ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ತಲೆತಗ್ಗಿಸುವಂಥ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ

Date:

Advertisements
  • ‘ಡಿಕೆಶಿ ಪ್ರಕರಣ ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಗೆ ಅಗೌರವ’
  • ‘ಕ್ಯಾಬಿನೆಟ್‍ನ ನಿರ್ಣಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ’

ಮೊನ್ನೆ ನಡೆದ ನಮ್ಮ ರಾಜ್ಯದ ಕ್ಯಾಬಿನೆಟ್‍ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಡೀ ದೇಶದಲ್ಲೇ ಕರ್ನಾಟಕವು ತಲೆತಗ್ಗಿಸುವಂತೆ ಮಾಡಿರುವ ನಿರ್ಣಯ ಅಂಗೀಕರಿಸಿದ್ದಾರೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಡಿ.ಕೆ.ಶಿವಕುಮಾರ್ ಅವರು ಗಳಿಸಿದ ಅಕ್ರಮ ಆಸ್ತಿ ಸಂಬಂಧ ಸಿಬಿಐ ತನಿಖೆ ನಡೆಯುತ್ತಿದೆ. ಸಿಬಿಐ ಮತ್ತು ಕೋರ್ಟ್‍ಗಳು ಅವರ ಮೇಲೆ ಚಾರ್ಜ್‍ಶೀಟ್ ಹಾಕಲು ಬೇಕಾದ ಪ್ರಕ್ರಿಯೆ ನಡೆಸುತ್ತಿವೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಮತ್ತು ಕರ್ನಾಟಕದ ಸಚಿವ ಸಂಪುಟವು ನಮ್ಮ ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಗೇ ಅಗೌರವ ಆಗುವಂಥ ನಿರ್ಣಯವನ್ನು ಕ್ಯಾಬಿನೆಟ್‍ನಲ್ಲಿ ತೆಗೆದುಕೊಂಡಿದ್ದಾರೆ” ಎಂದು ಆಕ್ಷೇಪಿಸಿದರು.

“ಕ್ಯಾಬಿನೆಟ್‍ನ ಈ ನಿರ್ಣಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಆ ನಿರ್ಣಯ ಮಾಡಲು ಸ್ಪೀಕರ್ ಸ್ಥಾನವನ್ನು ಅವರು ಬಳಕೆ ಮಾಡಿಕೊಂಡಿರುವುದು ದುರ್ದೈವದ ಸಂಗತಿ. ಸ್ಪೀಕರ್ ಸ್ಥಾನವು ಸಂವಿಧಾನಬದ್ಧವಾಗಿ ತನ್ನದೇ ಆದ ಘನತೆ, ಗೌರವವನ್ನು ಇಟ್ಟುಕೊಂಡಿದೆ. ಸ್ಪೀಕರ್ ಅವರ ಅನುಮತಿಯ ವ್ಯಾಪ್ತಿಯಲ್ಲೇ ಬರದೆ ಇರುವ ವಿಷಯಕ್ಕೆ ಸ್ಪೀಕರ್ ಅವರು ಅನುಮತಿ ಕೊಟ್ಟಿಲ್ಲವೆಂದು ಕಾರಣವನ್ನು ಹೇಳಿ ಕ್ಯಾಬಿನೆಟ್ ನಿರ್ಣಯ ಮಾಡಿದ್ದು ಕಾಂಗ್ರೆಸ್ ಸರಕಾರದ ಅಕ್ಷಮ್ಯ ಅಪರಾಧ” ಎಂದು ಟೀಕಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಮರಳಿ ಹೋಗುವ ಬಗ್ಗೆ ಕನಸು ಮನಸಿನಲ್ಲೂ ಯೋಚಿಸಿಲ್ಲ: ಗಾಲಿ ಜನಾರ್ದನ ರೆಡ್ಡಿ

“ಸಿದ್ದರಾಮಯ್ಯನವರು ಹಿರಿತನ ಉಳ್ಳವರು; ಅವರು ಯಾವ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದು ವ್ಯಕ್ತವಾಗುತ್ತದೆ. ಅವರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಲಿ. ಅವರ ಹಿರಿತನ, ಅನುಭವಕ್ಕೆ ತಕ್ಕಂತೆ ಕೆಲಸ ಮಾಡಲಿ. ಈ ರೀತಿಯ ಒತ್ತಡಕ್ಕೆ ಮಣಿದು, ಅಸಹಾಯಕರಾಗಿ ಅಥವಾ ಬಿಜೆಪಿ ಮೇಲೆ ಇನ್ನೇನೋ ಸಿಟ್ಟು, ದ್ವೇಷ ಸಾಧನೆಗೆ ಈ ರೀತಿ ರಾಜ್ಯದ ಜನರು, ನಮ್ಮ ವ್ಯವಸ್ಥೆಯೇ ತಲೆತಗ್ಗಿಸುವಂಥ ನಿರ್ಣಯವನ್ನು ಸಿದ್ದರಾಮಯ್ಯನವರು ಮಾಡಬಾರದು” ಎಂದು ಆಗ್ರಹಿಸಿದರು.

“ಇಡೀ ಕ್ಯಾಬಿನೆಟ್ ಮತ್ತು ಮುಖ್ಯಮಂತ್ರಿಗಳು ಈ ನಿರ್ಣಯ ತೆಗೆದುಕೊಂಡಿರುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಸಿಬಿಐ ತನಿಖೆ ಮುಂದುವರಿಯಬೇಕು. ಇದರಲ್ಲಿ ಸ್ಪೀಕರ್ ಪಾತ್ರ ಏನೂ ಇಲ್ಲ. ಸ್ಪೀಕರ್ ಅವರ ವ್ಯಾಪ್ತಿಗೆ ಬರದೇ ಇರುವ ವಿಷಯವಿದು” ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X