4,860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

Date:

Advertisements
  • ಸುಮಾರು 30 ಸಾವಿರ ಕೋಟಿ ರೂ. ಬೆಳೆ ಹಾನಿಯಾಗಿದೆ
  • 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ

ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ವಾಸ್ತವಿಕವಾಗಿ ಸುಮಾರು 30 ಸಾವಿರ ಕೋಟಿ ರೂ. ಬೆಳೆ ಹಾನಿಯಾಗಿದೆ. ಎನ್‌ಡಿಆರ್‍ಎಫ್ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ” ಎಂದರು.

“ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ. ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ, ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶದಗಳಲ್ಲಿ ನೀರಿರುವುದಿಲ್ಲ. ಕೇಂದ್ರದ ಮಾರ್ಗಸೂಚಿಯಂತೆ 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ” ಎಂದು ಹೇಳಿದರು.

Advertisements

“ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ, ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ” ಎಂದು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಧಾನ್ಯತೆ 

“ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಲ್ಲಿನ ವಿಳಂಬವಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಸರ್ಕಾರದವರು ಈ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5,300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಮೊತ್ತವನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಕೋರಲಾಗಿದೆ” ಎಂದು ಹೇಳಿದರು.

“ನಮ್ಮ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುವುದು. ಪ್ರಸಕ್ತ ವರ್ಷ ಹಾಗೂ ಮುಂದಿನ ವರ್ಷವೂ ಕೂಡ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗುವುದು” ಎಂದರು.

7ನೇ ವೇತನ ಆಯೋಗದ ಅಧ್ಯಕ್ಷರೊಂದಿಗೆ ಮಾತನಾಡಿದ್ದು, ವರದಿ ಸಲ್ಲಿಕೆಯಾದ ನಂತರ ತೀರ್ಮಾನ ಕೈಗೊಳ್ಳಲಾಗುವುದು. ನಿಗಮ ಮಂಡಳಿಗಳ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X