- ಕಳೆದ 48 ಗಂಟೆಗಳಲ್ಲಿ 31ಕ್ಕೆ ಏರಿದ ಸಾವಿನ ಸಂಖ್ಯೆ; 16 ಮಂದಿ ಮಕ್ಕಳು ಮೃತ್ಯು
- ವೈದ್ಯಕೀಯ ನಿರ್ಲಕ್ಷ್ಯದ ಆರೋಪವನ್ನು ತಳ್ಳಿ ಹಾಕಿದ ಆಸ್ಪತ್ರೆಯ ಡೀನ್
ಮಹಾರಾಷ್ಟ್ರದ ನಾಂದೇಡ್ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿದ ನಂತರ ನಿನ್ನೆ ತಡರಾತ್ರಿ ಏಳು ರೋಗಿಗಳು ಮೃತಪಟ್ಟಿದ್ದು, ಕಳೆದ 48 ಗಂಟೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಈಗ ಶಂಕರರಾವ್ ಚವ್ಹಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಏಳು ಮಂದಿಯಲ್ಲಿ ನಾಲ್ವರು ಮಕ್ಕಳಿದ್ದು, ಈವರೆಗೆ ಮೃತಪಟ್ಟ 31 ರೋಗಿಗಳ ಪೈಕಿ 16 ಮಂದಿ ಮಕ್ಕಳು ಎಂದು ತಿಳಿದುಬಂದಿದೆ.
ವೈದ್ಯಕೀಯ ನಿರ್ಲಕ್ಷ್ಯದ ಆರೋಪವನ್ನು ಆಸ್ಪತ್ರೆಯ ಡೀನ್ ಡಾ.ಶ್ಯಾಮರಾವ್ ವಾಕೋಡೆ ತಳ್ಳಿಹಾಕಿದ್ದು, ಔಷಧಿಗಳು ಅಥವಾ ವೈದ್ಯರ ಕೊರತೆಯಿಲ್ಲ. ರೋಗಿಗಳಿಗೆ ಸರಿಯಾದ ಆರೈಕೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ.
Maharashtra: The public health system is completely collapsed.
— زماں (@Delhiite_) October 3, 2023
– inadequate facilities and a shortage of staff and medicines led to the deaths.
Today 31 People died in Nanded
– Didn't Learn from Thane Civic Hospital Mistake where 17 people died in a day Last Month
We are not… pic.twitter.com/xjmehLzA50
ಸಾವಿನ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಛತ್ರಪತಿ ಸಂಭಾಜಿನಗರ ಜಿಲ್ಲೆಯಿಂದ ಮೂರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸಲ್ಲಿಸಲು ಆದೇಶ ನೀಡಲಾಗಿದೆ. ನಾನು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇನೆ” ಎಂದು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ನಿರ್ದೇಶಕ ಡಾ.ದಿಲೀಪ್ ಮಹೈಸೇಕರ್ ನಿನ್ನೆ ತಿಳಿಸಿದ್ದರು.
ಸರ್ಕಾರಿ ಆಸ್ಪತ್ರೆಯಲ್ಲಿನ ಸಾವಿನ ಸರಣಿ ವರದಿಯು ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದು, ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿದೆ.
#WATCH | Maharashtra | Dr Shyamrao Wakode, Dean of Govt Medical College Nanded says, "In the last 24 hours, 24 people lost their lives. Around 12 children (1-2 days old) died in the last 24 hours. These children were suffering from different ailments. Among the adults, there were… pic.twitter.com/FG6ZH3EYD9
— ANI (@ANI) October 3, 2023
“ಘಟನೆಯು ಅತ್ಯಂತ ನೋವಿನ, ಗಂಭೀರ ಮತ್ತು ಆತಂಕಕಾರಿ” ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿವರವಾದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ಆಗಸ್ಟ್ನಲ್ಲಿ ಥಾಣೆಯ ಸರ್ಕಾರಿ ಆಸ್ಪತ್ರೆಯಲ್ಲಿ ಅಲ್ಪಾವಧಿಯಲ್ಲಿ 18 ರೋಗಿಗಳು ಸಾವನ್ನಪ್ಪಿದ್ದ ಘಟನೆಯನ್ನು ಇದೇ ವೇಳೆ ಖರ್ಗೆ ನೆನಪಿಸಿದ್ದಾರೆ.
ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿಯನ್ನು ಗುರಿಯಾಗಿರಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಬಿಜೆಪಿ ಸರಕಾರ ಪ್ರಚಾರಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತದೆ, ಆದರೆ ಮಕ್ಕಳ ಔಷಧಿ ಖರೀದಿಸಲು ಹಣವಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.
“ಏಕನಾಥ್ ಶಿಂಧೆ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ನಾಂದೇಡ್ ಆಸ್ಪತ್ರೆಗೆ ತಕ್ಷಣ ಬೇಕಾದ ಎಲ್ಲ ರೀತಿಯ ನೆರವನ್ನು ಒದಗಿಸಲು ಪ್ರಾಶಸ್ತ್ಯ ನೀಡಬೇಕು” ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಹೇಳಿದ್ದಾರೆ.
ನಿನ್ನೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಆಸ್ಪತ್ರೆಯ ಡೀನ್ ಡಾ.ಶ್ಯಾಮರಾವ್ ವಾಕೋಡೆ, “ಸೆಪ್ಟೆಂಬರ್ 30-ಅಕ್ಟೋಬರ್ 1 ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ 12 ನವಜಾತ ಶಿಶುಗಳು 0-3 ದಿನಗಳ ವಯಸ್ಸಿನವರಾಗಿದ್ದಾರೆ ಮತ್ತು ತುಂಬಾ ಕಡಿಮೆ ತೂಕ ಹೊಂದಿದ್ದರು. ಮಕ್ಕಳ ವಿಭಾಗದಲ್ಲಿ 142 ದಾಖಲಾತಿಗಳಾಗಿದ್ದು, ಅದರಲ್ಲಿ 42 ಇನ್ನೂ ಗಂಭೀರ ಪ್ರಕರಣಗಳು. ಆಮ್ಲಜನಕ ಮತ್ತು ವೆಂಟಿಲೇಟರ್ ಸೌಲಭ್ಯಗಳಿವೆ. ರೋಗಿಗಳು ಹಿಂಗೋಲಿ, ಪರ್ಭಾನಿ ಮತ್ತು ವಾಶಿಮ್ ಸೇರಿದಂತೆ ನೆರೆಯ ಜಿಲ್ಲೆಗಳಿಂದ ಬಂದವರು. ಕೆಲವರು ನೆರೆಯ ತೆಲಂಗಾಣದ ಹಳ್ಳಿಗಳಿಂದ ಬಂದವರು” ಎಂದು ಅವರು ಹೇಳಿದರು ಎಂದು ಹೇಳಿದ್ದಾರೆ.
ಈಗಾಗಲೇ ಮೃತಪಟ್ಟಿರುವ 12 ವಯಸ್ಕರಲ್ಲಿ ಐವರು ಪುರುಷರು ಮತ್ತು ಏಳು ಮಹಿಳೆಯರ ಪೈಕಿ ನಾಲ್ವರು ವಯಸ್ಕರಿಗೆ ಹೃದಯ ಸಂಬಂಧಿ ಕಾಯಿಲೆಗಳು, ಒಬ್ಬರು ವಿಷಪ್ರಾಷಣ ಸಮಸ್ಯೆಯಿಂದ ಬಳಲುತ್ತಿದ್ದರು, ಒಬ್ಬರಿಗೆ ಯಕೃತ್ತಿನ ಸಮಸ್ಯೆ, ಇಬ್ಬರು ಕಿಡ್ನಿ ರೋಗಿಗಳು ಮತ್ತು ಒಂದು ಪ್ರಕರಣವು ಗರ್ಭಾವಸ್ಥೆಯಲ್ಲಿನ ತೊಡಕು ಹಾಗೂ ಮೂರು ಅಪಘಾತ ಪ್ರಕರಣಗಳಾಗಿತ್ತು ಎಂದು ನಾಂದೇಡ್ ಜಿಲ್ಲಾಡಳಿತ ನಿನ್ನೆ ಹೊರಡಿಸಿದ್ದ ಹೇಳಿಕೆಯಲ್ಲಿ ತಿಳಿಸಿತ್ತು.