₹97 ಕೋಟಿ ಅವ್ಯವಹಾರ ಆರೋಪ; ಇದು ಶುದ್ಧ ಸುಳ್ಳು ಎಂದ ಬೈರತಿ ಬಸವರಾಜ್‌

Date:

  • ಬೈರತಿ ಬಸವರಾಜ್ ಸೇರಿ 10 ಮಂದಿ ವಿರುದ್ಧ ದೂರು
  • ಲೋಕಾಯುಕ್ತದಲ್ಲಿ ದೂರು ದಾಖಲಿಸಿದ ಟಿ ಕೆ ಅಬ್ರಾಹಂ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲಿ ರಾಜ್ಯ ಬಿಜೆಪಿ ಮೇಲಿಂದ ಮೇಲೆ ಮುಜುಗರಕ್ಕೀಡಾಗುತ್ತಿದೆ. ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನದ ಬೆನ್ನಲ್ಲೇ ಸಚಿವ ಬೈರತಿ ಬಸವರಾಜ್ ಅವರು ₹97 ಕೋಟಿ ಅವ್ಯವಹಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಆರೋಪವನ್ನು ಸಚಿವರು ತಳ್ಳಿ ಹಾಕಿದ್ದಾರೆ.

ಕಾಮಗಾರಿ ಕೈಗೊಳ್ಳದೇ ₹97 ಕೋಟಿ ಅವ್ಯವಹಾರ ನಡೆಸಲಾಗಿದೆ ಎಂದು ಬೈರತಿ ಬಸವರಾಜ್ ಸೇರಿ 10 ಮಂದಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, “ನನ್ನ ಮೇಲೆ ಮಾಡಿರುವ ಆರೋಪಗಳು ಶುದ್ಧ ಸುಳ್ಳು. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಪ್ರಾಮಾಣಿಕವಾಗಿ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿರುವೆ ಸುಖಾಸುಮ್ಮನೆ ನನ್ನ ಮೇಲೆ ಆಪಾದನೆ ಮಾಡುವ ಕೆಲಸವಾಗುತ್ತಿದೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ: ವರುಣಾ ಮತ್ತು ಕೋಲಾರದಿಂದ ಸ್ಪರ್ಧೆ

“ಲೋಕಾಯುಕ್ತ ಪೊಲೀಸರು ಮತ್ತು ನ್ಯಾಯಾಲಯದ ಮೇಲೆ ನನಗೆ ಅಪಾರ ಗೌರವವಿದೆ. ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಿ ಅಗತ್ಯ ದಾಖಲೆಗಳನ್ನು ಒದಗಿಸುವೆ” ಎಂದು ಹೇಳಿದ್ದಾರೆ.

“ಚುನಾವಣೆ ಹತ್ತಿರ ಬರುತ್ತಿರುವುದರಿಂದ ಈ ರೀತಿ ಕುತಂತ್ರ ಮಾಡಲಾಗಿದ್ದು, ಮೊಸರಲ್ಲಿ ಕಲ್ಲು ಹುಡುಕುವ, ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡಿದ್ದು ನನಗೆ ತೀವ್ರ ಬೇಸರ ತರಿಸಿದೆ. ಚುನಾವಣೆಯಲ್ಲಿ ಜನರೇ ಪಾಠ ಕಲಿಸುವ ಮೂಲಕ ಉತ್ತರ ನೀಡಲಿದ್ದಾರೆ” ಎಂದಿದ್ದಾರೆ.

“ಕೆಆರ್ ಪುರ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಹಣ ಮಂಜೂರು ಮಾಡಿಸಿ ಕಾಮಗಾರಿ ಕೈಗೊಳ್ಳದೇ ಕಾಗದಪತ್ರದಲ್ಲೇ ಕಟ್ಟಡ ನಿರ್ಮಾಣ ಮಾಡಿಸಿರುವುದಾಗಿ ದಾಖಲೆ ಸೃಷ್ಟಿಸಿ ₹97 ಕೋಟಿ ವಂಚಿಸಿದ್ದಾರೆ” ಎಂಬುದು ಅಬ್ರಾಹಿಂ ಆರೋಪವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಎಫ್‌ಐಆರ್

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್...