ಕೇರಳ ಅಧಿವೇಶನ | ಮೀನು, ತರಕಾರಿ ಬೆಲೆ ಏರಿಕೆಗೆ ಖಂಡನೆ; ಪ್ರತಿಪಕ್ಷಗಳಿಂದ ಸಭಾತ್ಯಾಗ

Date:

Advertisements

ಕೇರಳದಲ್ಲಿ ವಿಧಾನಭಾ ಅಧಿಕವೇಶ ನಡೆಯುತ್ತಿದ್ದು, ಬೆಲೆ ಏರಿಕೆ ತಡೆಯುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿವೆ. ಹಣದುಬ್ಬರವು ರಾಷ್ಟ್ರೀಯ ಸಮಸ್ಯೆಯಾಗಿದ್ದು, ಮಾರುಕಟ್ಟೆಯ ಮಧ್ಯಪ್ರವೇಶದಿಂದಾಗಿ ಹಣದುಬ್ಬರವನ್ನು ಕಡಿಮೆ ಮಾಡಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಿ.ಆರ್ ಅನಿಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಆಹಾರ ಉತ್ಪನ್ನಗಳ ಬೆಲೆಯೇರಿಕೆ ತನ್ನ ಗಮನಕ್ಕೆ ಬಂದಿಲ್ಲ ಎಂದು ಸಚಿವ ಅನಿಲ್ ವಿಧಾನಸಭೆಯಲ್ಲಿ ಹೇಳಿದ್ದು ಪ್ರತಿಪಕ್ಷಗಳನ್ನು ಕೆರಳಿಸಿತು. ಕಾಂಗ್ರೆಸ್ ಮುಖಂಡ, ವಿಪಕ್ಷ ನಾಯಕ ವಿ.ಡಿ ಸತೀಶನ್ ಅವರು ಎಲ್‌ಡಿಎಫ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಲ್‌ಡಿಎಫ್ ಸರ್ಕಾರವು ಬೆಲೆ ಏರಿಕೆ ಸಮಸ್ಯೆಯ ಗಂಭೀರತೆಯನ್ನು ಯಾಕೆ ಅರ್ಥಮಾಡಿಕೊಳ್ಳುತ್ತಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

“ಇತ್ತೀಚಿನ ದಿನಗಳಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿರುವುದರಿಂದ ಮಲಯಾಳಿಗಳು ಬೆಂಡೆಕಾಯಿ, ನುಗ್ಗೆ ಕಾಯಿ ಮತ್ತು ಟೊಮೇಟೊ ಖರೀದಿಸುವುದು ಕಷ್ಟವಾಗಿದೆ” ಎಂದು ಕಾಂಗ್ರೆಸ್‌ ಶಾಸಕ ರೋಜಿ ಎಂ ಜಾನ್ ಆರೋಪಿಸಿದ್ದಾರೆ.

Advertisements

”ತರಕಾರಿ, ಮೀನು, ಮಾಂಸ, ಮೊಟ್ಟೆ ಬೆಲೆ ದುಪ್ಪಟ್ಟಾಗಿದೆ. ಜನ ಮಾರುಕಟ್ಟೆಗೆ ಹೋಗುವುದೇ ಕಷ್ಟವಾಗಿದೆ. ಎಲ್‌ಡಿಎಫ್ ಸರ್ಕಾರ ಕೋಳಿ ಮಾಂಸವನ್ನು ಪ್ರತಿ ಕಿ.ಲೋ.ಗೆ 85 ರೂ.ನಂತೆ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಆ ಭರವಸೆಯನ್ನು ಸರ್ಕಾರ ಪೂರೈಸಿಲ್ಲ. ವಾಸ್ತವವಾಗಿ, ಜನರು ಈ ಬೆಲೆಯಲ್ಲಿ ಕೋಳಿ ಕಾಲನ್ನೂ ಪಡೆಯಲು ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆ ನಿಯಂತ್ರಿಸಲು ಮಾರುಕಟ್ಟೆ ಮಧ್ಯಸ್ಥಿಕೆಗಾಗಿ ರಾಜ್ಯ ಸರ್ಕಾರವು ಯಾವುದಾರರೂ ರೀತಿಯಲ್ಲಿ ಹಣಕಾಸಿನ ಪ್ರಯೋಜನಗಳನ್ನು ಒದಗಿಸುತ್ತಿದೆಯೇ ಎಂದು ತಿಳಿದುಕೊಳ್ಳಲು ನಾನು ಉತ್ಸುಕನಾಗಿದ್ದೇನೆ” ಎಂದು ಕಿಡಿಕಾರಿದ್ದಾರೆ.

“ಎಲ್‌ಡಿಎಫ್ ಆಡಳಿತದಲ್ಲಿ ಹಣದುಬ್ಬರವು 50% ರಿಂದ 200%ವರೆಗೆ ಏರಿಕೆಯಾಗಿದೆ. ಹಣದುಬ್ಬರ ಕುರಿತು ಪ್ರತಿಪಕ್ಷಗಳ ಪ್ರಸ್ತಾಪವಾದಾಗ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಪಡಿತರ ಅಂಗಡಿಗಳಿಂದ ಅಕ್ಕಿ ವಿತರಿಸುವ ಬಗ್ಗೆ ಉತ್ತರ ನೀಡಿರುವುದು ದುರದೃಷ್ಟಕರ. ನಾವು ತರಕಾರಿಗಳು ಮತ್ತು ಇತರ ಅಗತ್ಯ ವಸ್ತುಗಳ ಬೆಲೆಗಳ ಏರುತ್ತಿರುವ ಬಗ್ಗೆ ವಿವಿಧ ಮಾರುಕಟ್ಟೆಗಳಿಂದ ಮಾಹಿತಿ ಸಂಗ್ರಹಿಸಿದ್ದೇವೆ,” ಎಂದು ವಿಪಕ್ಷ ನಾಯಕ ಸತೀಶನ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X