45 ದಿನಗಳ ನಂತರ ಈಗೇಕೆ ನೋಟಿಸ್? ಕೇಂದ್ರದ ನಡೆಗೆ ಕಾಂಗ್ರೆಸ್ ಆಕ್ರೋಶ

Date:

  • ಶ್ರೀನಗರದಲ್ಲಿ ಜನವರಿ 30ರಂದು ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಮಾತು
  • ಮಾರ್ಚ್ 16ರಂದು ರಾಹುಲ್ ಅವರ ದೆಹಲಿ ನಿವಾಸಕ್ಕೆ ನೋಟಿಸ್ ನೀಡಿದ್ದ ದೆಹಲಿ ಪೊಲೀಸರು

ಭಾರತ್ ಜೋಡೋ ಯಾತ್ರೆ ವೇಳೆ ಜಮ್ಮು-ಕಾಶ್ಮೀರದ ಶ್ರೀನಗರದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರ ಬಗ್ಗೆ ನೀಡಿರುವ ಹೇಳಿಕೆಯ ಬಗ್ಗೆ ರಾಹುಲ್ ಗಾಂಧಿಯವರನ್ನು ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರ ನಡೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ಮಾಧ್ಯಮ ಘಟಕದ ಮುಖ್ಯಸ್ಥರಾದ ಜೈರಾಂ ರಮೇಶ್, “ಭಾರತ್ ಜೋಡೋ ಯಾತ್ರೆ ಮುಗಿದು 45 ದಿನಗಳಾಗಿವೆ. ದೆಹಲಿ ಪೊಲೀಸರು 45 ದಿನಗಳ ನಂತರ ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಅಷ್ಟೋಂದು ಕಾಳಜಿಯಿದ್ದರೆ ಘಟನೆ ನಡೆದು ಕೆಲ ದಿನಗಳಲ್ಲೇ ವಿಚಾರಿಸಬಹುದಿತ್ತಲ್ಲವೆ? ಇದಕ್ಕೆ ರಾಹುಲ್ ಗಾಂಧಿಯವರ ಕಾನೂನು ಘಟಕ ಕಾನೂನಿನ್ವಯ ಉತ್ತರ ನೀಡಲಿದೆ” ಎಂದು ತಿಳಿಸಿದರು.

“ಇದು ಅಮೃತಕಾಲವಲ್ಲ ಆಪತ್ಕಾಲ. ಮೋದಿಯವರ ಸರ್ವಾಧಿಕಾರ ಆಡಳಿತ. ಸಂಸತ್ತನ್ನು ನಡೆಸುವುದು ಸರ್ಕಾರದ ಜವಾಬ್ದಾರಿ. ಇದಕ್ಕೆ ನಾವು ಬೆಂಬಲ ನೀಡುತ್ತೇವೆ. ಆದರೆ ನಮಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ. ಸದನ ನಡೆಯಲು ಬಿಡದಿರುವುದು ಸರ್ಕಾರದ ಮುಖ್ಯ ಉದ್ದೇಶ” ಎಂದು ಟೀಕಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳನ್ನು ಪರಿಗಣಿಸಿರುವ ದೆಹಲಿ ಪೊಲೀಸರು, ಈ ಸಂಬಂಧ ಪ್ರಶ್ನಾವಳಿಯನ್ನು ಸಿದ್ಧಪಡಿಸಿ ರಾಹುಲ್ ಗಾಂಧಿ ಅವರಿಗೆ ಮಾರ್ಚ್ 16ರಂದು ನೋಟಿಸ್ ನೀಡಿದ್ದರು. ಇಂದು ವಿಶೇಷ ಆಯುಕ್ತರ ನೇತೃತ್ವದಲ್ಲಿ ವಿಚಾರಣೆಗಾಗಿ ದೆಹಲಿಯಲ್ಲಿರುವ ರಾಹುಲ್ ನಿವಾಸಕ್ಕೆ ಆಗಮಿಸಿದ್ದರು.

“ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಬಾಲಕಿಯೊಬ್ಬಳು ನನಗೆ ವಿವರ ನೀಡಿದ್ದಳು. ಆಕೆ ಮೇಲೆ ಅತ್ಯಾಚಾರ ನಡೆದಿತ್ತು. ‘ಪೊಲೀಸರನ್ನು ಕರೆಯೋಣವೇ’ ಎಂದು ನಾನು ಆಕೆಯನ್ನು ಕೇಳಿದೆ. ‘ಪೊಲೀಸರನ್ನು ಕರೆಯಬೇಡಿ, ನನ್ನ ಮರ್ಯಾದೆ ಹೋಗುತ್ತದೆ’ ಎಂದು ಆಕೆ ಹೇಳಿದ್ದಳು” ಎಂಬುದಾಗಿ ರಾಹುಲ್ ಗಾಂಧಿ ಹೇಳಿದ್ದರು.

“ಶ್ರೀನಗರದಲ್ಲಿ ಜನವರಿ 30ರಂದು ಭಾರತ್ ಜೋಡೋ ಯಾತ್ರೆ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹಲವು ಮಹಿಳೆಯರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರು. ನಾವು ಈ ಕುರಿತು ರಾಹುಲ್ ಗಾಂಧಿ ಅವರ ಬಳಿ ಹೇಳಿಕೆ ಪಡೆಯಲು ಬಂದಿದ್ದೇವೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ನಾವು ಅವರಿಂದ ವಿವರಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ” ಎಂದು ದೆಹಲಿಯ ವಿಶೇಷ ಆಯುಕ್ತ ಸಾಗರ್ ಪ್ರೀತ್ ಹೂಡ ತಿಳಿಸಿದ್ದಾರೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಮೋದಿಗಿಂತಲೂ ಸಿದ್ದರಾಮಯ್ಯ ರಾಜ್ಯದ ಜನರಿಗೆ ಹೆಚ್ಚು ಇಷ್ಟ!

ರಾಜಕಾರಣದಲ್ಲಿ ಸದಾ ದ್ವೇಷದ ಕುದುರೆಯೇರಿ ದಿಬ್ಬಣ ಹೊರಡುವ ಮದುಮಗನಂತೆ ಕಾಣುವ ಪ್ರಧಾನಿ...

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆ ನಡೆಯಲ್ಲ: ಪತ್ರಕರ್ತ ಜಿ ಪಿ ಬಸವರಾಜು ಕಳವಳ

2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವದ ಅಳಿವು ಉಳಿವಿನ ಚುನಾವಣೆ. ಈ ಬಾರಿಯ...

ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಮೋದಿ ಕಿ ಗ್ಯಾರಂಟಿಯ ನಡುವೆ ಅಗಾಧ ವ್ಯತ್ಯಾಸವಿದೆ...

ಮುಸ್ಲಿಮರು ಮತ್ತು ಮೋದಿ ಸುಳ್ಳು; ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಆಯೋಗಗಳು ಹೇಳಿದ್ದೇನು? ಡೀಟೇಲ್ಸ್‌

ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್‌ ಸರ್ಕಾರಗಳು ಮುಸ್ಲಿಮರಿಗೆ ಮೀಸಲಾತಿಯನ್ನ ನೀಡಿವೆ. ಅದಕ್ಕಾಗಿ, ಹಿಂದುಳಿದವರು...