೋಣ. ನಮ್ಮ ರಾಮು ತನ್ನ ಸ್ಪರ್ಧೆಯಲ್ಲಿ ಸೋತರೂ ಅದಕ್ಕಿರುವ ನಿಜವಾದ ಗೆಲುವಿನ ಬಗ್ಗೆ ಆಶಾವಾದಿಗಳಾಗೋಣ. ರಾಮುವಿನ ಬಗ್ಗೆ ಬರೆಯುವಾಗ ನನ್ನಲ್ಲಿ ವ್ಯಂಗ್ಯ ಸತ್ತು ಕಣ್ಣಂಚಿನಲ್ಲಿ ನೀರು ಕಾಣಿಸಿಕೊಳ್ಳುತ್ತಿದೆ. ಇದು ಖಂಡಿತ ಕರುಣೆ ಅಥವಾ ತೊಟ್ಟಿ ಅನುಕಂಪದ್ದಲ್ಲ. ಈ ಗಾಂಧೀಜಿಯ ನೆಲದ ಅನ್ಯಾಯ ದಿಂದ ಹೊರಟದ್ದು.”

– ಪಿ.ಲಂಕೇಶ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ

ಜಸ್ಟಿಸ್‌ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ...

ಮತದಾರ ಪಟ್ಟಿ ಅಳಿಸಿ ತಪ್ಪಿಸಿಕೊಳ್ಳುತ್ತಿರುವ ಆಯೋಗ: ದೇಶದ ಪ್ರತಿಯೊಬ್ಬರೂ ಕೂಡ ಪ್ರಶ್ನೆಗೆ ಅರ್ಹರು

ದೇಶದ ಜನತೆ ಜಾಗೃತರಾಗಿ, ಈ ಅಸಮರ್ಪಕತೆಗಳ ವಿರುದ್ಧ ಧ್ವನಿ ಎತ್ತಿದರೆ ಮಾತ್ರ...

ಪೆಟ್ರೋಲ್‌ಗೆ ಇಥೆನಾಲ್ ಮಿಶ್ರಣ: ಪರಿಸರಕ್ಕೆ ಚೂರು ಲಾಭ, ವಾಹನಗಳಿಗೆ ಹೆಚ್ಚು ಅಪಾಯಕಾರಿ

ಇ20 ಮಿಶ್ರಣವು ಪರಿಸರಕ್ಕೆ ಒಂಚೂರು ಲಾಭದಾಯಕವಾದರೂ, ವಾಹನಗಳಿಗೆ ಅದರಲ್ಲೂ ಹಳೆಯ ಮಾದರಿ...

ಹೊಸ ಆದಾಯ ತೆರಿಗೆ ಮಸೂದೆ 2025: ಬದಲಾವಣೆಗಳು – ಅನಾನುಕೂಲಗಳು ಏನೇನು?

ನೂತನ ಮಸೂದೆಯು ಹಳೆಯ ಕಾಯ್ದೆಯನ್ನು ಸಂಪೂರ್ಣವಾಗಿ ಬದಲಿಸುವ ಗುರಿ ಹೊಂದಿದ್ದು, ತೆರಿಗೆ...

Download Eedina App Android / iOS

X