ಬ್ರೇಕಿಂಗ್ ನ್ಯೂಸ್ | ಅಧಿವೇಶನದಲ್ಲಿ ಅಸಭ್ಯ ವರ್ತನೆ : 10 ಬಿಜೆಪಿ ಶಾಸಕರು ಅಮಾನತು

Date:

Advertisements

ಸದನದ ಬಾವಿಯಲ್ಲಿ ಧರಣಿ ನಡೆಸಿ, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ವಿಧೇಯಕ ಪ್ರತಿಗಳನ್ನು ಹರಿದು ಪೀಠಕ್ಕೆ ಎಸೆದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆದೇಶಿಸಿದ್ದಾರೆ.

ಅಧಿವೇಶನ ಮುಗಿಯುವವರೆಗೂ ಭಾಗವಹಿಸದಂತೆ ಅಮಾನತು ಮಾಡಲಾಗಿದೆ. ಅಸಭ್ಯ ನಡವಳಿಕೆ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಸದನದಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ. ಡಾ.ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶ್ಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ವೈ ಭರತ್ ಶೆಟ್ಟಿ ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ.

Advertisements

ಜುಲೈ 21ರವರೆಗೆ ಅಧಿವೇಶನ ನಡೆಯಲಿದೆ.

ಘಟನೆಯ ಹಿನ್ನೆಲೆ

ಇಂದಿನ (ಜು.19) ನಡೆದ ವಿಧಾನಸಭಾ ಅಧಿವೇಶನ ಕಲಾಪದಲ್ಲಿ ಬಿಜೆಪಿ ಸದಸ್ಯರು ಸಚಿವರು ಮಂಡಿಸಿದ ಐದು ವಿಧೇಯಕ ಪ್ರತಿಗಳನ್ನು ಹರಿದು ಸ್ಪೀಕರ್ ಪೀಠಕ್ಕೆ ಎಸೆದ ಘಟನೆ ನಡೆಯಿತು.

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿರೋಧ ಪಕ್ಷಗಳ ಸಭೆಗೆ ಆಗಮಿಸಿದ್ದ ಗಣ್ಯರಿಗೆ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ನಿಯೋಜನೆ ವಿಚಾರವಾಗಿ ಬೆಳಿಗ್ಗೆಯಿಂದಲೇ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಗಲಾಟೆ ಮಾಡಲು ಆರಂಭಿಸಿದರು.

ನಂತರ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಸದನವನ್ನು ಕೆಲ ಕಾಲ ಮುಂದೂಡಿದ್ದರು. ಮತ್ತೆ ಆರಂಭವಾದ ಸದನದಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆ ಹಿಂಪಡೆಯದೆ ಜೋರು ಧ್ವನಿಯಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರು. ಸಭಾಧ್ಯಕ್ಷರು ವಿನಂತಿಸಿಕೊಂಡರು ಪ್ರತಿಪಕ್ಷಗಳ ಸದಸ್ಯರು ತಮ್ಮ ಆಸನಗಳಿಗೆ ತೆರಳಲಿಲ್ಲ.

ಈ ವೇಳೆ ಸದನ ನಡೆಯಲು ಸಭಾಧ್ಯಕ್ಷರು ಅವಕಾಶ ಮಾಡಿಕೊಟ್ಟರು. ಬಿಜೆಪಿ ಸದಸ್ಯರ ಗಲಾಟೆ ನಡುವೆಯೇ ಎಚ್‌ ಕೆ ಪಾಟೀಲ್‌, ಕೃಷ್ಣಭೈರೇಗೌಡ ಅವರು ಐದು ವಿಧೇಯಕ ಮಂಡಿಸಿದರು. ಗಲಾಟೆ ನಡುವೆಯೇ ಐದು ಮಸೂದೆಗಳನ್ನು ಸದನದಲ್ಲಿ ಅಂಗೀಕರಿಸಲಾಯಿತು.
ಸದನದ ಬಾವಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಧರಣಿ ಹಿನ್ನೆಲೆಯಲ್ಲಿ ಭೋಜನ ವಿರಾಮ ರದ್ದುಪಡಿಸಿ ಕಲಾಪ ಮುಂದುವರಿಸಿದ ಸ್ಪೀಕರ್ ಯು ಟಿ ಖಾದರ್, ಬಳಿಕ ಸದನ ನಡೆಸುವಂತೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೂಚಿಸಿದರು. ‍ಪೀಠ ಸ್ವೀಕರಿಸಿದ ಬಳಿ ಬಜೆಟ್ ಮೇಲಿನ ಚರ್ಚೆಯನ್ನು ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮುಂದುವರಿಸಿದರು.

ಈ ವೇಳೆ ಸದನದ ಬಾವಿಯಲ್ಲಿ ಧರಣಿ ಮುಂದುವರಿಸಿದ ಬಿಜೆಪಿ ಶಾಸಕರು, ಏಕಾಏಕಿ ಮಸೂದೆಯ ಪ್ರತಿಗಳನ್ನು ಹರಿದು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ಎಸೆದರು. ಇದಕ್ಕೆ ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಕಿಡಿಕಾರಿದರು.

“ಜನಪ್ರತಿನಿಧಿಗಳಾಗಿ ಈ ರೀತಿ ವರ್ತಿಸುತ್ತಿರುವುದು ಸರಿಯಲ್ಲ. ನಿಮಗೆ ಗೌರವ ತರುವಂಥದ್ದಲ್ಲ ಎಂದು ಆಕ್ರೋಶ ಹೊರಹಾಕಿ, ಕೂಡಲೇ ಬಿಜೆಪಿ ಶಾಸಕರನ್ನು ಕಲಾಪದಿಂದ ಹೊರಹಾಕುವಂತೆ ಮಾರ್ಷಲ್‌ಗಳಿಗೆ ಸೂಚಿಸಿದರು. ಇದೇ ವೇಳೆ ಉಪ ಸ್ಪೀಕರ್‍‌ಗೆ ರಕ್ಷಣೆ ಕೊಡದ ಮಾರ್ಷಲ್‌ಗಳ ವಿರುದ್ಧ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಕಾಂಗ್ರೆಸ್ ಸದಸ್ಯರು ಕಿಡಿಕಾರಿದರು.

ಬಳಿಕ ಸಭೆಯನ್ನು ಮೂರು ಗಂಟೆಯವರೆಗೆ ಉಪ ಸಭಾಧ್ಯಕ್ಷರು ಮುಂದೂಡಿದರು. ಆ ಬಳಿಕವೂ ಕೆಲ ನಿಮಿಷಗಳವರೆಗೆ ಬಿಜೆಪಿ-ಕಾಂಗ್ರೆಸ್ ಶಾಸಕರ ನಡುವೆ ವಾಗ್ವಾದ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ತಲೆಬರಹ ( ಶೀರ್ಷಿಕೆ) ಇರೋದೆ ಬೇರೆ, ಒಳಗೆ ಸುದ್ದಿ ಇರೋದೆ ಬೇರೆ, ಸರಿಪಡಿಸಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X