62 ತಾಲೂಕು ಬರ ಘೋಷಣೆಗೆ ಅರ್ಹ, 529 ಕೋಟಿ ಅನುದಾನ ಎತ್ತಿಡಲಾಗಿದೆ : ಸಚಿವ ಕೃಷ್ಣಭೈರೇಗೌಡ

Date:

Advertisements
  • ಕಂದಾಯ ಸಚಿವ ಕೃಷ್ಣಭೈರೇಗೌಡ ಸಹಿತ ಮೂವರು ಸಚಿವರಿಂದ ಬರ ಪರಿಸ್ಥಿತಿ ವಿವರಣೆ
  • ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ವಿತರಿಸಲು ಪಶು ಸಂಗೋಪನೆ ಇಲಾಖೆಗೆ 20 ಕೋಟಿ ರೂ.

113 ತಾಲೂಕುಗಳ ಪೈಕಿ ಜಂಟಿ ಸಮೀಕ್ಷೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ 62 ತಾಲೂಕುಗಳು ಸದ್ಯ ಬರ ಘೋಷಣೆಗೆ ಅರ್ಹವಾಗಿವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಸಚಿವ ಸಂಪುಟದ ಉಪಸಮಿತಿಯ ಸಭೆಯ ಬಳಿಕ ವಿಧಾನಸೌಧದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಚಲುವರಾಯಸ್ವಾಮಿ ಜೊತೆಗೆ ಸುದ್ದಿಗೋಷ್ಠಿ ನಡೆಸಿದ ಕೃಷ್ಣಭೈರೇಗೌಡ, “2023ರ ಮಂಗಾರು ಆರಂಭದಲ್ಲಿಯೇ ದುರ್ಬಲಗೊಂಡು, ಜೂನ್ ತಿಂಗಳಿನಲ್ಲಿ ಶೇ 5ರಷ್ಟು ಮಳೆ ಕೊರತೆಯಾಗಿತ್ತು. ನಂತರ ಜುಲೈನಲ್ಲಿ ಉತ್ತಮವಾಗಿ ಮಳೆಯಾದರೂ, ಆಗಸ್ಟ್‌ ತಿಂಗಳಿನಲ್ಲಿ ಶೇಕಡಾ 73 ರಷ್ಟು ಮಳೆ ಕೊರತೆಯಾಗಿದೆ. ಒಟ್ಟಾರೆ ಪ್ರಸಕ್ತ ಮುಂಗಾರು ಜೂನ್ 1 ರಿಂದ ಸೆಪ್ಟೆಂಬರ್ 4 ರವರೆಗೆ ವಾಡಿಕೆಯಾಗಿ 711 ಮಿ.ಮಿ. ಮಳೆಯಾಗಬೇಕಿತ್ತು. ಆದರೆ ಕೇವಲ 526 ಮಿ.ಮೀ ಮಳೆಯಾಗಿದೆ. ಇದರಿಂದಾಗಿ ಶೇಕಡಾ 26ರಷ್ಟು ಮಳೆ ಕೊರತೆಯಾಗಿದ್ದರಿಂದ ಬರ ಪರಿಸ್ಥಿತಿ ತಲೆದೋರಿದೆ” ಎಂದು ವಿವರಿಸಿದರು.

ಬರ ಪರಿಸ್ಥಿತಿ ಬಗ್ಗೆ ನಿಗಾ ಮತ್ತು ನಿರ್ವಹಣೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಈವರೆಗೆ 3 ಬಾರಿ ಸಭೆ ನಡೆಸಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪರಾಮರ್ಶಿಸಿದೆ. ಇಂದಿನ ಸಭೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಮಾತುಕತೆ ನಡೆಸಿದ್ದೇವೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

Advertisements

ರಾಜ್ಯದಲ್ಲಿ ಬರ ಪರಿಸ್ಥಿತಿ ಕಂಡುಬಂದಿರುವ 113 ತಾಲೂಕುಗಳನ್ನು ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣಕ್ಕಾಗಿ (Ground Truthning) ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. 113 ತಾಲೂಕುಗಳ ಪೈಕಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ 62 ತಾಲೂಕುಗಳ ಬರ ಘೋಷಣೆಗೆ ಅರ್ಹವಾಗಿದೆ. ಆದರೆ, ಜಂಟಿ ಸಮೀಕ್ಷೆಯ ನಂತರ ಬೆಳೆ ಪರಿಸ್ಥಿತಿ ಮತ್ತೆ ಕುಸಿದಿದೆ ಎಂದು ವರದಿಗಳು ಬಂದಿದೆ. ಹಾಗಾಗಿ ಉಳಿದ 51 ತಾಲೂಕುಗಳಲ್ಲಿ ಮತ್ತೊಮ್ಮೆ ಜಂಟಿ ಸಮೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಉಳಿದ 51 ಮತ್ತು 83 ತಾಲೂಕುಗಳಲ್ಲಿ ಸಮೀಕ್ಷೆ ಮುಗಿಸಿ ಒಂದು ವಾರದೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ 134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆಯ ಬಗ್ಗೆ ತೀರ್ಮಾನಿಸಲಾಗುವುದು. ಜೊತೆಗೆ, ಘೋಷಣೆಯ ಬಳಿಕ ಕೇಂದ್ರ ಸರ್ಕಾರದಿಂದ ನೆರವಿಗಾಗಿ ಮನವಿ ಸಲ್ಲಿಸಲಿದ್ದೇವೆ ಎಂದು ಕೃಷ್ಣಭೈರೇಗೌಡ ಹೇಳಿದರು.

ಬರ ಘೋಷಣೆಯಾದ ದಿನದಿಂದ ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಲಾಗಿದೆ. ಕುಡಿಯುವ ನೀರು ಕೊರತೆ ಕಂಡುಬಂದ ವಸತಿ ಪ್ರದೇಶಗಳಲ್ಲಿ ಟ್ಯಾಂಕರ್ ಮುಖಾಂತರ ಅಥವಾ ಬಾಡಿಗೆ ಬೋರ್‌ವೆಲ್ ಮುಖಾಂತರ ತುರ್ತು ಕುಡಿಯುವ ನೀರು ಒದಗಿಸುವ ಖರ್ಚು ವೆಚ್ಚವನ್ನು ಎಸ್‌ಡಿಆರ್ ಎಫ್ (SDRF) ಮುಖಾಂತರ ಭರಿಸಲು ಅನುಮತಿಸಲಾಗಿದೆ ಎಂದು ಕಂದಾಯ ಸಚಿವರು ಹೇಳಿದರು.

“ಹಾಲಿ ಮೇವು ಲಭ್ಯವಿದ್ದು ಮುಂದಿನ ದಿನಗಳಲ್ಲಿ ಮೇವಿನ ಕೊರತೆ ನಿಭಾಯಿಸಲು ನೀರಿನ ವ್ಯವಸ್ಥೆ ಇರುವ ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ವಿತರಿಸಲು ಪಶು ಸಂಗೋಪನೆ ಇಲಾಖೆಗೆ 20 ಕೋಟಿ ರೂ. ಮೊತ್ತ ವಿತರಿಸಲು ತೀರ್ಮಾನಿಸಲಾಗಿದೆ. ಬರ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಧಿಕಾರಿಗಳ ಬಳಿ ಈಗಾಗಲೇ 529 ಕೋಟಿ ಅನುದಾನ ಲಭ್ಯವಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X