45 ದಿನಗಳ ನಂತರ ಈಗೇಕೆ ನೋಟಿಸ್? ಕೇಂದ್ರದ ನಡೆಗೆ ಕಾಂಗ್ರೆಸ್ ಆಕ್ರೋಶ

Date:

Advertisements
  • ಶ್ರೀನಗರದಲ್ಲಿ ಜನವರಿ 30ರಂದು ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಮಾತು
  • ಮಾರ್ಚ್ 16ರಂದು ರಾಹುಲ್ ಅವರ ದೆಹಲಿ ನಿವಾಸಕ್ಕೆ ನೋಟಿಸ್ ನೀಡಿದ್ದ ದೆಹಲಿ ಪೊಲೀಸರು

ಭಾರತ್ ಜೋಡೋ ಯಾತ್ರೆ ವೇಳೆ ಜಮ್ಮು-ಕಾಶ್ಮೀರದ ಶ್ರೀನಗರದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರ ಬಗ್ಗೆ ನೀಡಿರುವ ಹೇಳಿಕೆಯ ಬಗ್ಗೆ ರಾಹುಲ್ ಗಾಂಧಿಯವರನ್ನು ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರ ನಡೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ಮಾಧ್ಯಮ ಘಟಕದ ಮುಖ್ಯಸ್ಥರಾದ ಜೈರಾಂ ರಮೇಶ್, “ಭಾರತ್ ಜೋಡೋ ಯಾತ್ರೆ ಮುಗಿದು 45 ದಿನಗಳಾಗಿವೆ. ದೆಹಲಿ ಪೊಲೀಸರು 45 ದಿನಗಳ ನಂತರ ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಅಷ್ಟೋಂದು ಕಾಳಜಿಯಿದ್ದರೆ ಘಟನೆ ನಡೆದು ಕೆಲ ದಿನಗಳಲ್ಲೇ ವಿಚಾರಿಸಬಹುದಿತ್ತಲ್ಲವೆ? ಇದಕ್ಕೆ ರಾಹುಲ್ ಗಾಂಧಿಯವರ ಕಾನೂನು ಘಟಕ ಕಾನೂನಿನ್ವಯ ಉತ್ತರ ನೀಡಲಿದೆ” ಎಂದು ತಿಳಿಸಿದರು.

“ಇದು ಅಮೃತಕಾಲವಲ್ಲ ಆಪತ್ಕಾಲ. ಮೋದಿಯವರ ಸರ್ವಾಧಿಕಾರ ಆಡಳಿತ. ಸಂಸತ್ತನ್ನು ನಡೆಸುವುದು ಸರ್ಕಾರದ ಜವಾಬ್ದಾರಿ. ಇದಕ್ಕೆ ನಾವು ಬೆಂಬಲ ನೀಡುತ್ತೇವೆ. ಆದರೆ ನಮಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ. ಸದನ ನಡೆಯಲು ಬಿಡದಿರುವುದು ಸರ್ಕಾರದ ಮುಖ್ಯ ಉದ್ದೇಶ” ಎಂದು ಟೀಕಿಸಿದರು.

Advertisements

ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳನ್ನು ಪರಿಗಣಿಸಿರುವ ದೆಹಲಿ ಪೊಲೀಸರು, ಈ ಸಂಬಂಧ ಪ್ರಶ್ನಾವಳಿಯನ್ನು ಸಿದ್ಧಪಡಿಸಿ ರಾಹುಲ್ ಗಾಂಧಿ ಅವರಿಗೆ ಮಾರ್ಚ್ 16ರಂದು ನೋಟಿಸ್ ನೀಡಿದ್ದರು. ಇಂದು ವಿಶೇಷ ಆಯುಕ್ತರ ನೇತೃತ್ವದಲ್ಲಿ ವಿಚಾರಣೆಗಾಗಿ ದೆಹಲಿಯಲ್ಲಿರುವ ರಾಹುಲ್ ನಿವಾಸಕ್ಕೆ ಆಗಮಿಸಿದ್ದರು.

“ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಬಾಲಕಿಯೊಬ್ಬಳು ನನಗೆ ವಿವರ ನೀಡಿದ್ದಳು. ಆಕೆ ಮೇಲೆ ಅತ್ಯಾಚಾರ ನಡೆದಿತ್ತು. ‘ಪೊಲೀಸರನ್ನು ಕರೆಯೋಣವೇ’ ಎಂದು ನಾನು ಆಕೆಯನ್ನು ಕೇಳಿದೆ. ‘ಪೊಲೀಸರನ್ನು ಕರೆಯಬೇಡಿ, ನನ್ನ ಮರ್ಯಾದೆ ಹೋಗುತ್ತದೆ’ ಎಂದು ಆಕೆ ಹೇಳಿದ್ದಳು” ಎಂಬುದಾಗಿ ರಾಹುಲ್ ಗಾಂಧಿ ಹೇಳಿದ್ದರು.

“ಶ್ರೀನಗರದಲ್ಲಿ ಜನವರಿ 30ರಂದು ಭಾರತ್ ಜೋಡೋ ಯಾತ್ರೆ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹಲವು ಮಹಿಳೆಯರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರು. ನಾವು ಈ ಕುರಿತು ರಾಹುಲ್ ಗಾಂಧಿ ಅವರ ಬಳಿ ಹೇಳಿಕೆ ಪಡೆಯಲು ಬಂದಿದ್ದೇವೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ನಾವು ಅವರಿಂದ ವಿವರಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ” ಎಂದು ದೆಹಲಿಯ ವಿಶೇಷ ಆಯುಕ್ತ ಸಾಗರ್ ಪ್ರೀತ್ ಹೂಡ ತಿಳಿಸಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X