ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ಉಳಿತಾಯ: ಡಿ.ಕೆ.ಶಿವಕುಮಾರ್

Date:

Advertisements

“ಗ್ಯಾರಂಟಿ ಯೋಜನೆಗಳಿಂದ ಒಂದು ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ಉಳಿತಾಯವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಹೊರತಾಗಿ ವಿವಿಧ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹1.20 ಸಾವಿರ ಕೋಟಿ ಹಣವನ್ನು ಬಜೆಟ್‌ನಲ್ಲಿ ಮೀಸಲಿಟ್ಟಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು‌.

ಹಾಸನದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು,” ₹1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ ₹1.50 ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಕುಮಾರಸ್ವಾಮಿ, ಆರ್‌. ಅಶೋಕ್‌ ಅವರು ಇದಕ್ಕೆ ಉತ್ತರಿಸಲಿ” ಎಂದು ಸವಾಲೆಸೆದರು.

“ವಸ್ತುಗಳ ಬೆಲೆ ಏರಿಕೆಯಾಗಿತ್ತು. ಬಿಜೆಪಿಯವರು ವಿದ್ಯುತ್‌ ಬೆಲೆ ಏರಿಕೆ ಮಾಡಿದ್ದರು. ನಾವು ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ ಬೆಲೆ ಇಳಿಕೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ-ಸೊಸೆ ಜಗಳವಾಡುತ್ತಾರೆ ಎಂದು ಗುಲ್ಲೆಬ್ಬಿಸಿದರು. ಯಾವುದಾದರೂ ಮನೆಯಲ್ಲಿ ಜಗಳ ಉಂಟಾಗಿದೆಯೇ?” ಎಂದು ಕೇಳಿದರು.

Advertisements

“ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಶಕ್ತಿ ಯೋಜನೆಯಿಂದ ದೇವಸ್ಥಾನಕ್ಕೆ ಜನ ಹೆಚ್ಚು ಬರುತ್ತಿದ್ದಾರೆ. ಹುಂಡಿ ತುಂಬಿ ತುಳುಕುತ್ತಿದೆ. ಸಿದ್ದರಾಮಯ್ಯ ಅವರ ಮತ್ತು ಡಿ.ಕೆ.ಶಿವಕುಮಾರ್‌ ಅವರ ಹೆಸರಿನಲ್ಲಿ ಮಹಿಳೆಯರು ಅರ್ಚನೆ ಮಾಡಿಸುತ್ತಿದ್ದಾರೆ ಎಂದು ಪತ್ರ ಬರೆದಿದ್ದರು. ಜನರ ಪ್ರಾರ್ಥನೆ ಎಂದಿಗೂ ಮೋಸ ಮಾಡುವುದಿಲ್ಲ. ಮಹಿಳೆಯರು ರಾಜ್ಯದ ನಾನಾ ದೇವಸ್ಥಾನಗಳನ್ನು ನೋಡುತ್ತಿದ್ದಾರೆ. ಮಕ್ಕಳನ್ನು ಕರೆದುಕೊಂಡು ಹೋಗಿ ದರ್ಶನ ಮಾಡಿಸುತ್ತಿದ್ದಾರೆ. ತವರು ಮನೆಗೆ ಹೋಗಿ ಬರುತ್ತಿದ್ದಾರೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

“ನಮ್ಮ ಯೋಜನೆಗಳಿಂದ ಆರ್ಥಿಕತೆಗೆ ಉತ್ತೇಜನ ನೀಡಲಾಗಿದೆ. ದುಡ್ಡು ಮತ್ತು ಬ್ಲಡ್‌ ಎರಡೂ ಚಲಾವಣೆಯಲ್ಲಿ ಇರಬೇಕು. ದುಡ್ಡು ಒಂದೇ ಕಡೆ ಇದ್ದರೆ ಕಳ್ಳರ, ಆದಾಯ ತೆರಿಗೆ ಅಧಿಕಾರಿಗಳ ಭಯ. ಬ್ಲಡ್‌ ಒಂದೇ ಕಡೆ ಇದ್ದರೆ ಅನಾರೋಗ್ಯ ಉಂಟಾಗುತ್ತದೆ. ನಾವು ಧರ್ಮವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದಿಲ್ಲ. ದೇವರು ಬೇರೆ, ರಾಜಕಾರಣ ಬೇರೆ. ಈ ಬಾರಿಯ ಸದನದಲ್ಲಿ ನಮ್ಮ ಸರ್ಕಾರ ಸಣ್ಣ ದೇವಸ್ಥಾನಗಳ ಅಭಿವೃದ್ಧಿಗೆ ಮತ್ತು ಅರ್ಚಕರಿಗೆ ಸಹಾಯ ಮಾಡುವ ಕಾನೂನು ತರಲು ಹೊರಟೆವು. ಆದರೆ ಬಿಜೆಪಿಯವರು ಅದಕ್ಕೆ ವಿರೋಧಿಸಿದರು” ಎಂದು ತಿಳಿಸಿದರು.

“ನಮಗೆ ಜಾತಿ ಮುಖ್ಯವಲ್ಲ ನೀತಿ ಮುಖ್ಯ. ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಭಾವನೆಗಳ ಮೇಲೆ ಅಲ್ಲ. ನಾವು ಕೇವಲ ದಲಿತ, ಹಿಂದುಳಿದ, ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆಗಳನ್ನು ನೀಡಿಲ್ಲ. ಎಲ್ಲರಿಗೂ ನೀಡಿದ್ದೇವೆ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಿದ್ದೆವು. ಆದರೆ ಆ ಹಣ ಬಿಡುಗಡೆಯಾಗಿರಲಿಲ್ಲ. ಸಿಎಂ ಮತ್ತು ರಾಜಣ್ಣ ಅವರ ಕಾಳಜಿಯಿಂದ ಈ ಹಣ ಬಿಡುಗಡೆ ಮಾಡಿ ಸಹಕಾರಿ ಸಂಘ ಮತ್ತು ರೈತರಿಗೆ ಬೆನ್ನೆಲುಬಾಗಿದ್ದೇವೆ. ಮುಂದಕ್ಕೂ ನೀವು ನಮ್ಮ ಕೈ ಹಿಡಿಯುತ್ತೀರಾ ಎಂದು ನಂಬಿದ್ದೇವೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ? ಮೈಸೂರು | ಜನರ ವಿರುದ್ಧ ಕೇಂದ್ರ ಯುದ್ಧ ಘೋಷಿಸಿದೆ: ತೀಸ್ತಾ ಸೆಟಲ್ವಾಡ್‌

“ಹಾಸನ ಜಿಲ್ಲೆಯ ಜನಪ್ರತಿನಿಧಿಗಳು ಒಂದಷ್ಟು ಅನುದಾನಗಳ ಬಿಡುಗಡೆಗೆ ಮನವಿ ಸಲ್ಲಿಸಿದ್ದಾರೆ. ಇದರಲ್ಲಿ ನಮ್ಮ ಶಿವಲಿಂಗೇಗೌಡರು ಬಂಪರ್‌ ಹೊಡೆದಿದ್ದಾರೆ. ಈ ವರ್ಷ ಮಳೆ ಬಿದ್ದು ನೀರು ಬಂದರೆ, ಎತ್ತಿನಹೊಳೆ ಮೂಲಕ ಎಲ್ಲ ಕೆರೆಗಳನ್ನು ತುಂಬಿಸುವ ಕೆಲಸವಾಗುತ್ತದೆ” ಎಂದು ಇದೇ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X