ವರ್ಗಾವಣೆ ದಂಧೆಯಲ್ಲಿ ₹500 ಕೋಟಿ ವಹಿವಾಟು : ಸರ್ಕಾರದ ವಿರುದ್ಧ ಕುಮಾರಸ್ವಾಮಿ ಸಿಡಿಸಿದ ಬಾಂಬ್‌

Date:

Advertisements

ಕಾಂಗ್ರೆಸ್ ಸರ್ಕಾರ ಬಂದ ಬಳಿಕ ವರ್ಗಾವಣೆ ದಂಧೆಯಲ್ಲಿ ₹500 ಕೋಟಿ ವಹಿವಾಟು ನಡೆಸಲಾಗಿದೆ. ಈ ಬಗ್ಗೆ ನನಗೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಆರೋಪ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿರುವ ಜೆಡಿಎಸ್ ಮುಖಂಡ, ಕಳೆದ ಎರಡು ತಿಂಗಳಲ್ಲಿ ವರ್ಗಾವಣೆಯ ವಿಚಾರವಾಗಿ ₹500 ಕೋಟಿಗೂ ಹೆಚ್ಚಿನ ವ್ಯವಹಾರ ನಡೆದಿದೆ. ನಾನು ಇದನ್ನು ಊಹೆ ಮಾಡಿ ಹೇಳುತ್ತಿಲ್ಲ. ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈ ಮಟ್ಟಕ್ಕೆ ಆದರೆ ರಾಜ್ಯ ಉಳಿಯುತ್ತಾ? ಇವುಗಳಿಗೆಲ್ಲ ಎಲ್ಲಿಂದ ಸಾಕ್ಷಿ ತಗೊಂಡು ಬರ್ತಿರಾ ಎಂದು ಪ್ರಶ್ನಿಸಿದರು.

Advertisements

“2008ರಿಂದ 2013ರವರೆಗೆ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮವಾಗಿ ₹600 ಕೋಟಿ ವೆಚ್ಚದ ಕಾಮಗಾರಿಗಳು ನಡೆದಿವೆ. ಇದೇ ಸಿದ್ದರಾಮಯ್ಯ ಮತ್ತು ಮಹದೇವಪ್ಪನವರು ವಿರೋಧ ಪಕ್ಷದಲ್ಲಿ ಚರ್ಚೆ ಮಾಡ್ತಾರೆ. ಸದನ ಸಮಿತಿಯ ರಚನೆಯಾಗಿ ಅದರ ವರದಿಯೂ ಬಂದಿತ್ತು. ಆದರೆ ವರದಿಯಲ್ಲಿದ್ದ ಅಧಿಕಾರಿಗಳಿಗೆ ಪದೋನ್ನತಿ ಕೊಟ್ಟದ್ದು ನಾನಲ್ಲ. ಕಪ್ಪ ಕಾಣಿಕೆಗಳು ಹೇಗೆಲ್ಲ ನಡೀತಿತ್ತು ಎನ್ನುವುದು ಗೊತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ನೋಡಿದರೆ ಗೊತ್ತಾಗುತ್ತದೆ. ಏನೆಲ್ಲ ರಾದ್ಧಾಂತ ಆಗಿದೆ ಅನ್ನುವುದು ಪತ್ರಿಕೆ ನೋಡಿದರೆ ಗೊತ್ತಾಗುತ್ತದೆ. ಅದ್ಯಾರೋ ಪಾಯಲ್ ಅಂತ ನೇಮಕವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಸಂಬಂಧಿಕರಿದ್ದಾರಂತೆ. ಅವರು ಯಾರು ಅಂತ ನನಗೆ ಗೊತ್ತಿಲ್ಲ. ಸರ್ವರಿಗೂ ಸಮಪಾಲು, ಸರ್ವ ಜನಾಂಗದ ಶಾಂತಿಯ ತೋಟ ಎಂದು ಸಿಎಂ ಹೇಳುತ್ತಿದ್ದಾರೆ. ಇವರ ಸಿದ್ದಾಂತ ನೋಡಿದರೆ ಗೊತ್ತಾಗುತ್ತದೆ ಎಂದು ವ್ಯಂಗ್ಯವಾಗಿ ಹೇಳಿದರು.

ಹೆಸರನ್ನು ಎತ್ತದೆ ಪರೋಕ್ಷವಾಗಿ ಶಾಸಕರೋರ್ವರ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ, ಒಬ್ಬರು ಮಜ್ಜಿಗೆ ಮಾರುತ್ತಿದ್ದರು. ಆಮೇಲೆ ಜಿ.ಪಂ. ಸದಸ್ಯರಾದರು. ಆಮೇಲೆ ತಮ್ಮನನ್ನು ಬಿಟ್ಟುಕೊಂಡು ಗುತ್ತಿಗೆ ಮಾಡುತ್ತಿದ್ದರು. ಆಮೇಲೆ ಶಾಸಕರಾದರು. ಅವರು ಟವೆಲ್ ಕೊಡವಿದ್ರೆ ಹಣ ಉದುರುತ್ತದೆ. ಹೀಗಂತ ಅಧಿಕಾರಿಗಳೇ ಹೇಳುತ್ತಿದ್ದರು ಎಂದರು.

ಎನ್​ಡಿಎ ಮೈತ್ರಿ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನನಗೆ ಯಾರೂ ಕರೆ ಕೂಡ ಮಾಡಿಲ್ಲ. ಅದೇ ರೀತಿಯಾಗಿ ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಮಹತ್ವದ ಸಭೆಗೆ ಜೆಡಿಎಸ್​ಗೆ ಆಹ್ವಾನ ನೀಡಿಲ್ಲ ಎಂದಿದ್ದಾರೆ.

ಮಹಾಘಟಬಂಧನ್​ ಸಭೆಗೆ ಕಾಂಗ್ರೆಸ್​ ಹಲವು ಪಕ್ಷಗಳ ನಾಯಕರಿಗೆ ಆಹ್ವಾನಿಸಿದ್ದಾರೆ. ಜೆಡಿಎಸ್​​​ ವಿಸರ್ಜನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಪಂಚರತ್ನ ಜಾರಿ ಮಾಡದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ, ಹಾಗಾಗಿ ಒಂದು ಅವಕಾಶ ಕೊಡಿ ಎಂದು ಜನರಲ್ಲಿ ಕೇಳಿದ್ದೆ. ಸಿದ್ದರಾಮಯ್ಯ ಅವರನ್ನು ಕನ್ನಡ ಪಂಡಿತರು ಎಂದು ತಿಳಿದುಕೊಂಡಿದ್ದೆ. ಆದರೆ, ಅವರಿಗೆ ಕನ್ನಡ ಅರ್ಥ ಆಗಲ್ಲ ಅನ್ನಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X