ಸದನಕ್ಕೆ ಅಡ್ಡಿ | ಬಿಜೆಪಿಯ 18 ಸದಸ್ಯರು 6 ತಿಂಗಳು ಅವಧಿಗೆ ಅಮಾನತು, ಸಭಾಧ್ಯಕ್ಷರಿಂದ ರೂಲಿಂಗ್‌

Date:

Advertisements

ವಿಧಾನಸಭೆಯ ಅಧಿವೇಶನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಸಭಾಧ್ಯಕ್ಷ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ.

ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಮುತ್ತಿಗೆ ಹಾಕಿ, ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 18 ಶಾಸಕರನ್ನು ಅಮಾನತು ಮಾಡಲಾಗಿದ್ದು, ಈ ಶಾಸಕರು ಅರು ತಿಂಗಳೊಳಗೆ ನಡೆಯುವ ಯಾವುದೇ ಅಧಿವೇಶನದಲ್ಲಿ ಭಾಗಿಯಾಗುವಂತಿಲ್ಲ.

“ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗದು. ಪೀಠಕ್ಕೆ ಅಗೌರವ ತೋರಿದ್ದೀರಿ. ನಿಮ್ಮನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ” ಎಂದು ಸ್ಪೀಕರ್​ ಯುಟಿ ಖಾದರ್ ಅವರು ಒಬ್ಬೊಬ್ಬರ ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್ ಅವರು ಅವರನ್ನು ಎತ್ತಿಕೊಂಡು ಹೊರಹಾಕಿದರು.

Advertisements

ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಹನಿಟ್ರ್ಯಾಪ್ ಆರೋಪ ಮತ್ತೆ ಸದನದಲ್ಲಿ ಪ್ರತಿಧ್ವನಿಸಿತು. ಪ್ರತಿಪಕ್ಷದವರು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. ಕಲಾಪ ನಡೆಸಲು ಅವಕಾಶ ಕೊಡಿ ಎಂದು ಖಾದರ್ ಅವರು ಮನವಿ ಮಾಡಿಕೊಂಡರೂ ಪಟ್ಟು ಬಿಡಲಿಲ್ಲ. ಗದ್ದಲ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕಲಾಪ ಮುಂದೂಡಲಾಗಿತ್ತು. ಮತ್ತೆ ಸಂಜೆ 4.10ಕ್ಕೆ ಕಲಾಪ ಆರಂಭವಾಯಿತು.

ಸಭಾಧ್ಯಕ್ಷರ ಪೀಠದ ಗೌರವಕ್ಕೆ 18 ಶಾಸಕರನ್ನು ಆರು ತಿಂಗಳ ಅವಧಿಗೆ ಸದನದಿಂದ ಅಮಾನತು ಮಾಡುವಂತೆ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅವರು ಪ್ರಸ್ತಾವ ಮಂಡಿಸಿದರು. ಅದನ್ನು ಸ್ಪೀಕರ್ ಧ್ವನಿಮತಕ್ಕೆ ಹಾಕಿದರು. ಗದ್ದಲದ ಮಧ್ಯೆಯೇ ಧ್ವನಿಮತದ ಮೂಲಕ ನಿರ್ಣಯ ಅಂಗೀರಿಸಲಾಯಿತು.

ಅಮಾನತುಗೊಂಡ ಸದಸ್ಯರು

  1. ಡಾ. ಸಿ.ಎನ್. ಅಶ್ವಥನಾರಾಯಣ
  2. ಎಸ್.ಆರ್. ವಿಶ್ವನಾಥ್
  3. ದೊಡ್ಡನಗೌಡ ಪಾಟೀಲ
  4. ಶರಣು ಸರಲಗರ
  5. ಡಾ. ಚಂದ್ರು ಲಮಾಣಿ
  6. ಮುನಿರತ್ನ
  7. ಧೀರಜ್ ಮುನಿರಾಜು
  8. ಬಿ.ಎ. ಬಸವರಾಜ್
  9. ಎಂ. ಆರ್. ಪಾಟೀಲ್
  10. ಚನ್ನಬಸಪ್ಪ
  11. ಬಿ. ಸುರೇಶಗೌಡ
  12. ಉಮಾನಾಥ ಎ. ಕೋಟ್ಯಾನ್
  13. ಸಿ.ಕೆ. ರಾಮಮೂರ್ತಿ
  14. ಬಿ.ಬಿ ಹರೀಶ್
  15. ಡಾ. ವೈ. ಭರತ್ ಶೆಟ್ಟಿ
  16. ಬಸವರಾಜ ಮತ್ತಿಮೂಡ್
  17. ಡಾ. ಶೈಲೇಂದ್ರ ಬೆಲ್ದಾಳೆ
  18. ಯಶಪಾಲ್ ಎ. ಸುವರ್ಣ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X