ಜಪ್ತಿಯಾದ 2 ಕೋಟಿ ರೂ. ಬಿಜೆಪಿಗೆ ವಾಪಸ್‌; ಅಧಿಕಾರಿಗಳ ಮೇಲೆ ಕೃಷ್ಣ ಬೈರೇಗೌಡ ಗರಂ

Date:

Advertisements

“ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು ಮನ್ನಾ ಮಾಡ್ತೀರ?” ಎಂದು ಅಧಿಕಾರಿಗಳನ್ನು ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ

ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಂಡು ಇಡೀ ವ್ಯವಸ್ಥೆಯನ್ನೇ ಅವಮಾನಿಸುವ ರೀತಿ ಚುನಾವಣೆ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಈ ಗೋಲ್‌ಮಾಲ್ ಪ್ರಕರಣವನ್ನು ಚುನಾವಣಾ ಅಧಿಕಾರಿಗಳು ನ್ಯಾಯಯುತ ತನಿಖೆ ನಡೆಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ರೂ. 2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್‌ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಕ್ಲೀನ್ ಚಿಟ್‌ ನೀಡಿ, ಹಣವನ್ನೂ ಬಿಜೆಪಿಗೆ ಹಿಂತಿರುಗಿಸಿದೆ. ಇದು ಹೇಗೆ ಸಾಧ್ಯವಾಯಿತು?” ಎಂದು ಅವರು ಕಟು ಪ್ರಶ್ನೆಗಳನ್ನು ಮುಂದಿಟ್ಟರು.

Advertisements

ಸಿಕ್ಕಿಬಿದ್ದ ಹಣಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಿರುವ ಬಿಜೆಪಿ ಮಾರ್ಚ್‌ 27 ರಂದೇ ರೂ.5 ಕೋಟಿ ಹಣವನ್ನು ಕೆನೆರಾ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ಇಟ್ಟುಕೊಂಡಿರುವುದಾಗಿ ತಿಳಿಸಿದೆ. ಅಲ್ಲದೆ, ಈ ಹಣವನ್ನು ಚುನಾವಣಾ ಖರ್ಚಿಗಾಗಿ ಮೈಸೂರು, ಚಾಮರಾಜನಗರ ಹಾಗೂ ಮಂಗಳೂರಿಗೆ ಕಳುಹಿಸುತ್ತಿರುವುದಾಗಿ ಮಾಹಿತಿ ನೀಡಿದೆ. ಆದರೆ, ಈ ದಾಖಲೆಗಳು ಎಷ್ಟರ ಮಟ್ಟಿಗೆ ಸಾಚಾತನ ಹೊಂದಿವೆ. ನೀತಿ ಸಂಹಿತೆ ನಿರ್ದಿಷ್ಟಗೊಳಿಸಿರುವ ಶೇ.90ರಷ್ಟು ಹಣವನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಖರ್ಚು ಮಾಡಿದ್ದು, ಈ ಬಗ್ಗೆ ಅಧಿಕಾರಿಗಳು ಕನಿಷ್ಟ ತನಿಖೆ ನಡೆಸದೆ ಹೋದದ್ದು ವಿಪರ್ಯಾಸ ಎಂದು ಅವರು ಅಸಮಾಧಾನ ಹೊರಹಾಕಿದರು.

ಅಲ್ಲದೆ, ಕಳೆದ ಒಂದು ತಿಂಗಳಿನಿಂದ ಬಿಜೆಪಿ ಒಂದು ರೂಪಾಯಿಯನ್ನೂ ಚುನಾವಣೆಗಾಗಿ ಖರ್ಚು ಮಾಡಿಲ್ಲವೇ? ಹೀಗೆ ಯಾವುದೋ ಉದ್ದೇಶಕ್ಕೆ ಬ್ಯಾಂಕಿನಿಂದ ಹಣ ಪಡೆದ ದಾಖಲೆಗಳನ್ನು ತೋರಿಸಿದಾಕ್ಷಣ ಅದರ ಸಾಚಾತನದ ಬಗ್ಗೆ ಕಿಂಚಿತ್ತೂ ತನಿಖೆ ನಡೆಸದೆ ಬೆಳಕಿನ ವೇಗದಲ್ಲಿ ಅಧಿಕಾರಿಗಳು ಹಣವನ್ನು ಹಿಂತಿರುಗಿಸಿದ್ದಾರೆ. ಹೀಗೆ ಯಾವುದೋ ದಾಖಲೆಗಳನ್ನು ತೋರಿಸಿ ಕಳ್ಳತನದಿಂದ ಸಿಕ್ಕಿಬಿದ್ದ ಹಣವನ್ನು ಬಿಡಿಸಿಕೊಳ್ಳುವುದಾದರೆ ಚುನಾವಣೆ ಪಾವಿತ್ಯ್ರತೆ ಉಳಿಯುವುದು ಹೇಗೆ ಸಾಧ್ಯ? ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು ಮನ್ನಾ ಮಾಡ್ತೀರ? ಅಧಿಕಾರಿಗಳ ಇಂತಹ ವರ್ತನೆ ಚುನಾವಣೆ ಕಾನೂನು ಅಡಿ ನಡೆಯುತ್ತಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದರು.

