ಲೋಕಸಭಾ ಚುನಾವಣೆ | ಈವರೆಗೆ ಸ್ಪರ್ಧೆಯೇ ಇಲ್ಲದೆ ಗೆದ್ದಿದ್ದಾರೆ 35 ಅಭ್ಯರ್ಥಿಗಳು 

Date:

Advertisements

ಈ ಬಾರಿಯ ಲೋಕಸಭಾ ಚುನವಣೆಯಲ್ಲಿ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗುವ ಎಲ್ಲ ಲಕ್ಷಣಗಳೂ ಇವೆ. ಅವರ ಪ್ರತಿಸ್ಪರ್ಧಿ, ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರವನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದು, ದಲಾಲ್‌ಗೆ ಸ್ಪರ್ಧೆ ಒಡ್ಡುವವರು ಇಲ್ಲದಂತಾಗಿದೆ. ಅವರು ಅವಿರೋಧವಾಗಿ ಗೆದ್ದರೆ, ಬಹುಶಃ, ಬಿಜೆಪಿಯಿಂದ ಸ್ಪರ್ಧಿಸಿ ವಿರೋಧವಾಗಿ ಆಯ್ಕೆಯಾಗಿರುವ ಬಿಜೆಪಿಯ ಮೊದಲ ಅಭ್ಯರ್ಥಿಯೂ ಅವರೇ ಆಗಲಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ, ಸೂರತ್ ಲೋಕಸಭಾ ಕ್ಷೇತ್ರದಲ್ಲಿ ದಲಾಲ್ ಅವರ ಅವಿರೋಧ ಗೆಲುವು ಹತ್ತಿರದಲ್ಲಿದೆ. ಆದರೆ, ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕಾರವನ್ನು ಪ್ರಶ್ನಿಸಿ ಕಾಂಗ್ರೆಸ್‌ ಹೈಕೋರ್ಟ್‌ ಮೆಟ್ಟಿಲೇರಲು ಮುಂದಾಗಿದೆ. ಹೀಗಾಗಿ, ದಲಾಲ್ ಗೆಲುವು ಇನ್ನೂ ಖಾತ್ರಿಯಾಗದೇ ಉಳಿದಿದೆ.

ಒಂದು ವೇಳೆ, ದಲಾಲ್ ಗೆದ್ದರೆ, 1951ರಿಂದ ಈವರೆಗೆ ಸ್ಪರ್ಧೆಯಿಲ್ಲದೆ ಗೆದ್ದವರಲ್ಲಿ 35ನೇ ಸಂಸದರಾಗುತ್ತಾರೆ. ಇದೂವರೆಗೆ 34 ಮಂದಿ ಯಾವುದೇ ಸ್ಪರ್ಧೆ ಇಲ್ಲದೆ ಗೆದ್ದಿದ್ದಾರೆ.

Advertisements

ಕೊನೆಯದಾಗಿ, 2012ರಲ್ಲಿ ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಅವರು ಕನ್ನೌಜ್ ಲೋಕಸಭಾ ಉಪಚುನಾವಣೆಯಲ್ಲಿ ಅವಿರೋಧವಾಗಿ ಗೆದ್ದಿದ್ದರು. ಅವರ ಪತಿ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ, ಸಂಸತ್ತಿಗೆ ರಾಜೀನಾಮೆ ನೀಡಿದ್ದರಿಂದ, ಆಗ ಉಪಚುನಾವಣೆ ನಡೆದಿತ್ತು.

ಸಂಸದೀಯ ಚುನಾವಣೆಯಲ್ಲಿ ಅವಿರೋಧವಾಗಿ ಗೆದ್ದಿರುವರಲ್ಲಿ ವೈ .ಬಿ ಚವಾಣ್, ಫಾರೂಕ್ ಅಬ್ದುಲ್ಲಾ, ಹರೇ ಕೃಷ್ಣ ಮಹತಾಬ್, ಟಿ.ಟಿ ಕೃಷ್ಣಮಾಚಾರಿ, ಪಿ.ಎಂ ಸೈಯದ್ ಮತ್ತು ಎಸ್‌.ಸಿ ಜಮೀರ್ ಪ್ರಮುಖ ನಾಯಕರು.

ಸ್ಪರ್ಧೆಯಿಲ್ಲದೆ ಲೋಕಸಭೆಗೆ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಕಾಂಗ್ರೆಸ್‌ನವರೇ ಆಗಿದ್ದಾರೆ. ಸಿಕ್ಕಿಂ ಮತ್ತು ಶ್ರೀನಗರ ಕ್ಷೇತ್ರಗಳು ತಲಾ ಎರಡು ಬಾರಿ ಇಂತಹ ಅವಿರೋಧ ಆಯ್ಕೆಗಳನ್ನು ಕಂಡಿವೆ. ಡಿಂಪಲ್ ಯಾದವ್ ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಉಪಚುನಾವಣೆಗಳಲ್ಲಿ ಅವಿರೋಧವಾಗಿ ಗೆದ್ದಿದ್ದಾರೆ.

1957ರ ಸಾರ್ವತ್ರಿಕ ಚುನಾವಣೆಗಳಲ್ಲಿ ಗರಿಷ್ಠ ಏಳು ಅಭ್ಯರ್ಥಿಗಳು ಅವಿರೋಧವಾಗಿ ಗೆದ್ದರು. 1951 ಮತ್ತು 1967ರ ಚುನಾವಣೆಯಲ್ಲಿ ತಲಾ ಐವರು ಅವಿರೋಧವಾಗಿ ಆಯ್ಕೆಯಾಗಿದ್ದರು. 1962ರಲ್ಲಿ ಮೂವರು ಮತ್ತು 1977ರಲ್ಲಿ ಇಬ್ಬರು ಅಭ್ಯರ್ಥಿಗಳು ಅವಿರೋಧವಾಗಿ ಗೆದ್ದರೆ, 1971, 1980 ಮತ್ತು 1989ರಲ್ಲಿ ತಲಾ ಒಬ್ಬರು ಅಭ್ಯರ್ಥಿಗಳು ಅವಿರೋಧವಾಗಿ ಗೆದ್ದಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X