3 ಲಕ್ಷ ಮನೆಗಳು: ಸ್ವಿಗ್ಗಿ, ಜೊಮಾಟೋ ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ

Date:

ಮುಖ್ಯಮಂತ್ರಿಯಾಗಿ 7ನೇ ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಅವರು ವಸತಿ ಹಾಗೂ ಕಾರ್ಮಿಕ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

- Advertisement -

ಮಾರ್ಚ್‌ 2023ಕ್ಕೆ ಬಾಕಿ ಉಳಿದಿರುವ 12 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಪೂರ್ಣಗೊಳಿಸಬೇಕಾದರೆ 17,815 ಕೋಟಿ ರೂ.ಗಳ ಅಗತ್ಯವಿರುತ್ತದೆ. ರಾಜ್ಯದಲ್ಲಿ ನಿರ್ಮಾಣ ಹಂತದಲ್ಲಿ ಮೂರು ಲಕ್ಷ ಮನೆಗಳಿದ್ದು, ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲು ಕ್ರಮವಹಿಸಲಾಗುವುದು. ಇದಕ್ಕಾಗಿ 2,450 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ ಭಾಷಣದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ಸುದ್ದಿ ಓದಿದ್ದೀರಾ? ಬಜೆಟ್‌ 23-24 : ಇಂಧನ, ಆರೋಗ್ಯ ಕ್ಷೇತ್ರಗಳಿಗೆ ನೀಡಿರುವ ಅನುದಾನ ಮತ್ತು ಕೊಡುಗೆಗಳು

ಕಾರ್ಮಿಕ ಇಲಾಖೆಗೆ ಹಲವು ಉತ್ತಮ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಸ್ವಿಗ್ಗಿ, ಜೊಮಾಟೋ, ಅಮೆಜಾನ್‌ ಮುಂತಾದ ಇ-ಕಾಮರ್ಸ್‌ ಸಂಸ್ಥೆಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ ಎರಡು ಲಕ್ಷ ರೂ.ಗಳ ಜೀವವಿಮಾ ಸೌಲಭ್ಯ ಹಾಗೂ ಎರಡು ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿದಂತೆ ಒಟ್ಟು ನಾಲ್ಕು ಲಕ್ಷ ರೂ.ಗಳ ವಿಮಾ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಕಾರ್ಮಿಕ ಇಲಾಖೆಗೆ ಘೋಷಿಸಿರುವ ಇತರ ಯೋಜನೆಗಳು

  • ಆರು ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ 13 ಕೋಟಿ ರೂ. ವೆಚ್ಚದಲ್ಲಿ ಒಟ್ಟು 35 ಬೆಡ್‌ಗಳ ಸಾಮರ್ಥ್ಯದ ಐ.ಸಿ.ಯು/ಎಂ.ಐ.ಸಿ.ಯು
  • ಐದು ಕೋಟಿ ರೂ. ವೆಚ್ಚದಲ್ಲಿ ಆರು ಆಸ್ಪತ್ರೆಗಳಲ್ಲಿ 25 ಡಯಾಲಿಸಿಸ್‌ ಘಟಕಗಳು ಮತ್ತು 24 ಕೋಟಿ ರೂ. ವೆಚ್ಚದಲ್ಲಿ ಎರಡು ಆಸ್ಪತ್ರೆಗಳಲ್ಲಿ ಹೊಸ ಲೆವೆಲ್-‌2 ಟ್ರಾಮಾ ಕೇರ್‌ ಸೆಂಟರ್‌ಗಳ ನಿರ್ಮಾಣ
  • ಎಂಟು ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಆಸ್ಪತ್ರೆಗಳಲ್ಲಿ ಮಾಡ್ಯುಲಾರ್‌ ಓ.ಟಿ.ಗಳು ಮತ್ತು 35 ಕೋಟಿ ರೂ. ವೆಚ್ಚದಲ್ಲಿ ರೋಗ ಪತ್ತೆ ಹಚ್ಚುವ ಕೇಂದ್ರಗಳ ಉನ್ನತೀಕರಣ ಸೇರಿದಂತೆ ಒಟ್ಟು 85 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ
  • ಮೂರು ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿನ ಎಲ್ಲ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ ಆಯುರ್ವೇದ, ಹೋಮಿಯೋಪಥಿ ಮತ್ತು ಯೋಗ ಕೇಂದ್ರಗಳು ಒಳಗೊಂಡ ಆಯುಷ್‌ ವಿಭಾಗ ಸ್ಥಾಪನೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...