ಸಿಂಗಾಪುರ | ವಿಶ್ವದ ಪ್ರಮುಖ ಗುಪ್ತಚರ ಸಂಸ್ಥೆಗಳ ಮುಖ್ಯಸ್ಥರ ರಹಸ್ಯ ಸಮಾವೇಶ ; ವರದಿ

Date:

Advertisements
  • ಸಿಂಗಾಪುರ ದೇಶದಲ್ಲಿ ಶಾಂಗ್ರಿ-ಲಾ ಭದ್ರತಾ ಸಂಸ್ಥೆಗಳ ಸಂವಾದ ಸಭೆ ನಂತರ ಸಮಾವೇಶ
  • ರಹಸ್ಯ ಸಮಾವೇಶದ ಬಗ್ಗೆ ಮಾಹಿತಿ ಇಲ್ಲ ಎಂದ ಅಮೆರಿಕ ರಾಯಭಾರ ಕಚೇರಿ

ಸಿಂಗಾಪುರ ದೇಶದಲ್ಲಿ ಭಾನುವಾರ (ಜೂನ್‌ 4) ಶಾಂಗ್ರಿ-ಲಾ ಭದ್ರತಾ ಸಂಸ್ಥೆಗಳ ಸಂವಾದ ಸಭೆಯ ನಂತರ ಪ್ರತ್ಯೇಕ ಸ್ಥಳದಲ್ಲಿ ವಿಶ್ವದ ಪ್ರಮುಖ ಗುಪ್ತಚರ ಸಂಸ್ಥೆಗಳ ಸುಮಾರು 20ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ರಹಸ್ಯ ಸಮಾವೇಶ ನಡೆಸಿದ್ದಾರೆ ಎಂದು ರಾಯಿಟರ್ಸ್‌ ಸುದ್ದಿಸಂಸ್ಥೆ ವರದಿ ಮಾಡಿದೆ.

ಇಂತಹ ರಹಸ್ಯ ಸಭೆಗಳನ್ನು ಸರ್ಕಾರ ಆಯೋಜಿಸಿದೆ. ಹಲವಾರು ವರ್ಷಗಳಿಂದ ಭದ್ರತಾ ಶೃಂಗಸಭೆಯ ಜೊತೆಗೆ ಪ್ರತ್ಯೇಕ ಸ್ಥಳದಲ್ಲಿ ಇಂತಹ ರಹಸ್ಯ ಸಮಾವೇಶ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಈ ಹಿಂದೆ ರಹಸ್ಯ ಸಭೆಗಳು ವರದಿಯಾಗಿಲ್ಲ ಎಂದು ಹೇಳಲಾಗಿದೆ.

Advertisements

ಅಮೆರಿಕ ದೇಶದ ಪರವಾಗಿ ಅಲ್ಲಿಯ ರಾಷ್ಟ್ರೀಯ ಗುಪ್ತಚರ ನಿರ್ದೇಶಕ ಅವ್ರಿಲ್ ಹೈನ್ಸ್ ಸಿಂಗಾಪುರ ದೇಶದಲ್ಲಿನ ಗುಪ್ತಚರ ಮುಖ್ಯಸ್ಥರ ರಹಸ್ಯ ಸಮಾವೇಶದಲ್ಲಿ ಭಾಗವಹಿಸಿದ್ದರು. ಉದ್ವಿಗ್ನತೆಯ ಹೊರತಾಗಿಯೂ ಚೀನಾದ ಗುಪ್ತಚರ ನಿರ್ದೇಶಕರು ಉಪಸ್ಥಿತರಿದ್ದರು.

ಸಂಶೋಧನೆ ಮತ್ತು ವಿಶ್ಲೇಷಣಾ ಘಟಕವಾದ ಭಾರತದ ಸಾಗರೋತ್ತರ ಗುಪ್ತಚರ ಸಂಗ್ರಹಣಾ ಸಂಸ್ಥೆಯ ಮುಖ್ಯಸ್ಥ ಸಮಂತ್ ಗೋಯೆಲ್ ಕೂಡ ಭಾಗವಹಿಸಿದ್ದರು ಎಂದು ಭಾರತೀಯ ಮಾಧ್ಯಮಗಳು ವರದಿ ಮಾಡಿವೆ.

ಸಿಂಗಾಪುರ ದೇಶದ ಅಮೆರಿಕ ರಾಯಭಾರ ಕಚೇರಿಯು ಗುಪ್ತಚರ ಅಧಿಕಾರಿಗಳ ರಹಸ್ಯ ಭೇಟಿಯ ಬಗ್ಗೆ ಯಾವುದೇ ಮಾಹಿತಿ ಹೊಂದಿಲ್ಲ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ರೈಲು ದುರಂತ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

ಈ ಬಗ್ಗೆ ಚೀನಾ ಮತ್ತು ಭಾರತ ಸರ್ಕಾರಗಳು ಸದ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

“ಗುಪ್ತಚರ ಸಮಾವೇಶವು ಅಂತಾರಾಷ್ಟ್ರೀಯ ಕಾರ್ಯಸೂಚಿಯ ಒಂದು ಪ್ರಮುಖ ಭಾಗವಾಗಿದೆ” ಎಂದು ಗುಪ್ತಚರ ಸಭೆಯ ಆಯೋಜನೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

“ರಹಸ್ಯ ಸಮಾವೇಶದಲ್ಲಿ ಗುಪ್ತಚರ ಸಂಸ್ಥೆ ಅಧಿಕಾರಿಗಳು ಕೆಲವು ಸಂಕೇತಗಳ ಮೂಲಕ ಚರ್ಚೆ ನಡೆಸಿದರು. ಇದು ಔಪಚಾರಿಕ ಮತ್ತು ಮುಕ್ತ ರಾಜತಾಂತ್ರಿಕತೆ ಕಠಿಣವಾಗುವ ಸಂದರ್ಭದಲ್ಲಿ ಅನುಕೂಲವಾಗುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದರು.

ಯಾವ ವಿಷಯದ ಕುರಿತು ಚರ್ಚೆ ನಡೆಸಲಾಯಿತು ಎಂದು ಬಹಿರಂಗಪಡಿಸಲು ಅಧಿಕಾರಿ ನಿರಾಕರಿಸಿದರು ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X