ಕಾಡಾನೆ ದಾಳಿ | ಮೃತ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

Date:

Advertisements
  • ಕಾಡಾನೆ ಹಾವಳಿ ತಪ್ಪಿಸುವ ಸಂಬಂಧ ಅಧಿಕಾರಿಗಳೊಂದಿಗೆ ತುರ್ತು ಸಭೆ
  • ಕಾಡಾನೆ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಸೂಚನೆ 

ಕಾಡಾನೆಗಳನ್ನು ವಾಪಸ್ ಕಾಡಿಗೆ ಕಳುಹಿಸಿ, ಹಾವಳಿ ತಪ್ಪಿಸುವ ಸಂಬಂಧ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು ಮುಖ್ಯಮಂತ್ರಿ ಸಿದ್ದರಾಮಯ್ಯ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಬುಧವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು ತಕ್ಷಣ 15 ಲಕ್ಷ ರೂ ಪರಿಹಾರದ ಚೆಕ್ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿದರು.

Advertisements

ಪಟ್ಟಣಕ್ಕೆ ಬಂದಿರುವ ಕಾಡಾನೆಗಳನ್ನು ವಾಪಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ.

“ಮೃತ ಮೀನಾ ಅವರ ಮೃತದೇಹ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಜತೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕಾಡಾನೆ ಹಾವಳಿ ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಲು ಸಚಿವ ಖಂಡ್ರೆ ಸೂಚನೆ

“ಅರಣ್ಯ ಸಚಿವರೂ ಇಲ್ಲಿಗೆ ಬಂದು ಸುದೀರ್ಘ ಸಭೆ ನಡೆಸಿ ರಕ್ಷಣಾ ಕಾರ್ಯಗಳ ಕುರಿತಾಗಿ ಕ್ರಮ ಕೈಗೊಳ್ಳುತ್ತಾರೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಾಫಿ ತೋಟಗಳು ಇರುವುದರಿಂದ ಕಾಡಾನೆಗಳು ಬರುತ್ತಿವೆ. ರೈಲ್ವೇ ಫೆನ್ಸಿಂಗ್ ಹಾಕುವುದೂ ಸೇರಿ ಅಗತ್ಯ ಕ್ರಮಗಳ ಕುರಿತು ಟಾಸ್ಕ್ ಫೋರ್ಸ್ ಗೆ ಸ್ಪಷ್ಟ ಸೂಚನೆ ನೀಡಲು ಅರಣ್ಯ ಸಚಿವರ ಜತೆ ಚರ್ಚಿಸಿದ್ದೇನೆ” ಎಂದು ಮುಖ್ಯಮಂತ್ರಿಗಳು ಇದೇ ವೇಳೆ ತಿಳಿಸಿದ್ದಾರೆ.

“ಕಾಡಾನೆಗಳಿಗೆ ಗುಂಡು ಹೊಡೆದು ಕೊಲ್ಲಬೇಕು ಎನ್ನುವ ಸ್ಥಳೀಯರ ಮತ್ತು ಪ್ರತಿಭಟನಾಕಾರರ ಒತ್ತಾಯದ ಕುರಿತಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಆ ಹಂತಕ್ಕೆ ಯೋಚನೆ ಮಾಡುವುದು ಬೇಡ. ಇತರೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X