ಬಿಜೆಪಿಯ 40 ಹಾಲಿ ಶಾಸಕರು ಅಪರಾಧದ ಹಿನ್ನೆಲೆ ಉಳ್ಳವರು: ರಮೇಶ್ ಬಾಬು ಆರೋಪ

Date:

  • ಎಲ್ಲ ಪಕ್ಷಗಳಿಂದ ಶೇ. 35ರಷ್ಟು ಶಾಸಕರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ
  • ಅಪರಾಧ ಹಿನ್ನೆಲೆ ಹೊಂದಿರುವ ರೌಡಿ ಶೀಟರ್‌ಗಳನ್ನು ಬಿಜೆಪಿ ಸೇರಿಸಿಕೊಳ್ಳುತ್ತಿದೆ

ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಆ ಪ್ರಕಾರ ಆಡಳಿತ ಬಿಜೆಪಿಯ 40 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿವೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಟ್ಟಾರೆ ಎಲ್ಲ ಪಕ್ಷಗಳಿಂದ 2018ರಲ್ಲಿ ಚುನಾಯಿತರಾಗಿರುವವರಲ್ಲಿ ಶೇ. 35ರಷ್ಟು ಶಾಸಕರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಆಡಳಿತ ಪಕ್ಷದವರು ಇತರರಿಗೆ ಮಾದರಿ ಆಗಿ ನಡೆದುಕೊಳ್ಳಬೇಕು. ಆದರೆ, ಆಡಳಿತ ಬಿಜೆಪಿ ಕ್ರಿಮಿನಲ್ ಅಪರಾಧ ಇರುವ ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಸೈಲೆಂಟ್ ಸುನೀಲ್ ಮತ್ತು ಫೈಟರ್ ರವಿ ಅವರ ಪಕ್ಷ ಸೇರ್ಪಡೆ ವಿಚಾರವಾಗಿ ಸಾಕಷ್ಟು ಸುದ್ದಿ ಆಗಿದೆ ಎಂದರು.

ಚುನಾವಣೆ ಹಿನ್ನೆಲೆ ಕಳೆದ ಕೆಲವು ತಿಂಗಳಿನಿಂದ ಅಪರಾಧ ಪ್ರಕರಣ ತೆರವು ಮಾಡಿ ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಆದೇಶದ ಮೇರೆಗೆ ಚುನಾವಣಾ ಆಯೋಗ ಕಠಿಣ ನಿಯಮ ಜಾರಿ ಮಾಡಿದೆ. ನಾಮಪತ್ರ ಸಲ್ಲಿಕೆ ಮಾಡುವಾಗ ಕ್ರಿಮಿನಲ್ ಪ್ರಕರಣದ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಈ ವಿಚಾರವಾಗಿ ಮಾಹಿತಿ ನೀಡದೇ ಇರುವುದು, ಮುಚ್ಚಿಡುವುದು ಮಾಡಿದರೆ ನಾಮಪತ್ರ ತಿರಸ್ಕರಿಸುವ ಅಧಿಕಾರ ನೀಡಲಾಗಿದೆ ಎಂದು ವಿವರಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಶ್ರೀಧರ್ ರೆಡ್ಡಿ ಎಂಬುವವರು ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಎಂದು ಹೇಳಿಕೊಂಡಿದ್ದು, ಇದಕ್ಕೆ ಇಂಬು ಕೊಡುವಂತೆ ಬಿಜೆಪಿ ನಾಯಕರು ಇವರ ಹೆಸರು ಪ್ರಸ್ತಾಪ ಮಾಡಿದ್ದಾರೆ. ಇವರು ಬೆಂಗಳೂರು ನಗರ ಪದಾಧಿಕಾರಿಯಾಗಿ ಕೆಲಸ ಮಾಡಿದ್ದು, ದುರಂತ ಎಂದರೆ ಇವರ ವಿರುದ್ಧ 12 ಕ್ರಿಮಿನಲ್ ಪ್ರಕರಣ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. 1997ರಲ್ಲಿ ಜಮೀನು ಪ್ರಕರಣದಲ್ಲಿ ಅನೇಕ ಕೇಸು ದಾಖಲಾಗಿವೆ ಎಂದು ಹೇಳಿದರು.

ಆನೇಕಲ್ ತಾಲೂಕಿನ ಜಿಗಣಿ ಹೋಬಳಿ ಮಾಲಗೊಂಡನಹಳ್ಳಿ ಗ್ರಾಮದ ಸರ್ವೆ ನಂ. 76, 79ರಲ್ಲಿ 9 ಎಕರೆಯಲ್ಲಿ 450ಕ್ಕೂ ಹೆಚ್ಚು ಕಂದಾಯ ನಿವೇಶನ ನಿರ್ಮಾಣ ಮಾಡಿ ಮಾರಾಟ ಮಾಡಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ಇವರ ವಿರುದ್ಧ ಅನೇಕ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ದಾಖಲಾಗಿರುವ ದೂರು ಪೂರ್ಣ ಪ್ರಮಾಣದಲ್ಲಿ ತನಿಖೆ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಪರವಾಗಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಈ ಹಗರಣ ಸಿಐಡಿ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿದ್ದೇವೆ ಎಂದರು.

ಈ ಸುದ್ದಿ ಓದಿದ್ದೀರಾ ? ಈ ದಿನ ಸಂಪಾದಕೀಯ | ಸೋಲಿನ ಭಯದಿಂದ ಸಿನಿಮಾ ತಾರೆಯರ ಹಿಂದೆ ಬಿದ್ದಿದೆಯೇ ಬಿಜೆಪಿ?

ಜನರ ಗಮನ ಬೇರೆಡೆ ಸೆಳೆಯಲು ದೇವೇಗೌಡರ ಹೇಳಿಕೆ

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು ದೆಹಲಿಯಲ್ಲಿ ಹೇಳಿಕೆ ನೀಡಿ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರ ಸಂಬಂಧ ಚೆನ್ನಾಗಿದೆ. ವರುಣಾದಲ್ಲಿ ವಿಜಯೇಂದ್ರ ಅವರ ಸ್ಪರ್ಧೆಗೆ ಯಡಿಯೂರಪ್ಪ ಅವರು ಒಪ್ಪುತ್ತಿಲ್ಲ ಎಂಬ ಕಾರಣಕ್ಕೆ ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ದೇವೇಗೌಡರ ಮೇಲೆ ಅಪಾರ ಗೌರವ ಹೊಂದಿದ್ದು, ಅವರ ಬಾಯಲ್ಲಿ ಇಂತಹ ಹೇಳಿಕೆ ಬರಬಾರದು. ಅವರು ಹಾಸನ ಟಿಕೆಟ್ ವಿಚಾರವಾಗಿ ಇರುವ ಗೊಂದಲದ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಈ ಹೇಳಿಕೆ ನೀಡಿದ್ದಾರೆ. ಇದರಲ್ಲಿ ಯಾವುದೇ ತಿರುಳು ಇಲ್ಲ. ರಾಜ್ಯ ಚುನಾವಣೆಯ ಪ್ರತಿ ಹಂತದಲ್ಲಿ ಜೆಡಿಎಸ್ ಬಿಜೆಪಿ ಬಿ ಟೀಮ್ ಆಗಿದೆ. ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ. ಹೊಂದಾಣಿಕೆ ಅಗತ್ಯ ಇರುವುದು ಜೆಡಿಎಸ್ ಪಕ್ಷಕ್ಕೆ. ಈ ಬಗ್ಗೆ ಸಿ ಪಿ ಯೋಗೇಶ್ವರ್ ಅವರೇ ಹೇಳಿದ್ದಾರೆ ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...