ಮುಂದುವರೆದು, “ಐವತ್ತು ಸಾವಿರಕ್ಕೆ ಮೇಲ್ಪಟ್ಟ ಯಾವುದೇ ಹಣದ ವಹಿವಾಟುಗಳು ಬ್ಯಾಂಕ್ ಖಾತೆ ಅಥವಾ ಚೆಕ್ ಮೂಲಕ ನಡೆಯಬೇಕು ಎಂಬ ಕಾನೂನು ಇದೆ. ಚುನಾವಣಾ ಸಂದರ್ಭದಲ್ಲಿ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಹಣದ ವಹಿವಾಟನ್ನು ಚೆಕ್ ಮೂಲಕವೇ ನಡೆಸಬೇಕು ಎಂಬುದನ್ನು ಚುನಾವಣಾ ನೀತಿ ಸಂಹಿತೆಯೇ ಹೇಳುತ್ತದೆ. ಆದರೆ, ಈ ವಿಚಾರ ನಮ್ಮ ಅಧಿಕಾರಿಗಳಿಗೆ ಗೊತ್ತಿಲ್ಲದೆ ಹೋದದ್ದು ದುರಾದೃಷ್ಟಕರ. ಕಾನೂನು ಉಲ್ಲಂಘಿಸಿ ಅಥವಾ ಮುಂಚಿಂತವಾಗಿಯೇ ಮಾಹಿತಿ ನೀಡದೆ ಹೀಗೆ ರೂ.2 ಕೋಟಿ ಹಣವನ್ನು ವರ್ಗಾಯಿಸುತ್ತಿರುವುದು ಮನಿ ಲಾಂಡರಿಂಗ್ ಅಲ್ಲವೇ? ಈ ಬಗ್ಗೆ ಅಧಿಕಾರಿಗಳು ಏಕೆ ಪ್ರಶ್ನಿಸುತ್ತಿಲ್ಲ. ಅಥವಾ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳ ಸಹಾಯದೊಂದಿಗೆ ಹೊಸ ಮನಿ ಲಾಂಡರಿಂಗ್ ನಡೆಸುತ್ತಿದ್ದಾರ?” ಎಂದು ಅವರು ಕಟುವಾಗಿ ಪ್ರಶ್ನಿಸಿದರು.

ಸ್ವಾಭಿಮಾನ ಕಳೆದುಕೊಂಡಿರುವ ಕೆಲವು ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಚುನಾವಣಾ ಅಧಿಕಾರಿಗಳು ಈ ಗೋಲ್‌ಮಾಲ್ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ದೇವೇಗೌಡರಿಗೆ ಟಾಂಗ್

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ ಅವರು, “ದೇವೇಗೌಡರ ಕುಟುಂಬ ಹೇಗಿದ್ದರೂ ಪ್ರಧಾನಿ ಜೊತೆಗೆ ತುಂಬಾ ನಿಕಟವಾಗಿದೆ. ಅಲ್ಲದೆ, ಅವರು ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಕೊಂಡಾಡುತ್ತಿದ್ದಾರೆ. ಹಾಗಾದರೆ ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ” ಎಂದು ಒತ್ತಾಯಿಸಿದ್ದಾರೆ.

“ಕಳೆದ ಬಜೆಟ್‌ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ರೂ.56 ಕೋಟಿ ಘೋಷಿಸಿತ್ತು. ಈ ಪೈಕಿ ಕನಿಷ್ಟ ರೂ.500 ಕೋಟಿಯನ್ನಾದರೂ ಕೊಡಿಸಿ. ದೊಡ್ಡ ಮನಸ್ಸು ಮಾಡಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ. ಸಮುದ್ರಕ್ಕೆ ಸೇರುವ ನೀರನ್ನು ಉಳಿಸಿ ಬೆಂಗಳೂರಿಗೆ ಕುಡಿಯುವ ನೀರನ್ನಾದರೂ ಪೂರೈಸಬಹುದು. ಮಂಡ್ಯದ ರೈತರ ಭೂಮಿಗೂ ನೀರುಣಿಸಬಹುದು” ಎಂದು ಕುಟುಕಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X