ನೂತನ ಸಂಸತ್‌ ಭವನ ಉದ್ಘಾಟನೆ | 25 ಪಕ್ಷಗಳು ಭಾಗವಹಿಸುವ ಸಾಧ್ಯತೆ

Date:

Advertisements

ಕಾಂಗ್ರೆಸ್‌ ಸೇರಿ 19 ಪಕ್ಷಗಳು ಸೇರಿ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿರುವ ನಡುವೆಯೇ ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ಶುಕ್ರವಾರ (ಮೇ 26) ವರದಿ ಮಾಡಿವೆ.

ಭಾನುವಾರ (ಮೇ 28) ನಡೆಯಲಿರುವ ಸಂಸತ್‌ ಭವನದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿರುವುದನ್ನು ಪ್ರತಿಪಕ್ಷಗಳು ವಿರೋಧಿಸಿವೆ.

ಬಿಜೆಪಿ ಸೇರಿ ಕೇಂದ್ರ ಆಡಳಿತ ಒಕ್ಕೂಟವಾದ ನ್ಯಾಷನಲ್‌ ಡೆಮಾಕ್ರಟಿಕ್‌ ಅಲಾಯನ್ಸ್‌ನ (ಎನ್‌ಡಿಎ) 18 ಪಕ್ಷಗಳು ಮತ್ತು ಏಳು ಎನ್‌ಡಿಎಯೇತರ ಪಕ್ಷಗಳು ನೂತನ ಸಂಸತ್‌ ಭವನ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವುದಾಗಿ ಈಗಾಗಲೇ ಪ್ರಕಟಿಸಿವೆ.

Advertisements

ಬಿಎಸ್‌ಪಿ, ಶಿರೋಮಣಿ ಅಕಾಲಿ ದಳ, ಜನತಾ ದಳ (ಜಾತ್ಯತೀತ), ಲೋಕ ಜನಸಕ್ತಿ ಪಕ್ಷ (ರಾಮ್‌ ವಿಲಾಸ್‌), ವೈಎಸ್‌ಆರ್‌ ಕಾಂಗ್ರೆಸ್‌, ಬಿಜೆಡಿ ಮತ್ತು ಟಿಡಿಪಿ ಸಂಸತ್ತಿನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿವೆ.

ಈ ಸುದ್ದಿ ಓದಿದ್ದೀರಾ? ಯೋಗಿ ಸಿಎಂ ಆದ ನಂತರ ರಾಜ್ಯದಲ್ಲಿ 15 ದಿನಕ್ಕೊಂದು ಎನ್‌ಕೌಂಟರ್‌

ಕಾಂಗ್ರೆಸ್‌, ಎಡ, ಟಿಎಂಸಿ, ಎಸ್‌ಪಿ ಮತ್ತು ಎಎಪಿ ಸೇರಿ 19 ಪ್ರತಿಪಕ್ಷಗಳು ಹೊಸ ಸಂಸತ್ತು ಭವನದ ಉದ್ಘಾಟನೆ ಬಹಿಷ್ಕರಿಸಿ ಜಂಟಿ ಹೇಳಿಕೆ ನೀಡಿವೆ.

ನೂತನ ಸಂಸತ್‌ ಭವನ ಕಟ್ಟಡವನ್ನು ಪ್ರಧಾನಿ ಮೋದಿ ಅವರ ಬದಲಿಗೆ ರಾಷ್ಟ್ರಪತಿಗಳು ಉದ್ಘಾಟಿಸಬೇಕು ಎಂದು ಪ್ರತಿಪಕ್ಷಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X