6,195 ಶಾಲಾ ಶೌಚಾಲಯ ನಿರ್ಮಾಣ ಗುರಿ; 2,367 ಶೌಚಾಲಯ ಪೂರ್ಣ: ಸಚಿವ ಪ್ರಿಯಾಂಕ್‌ ಖರ್ಗೆ

Date:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ (ಎಂಜಿನರೇಗ) ಗ್ರಾಮೀಣ ಪ್ರದೇಶಗಳ ಶಾಲಾ ಆವರಣಗಳಲ್ಲಿ ನಿರ್ಮಿಸಲಾಗುತ್ತಿರುವ ಶೌಚಾಲಯಗಳಿಗೆ ಬಳಸುವ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

- Advertisement -

ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಅಧಿಕಾರಿಗಳ ವಿಡಿಯೋ ಸಭೆಯಲ್ಲಿ ಮಾತನಾಡಿದ ಸಚಿವರು ಶಾಲೆಗಳ ಶೌಚಾಲಯಗಳ ನಿರ್ಮಾಣದಲ್ಲಿ ಬಳಸುತ್ತಿರುವ ಸಾಮಗ್ರಿಗಳ ಗುಣಮಟ್ಟದಲ್ಲಿ ಸುಧಾರಣೆ ಆಗಬೇಕಾದ ಅವಶ್ಯಕತೆ ಇದೆ ಎಂದು ಒತ್ತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರಸಕ್ತ ವರ್ಷ 6,195 ಶಾಲಾ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು ಇವುಗಳಲ್ಲಿ 2,367 ಶೌಚಾಲಯಗಳ ನಿರ್ಮಾಣ ಕೆಲಸ ಪೂರ್ಣಗೊಂಡಿದೆ ಎಂದು ಸಚಿವರಿಗೆ ಮಾಹಿತಿ ನೀಡಲಾಯಿತು.

“ಗ್ರಾಮಗಳಲ್ಲಿ ಯುವಕರ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗುವಂತೆ ಆಟದ ಮೈದಾನಗಳ ನಿರ್ಮಾಣವಾಗಬೇಕಿದ್ದು, ಇದಕ್ಕಾಗಿ ಸೂಕ್ತ ಸ್ಥಳವನ್ನು ಗುರ್ತಿಸುವಂತೆ” ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

“ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದ 7,424 ಶಾಲೆಗಳಿಗೆ ಕಾಂಪೌಂಡ್‌ ನಿರ್ಮಾಣ ಆಗಬೇಕಿದ್ದು ಈಗಾಗಲೆ 2,968 ಶಾಲೆಗಳ ಕಾಂಪೌಂಡ್‌ ಪೂರ್ಣಗೊಂಡಿವೆ, ಪ್ರಗತಿಯಲ್ಲಿರುವ ಉಳಿದ ಕಾಮಗಾರಿಗಳ ನಿರ್ಮಾಣವನ್ನು ಚುರುಕುಗೊಳಿಸಿ ಮಾರ್ಚ್‌ ಅಂತ್ಯದ ಒಳಗೆ ಗುರಿ ಸಾಧನೆ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?

“ಮುಂದಿನ ದಿನಗಳಲ್ಲಿ ಬರಗಾಲದ ತೀವ್ರತೆ ಹೆಚ್ಚಾಗಲಿದ್ದು, ಗ್ರಾಮೀಣ ಮಹಿಳೆಯರು, ಪರಿಶಿಷ್ಟ ಜಾತಿ ಪಂಗಡದವರು ಗುಳೆ ಹೋಗುವುದನ್ನು ತಡೆದು ನರೇಗ ಅಡಿ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕೆಂದು ನಿರ್ದೇಶನ ನೀಡಿದ ಸಚಿವರು ಗೋಮಾಳಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ವನಸಂರಕ್ಷಣೆ ಮಾಡಬೇಕು” ಎಂದು ಸೂಚಿಸಿದರು.

ನರೇಗ ಯೋಜನೆಯಡಿ ಪ್ರಸಕ್ತ ವರ್ಷ 1,300 ಲಕ್ಷ ಮಾನವದಿನಗಳನ್ನು ಸೃಜಿಸುವ ಗುರಿ ಹೊಂದಿದ್ದು, 2023ರ ಡಿಸೆಂಬರ್‌ ಅಂತ್ಯಕ್ಕೆ 1,112.80 ಲಕ್ಷ ಮಾನವದಿನಗಳನ್ನು ಸೃಜಿಸುವ ಗುರಿ ಹೊಂದಲಾಗಿತ್ತು, ಡಿಸೆಂಬರ್‌ ಅಂತ್ಯಕ್ಕೆ 1,153.25 ಮಾನವದಿನಗಳನ್ನು ಸೃಜಿಸಲಾಗಿದ್ದು ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ನರೇಗ ಆಯುಕ್ತ ಪವನ್‌ ಕುಮಾರ್‌ ಸಚಿವರಿಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...