‘ಚಾರ್‌ ಸೌ ಪಾರ್’ ಮೋದಿಗೆ ಸರ್ಕಾರ ರಚಿಸುವುದೇ ಸವಾಲು

Date:

Advertisements

ಲೋಕಸಭಾ ಚುನಾವಣೆಯ ಆರಂಭದಲ್ಲಿ ‘ಅಬ್ಕಿ ಬಾರ್ 400 ಸೌ ಪಾರ್’ ಎಂಬ ಘೋಷಣೆ ಕೂಗಿದ್ದ ಮೋದಿ ಅವರು, ಈಗ ಮೂರನೇ ಭಾರಿಗೆ ಪ್ರಧಾನಿ ಆಗುವುದೇ ಕಷ್ಟವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 296 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂದಹಾಗೆ, ಈ ಪೈಕಿ ಬಿಜೆಪಿ 241 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, 400 ಸ್ಥಾನಗಳಿಗೆ ಬರೋಬ್ಬರಿ 159 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ ಭಾರೀ ಮುಖಭಂಗವಾಗಿದೆ.

ಅಲ್ಲದೆ, ಬಿಜೆಪಿ ಈ ಬಾರಿ 241 ಸ್ಥಾನಗಳಲ್ಲಿ ಗೆದ್ದರೂ, 2019ರಲ್ಲಿ ಗೆದ್ದಿದ್ದ 303 ಸ್ಥಾನಗಳಿಗೆ ಹೋಲಿಸಿದರೆ, 58 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಆದರೆ, ಬಿಜೆಪಿ ಮತ್ತು ಎನ್‌ಡಿಎ ಇನ್ನೂ ಹಲವು ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ, 542 ಸ್ಥಾನಗಳ ಪೈಕಿ ಎನ್‌ಡಿಎ 296 ಕ್ಷೇತ್ರ ಮತ್ತು ‘ಇಂಡಿಯಾ’ ಒಕ್ಕೂಟ 230 ಸ್ಥಾನಗಳಲ್ಲಿ ಮುನ್ನಡೆಯಲ್ಲಿವೆ. ಕಾಂಗ್ರೆಸ್‌ ಮತ್ತು ಮೈತ್ರಿ ಪಕ್ಷಗಳು ತಮ್ಮ ಸ್ಥಾನಗಳನ್ನು ವೃದ್ಧಿಸಿಕೊಳ್ಳುತ್ತಿವೆ. ಇದು ಬಿಜೆಪಿಯಲ್ಲಿ ಆಂತಕ ಸೃಷ್ಟಿಸಿದೆ.

Advertisements

ಮಾತ್ರವಲ್ಲದೆ, ಕಾಂಗ್ರೆಸ್‌ ನಾಯಕರು ಬಿಹಾರದ ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ಆಂಧ್ರಪ್ರದೇಶದ ಟಿಡಿಎಂ ನಾಯಕ ಚಂದ್ರಬಾಬು ನಾಯ್ಡು ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ, ಈ ಎರಡೂ ಪಕ್ಷಗಳು ಎನ್‌ಡಿಎ ಭಾಗವಾಗಿದ್ದು, ಅವರು ಬಿಜೆಪಿ ಜೊತೆಗಿನ ಸಖ್ಯ ತೊರೆದರೆ, ಬಿಜೆಪಿಗೆ ಭಾರೀ ಹಿನ್ನಡೆಯಾಗಲಿದೆ. ಅಂತೆಯೇ ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತಷ್ಟು ಬಲ ಬರಲಿದ್ದು, ನಿರಾಯಾಸವಾಗಿ ಸರ್ಕಾರ ರಚಿಸಲು ಸಾಧ್ಯವಾಗುತ್ತದೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X