ಸದನದ ನಿತ್ಯ ವ್ಯವಹಾರ ಮುಂದೂಡಿ, ತುರ್ತು ವಿಷಯ ಚರ್ಚಿಸಿ; ಕಾಂಗ್ರೆಸ್ ನಾಯಕರ ನಿರ್ಣಯ ಮಂಡನೆ

Date:

  • ಭಾರತ-ಚೀನಾ ಗಡಿ ವಿವಾದದ ಬಗ್ಗೆ ಚರ್ಚಿಸುವಂತೆ ಒತ್ತಾಯ
  • ಬಿಜೆಪಿಯ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದ ಕಾಂಗ್ರೆಸ್‌

ಲೋಕಸಭೆಯಲ್ಲಿ ತುರ್ತು ವಿಷಯಗಳ ಕುರಿತು ಚರ್ಚಿಸಲು ಸದನದ ಇತರೆ ವ್ಯವಹಾರಗಳನ್ನು ಮುಂದೂಡುವಂತೆ ಇಬ್ಬರು ಕಾಂಗ್ರೆಸ್ ನಾಯಕರು ನಿರ್ಣಯ ಮಂಡಿಸಿದ್ದಾರೆ.

- Advertisement -

ಲೋಕಸಭೆಯ ಸದನದಲ್ಲಿ ಪ್ರಮುಖ ತುರ್ತು ವಿಷಯಗಳ ಕುರಿತು ಚರ್ಚಿಸಬೇಕು ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಮತ್ತು ಮನೀಶ್ ತಿವಾರಿ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ಸದನದ ವ್ಯವಹಾರ ಮುಂದೂಡಿಕೆಯ ನಿರ್ಣಯ ಮಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

“ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ 18 ನಾಯಕರಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿಲ್ಲ. ಇದು ಭಾರತೀಯ ಪ್ರಜಾಪ್ರಭುತ್ವಕ್ಕೆ ಒಡ್ಡಿದ ಅಪಾಯವಾಗಿದೆ. ಈ ಕುರಿತು ಸದನದಲ್ಲಿ ಚರ್ಚಿಸಬೇಕು” ಎಂದು ಮಾಣಿಕಂ ಟ್ಯಾಗೋರ್ ನಿರ್ಣಯ ಮಂಡಿಸಿದ್ದಾರೆ.

“ರಾಹುಲ್ ಗಾಂಧಿ ಅವರು ಉದ್ಯಮಿ ಗೌತಮ್ ಅದಾನಿ ದೇಶಕ್ಕೆ ಮಾಡಿರುವ ಮೋಸದ ಬಗ್ಗೆ ಮಾತನಾಡಲು ಇಚ್ಚಿಸಿದ್ದರು. ಸಂಸದೀಯ ಜಂಟಿ ಸಮಿತಿಯ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದರು. ಆದರೆ, ಕೇಂದ್ರ ಸರ್ಕಾರ ಅವರ ಧ್ವನಿ ಅಡಗಿಸಲು ರಾಹುಲ್ ಗಾಂಧಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ” ಎಂದು ಹೇಳಿದ್ದಾರೆ.

“ಈ ಸದನದಲ್ಲಿ ಉತ್ತರ ನೀಡುವಂತೆ ಸದನವೂ ಪ್ರಧಾನಿಯನ್ನು ಒತ್ತಾಯಿಸಬೇಕು. ಕಾರ್ಪೊರೇಟ್‌ ವಸಾಹತುಶಾಹಿಯ ಪುನರಾವರ್ತನೆಯಿಂದ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ. ಆದ್ದರಿಂದ ಸದನದ ದಿನನಿತ್ಯದ ವ್ಯವಹಾರಗಳನ್ನು ಬದಿಗಿಟ್ಟು ಚರ್ಚಿಸುವುದು ಸೂಕ್ತ” ಎಂದು ಮನವಿ ಮಾಡಿಕೊಂಡಿದ್ದಾರೆ.

ತುರ್ತು ವಿಷಯಗಳ ಕುರಿತು ಚರ್ಚಿಸುವ ನಿರ್ಣಯ ಮಂಡಿಸಿರುವ ಮನೀಶ್ ತಿವಾರ ಕೆಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

“2020ರಿಂದ ಚೀನಾ ಭಾರತದೊಳಗೆ ಭೂಹಗರಣ ನಡೆಸುತ್ತಿದೆ. ಭಾರತ ಮತ್ತು ಚೀನಾ ಕಮಾಂಡರ್‌ಗಳ ನಡುವೆ ಹದಿನೇಳು ಸುತ್ತಿನ ಮಾತುಕತೆ ನಡೆದಿವೆ. ಆದರೆ, ದೊರೆತಿದ್ದು ಅಲ್ಪ ಯಶಸ್ಸು ಮಾತ್ರ. ಚೀನಾ ತನ್ನ ಸೈನಿಕರಿಗೆ ಸೇತುವೆಗಳು, ರಸ್ತೆಗಳು ಮತ್ತು ವಸತಿ ಸೇರಿದಂತೆ ಗಮನಾರ್ಹ ಮೂಲಸೌಕರ್ಯಗಳನ್ನು ನಿರ್ಮಿಸುವುದನ್ನು ಮುಂದುವರೆಸಿದೆ. ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಚೀನಾ ಪ್ರಯತ್ನಿಸುತ್ತಿದೆ ಈ ಕುರಿತು ಸದನದಲ್ಲಿ ತುರ್ತಾಗಿ ಚರ್ಚಿಸಬೇಕು” ಎಂದಿದ್ದಾರೆ.

“ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಮತ್ತು ಚೀನಾದೊಂದಿಗಿನ ಗಡಿ ಪರಿಸ್ಥಿತಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ವಿವರವಾದ ಚರ್ಚೆ ನಡೆಸಬೇಕೆಂದು ನಾನು ಒತ್ತಾಯಿಸುತ್ತೇನೆ. ನಾನು ಈ ಮೂಲಕ, ಈ ವಿಷಯವನ್ನು ಪ್ರಸ್ತಾಪಿಸಲು ಅನುಮತಿ ಕೇಳುತ್ತೇನೆ” ಎಂದು ಪತ್ರ ಬರೆದಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...