ಆಧಾರ್‌ – ಪ್ಯಾನ್‌ ಕಾರ್ಡ್‌ ಜೋಡಣೆ | ಇದು ಹಗಲು ದರೋಡೆ‌ ಅಲ್ಲದೆ ಮತ್ತೇನು: ಜೆಡಿಎಸ್ ಪ್ರಶ್ನೆ

Date:

Advertisements
  • ಆಧಾರ್ ಜೋಡಿಸದಿದ್ದರೆ ದಂಡ ವಿಧಿಸಿ ಎನ್ನುವ ಕಾನೂನು ಎಲ್ಲಿದೆ
  • ಕೇಂದ್ರ ಸರ್ಕಾರದ್ದು ಸರ್ವಾಧಿಕಾರಿ ನಡೆ ಎಂದ ಜೆಡಿಎಸ್‌

ಸಾವಿರ ರೂಪಾಯಿ ದುಬಾರಿ ಶುಲ್ಕದೊಂದಿಗೆ ಆಧಾರ್ ಮತ್ತು ಪ್ಯಾನ್‌ ಕಾರ್ಡ್‌ ಜೋಡಣೆ ಮಾಡಬೇಕೆಂದಿರುವ ಕೇಂದ್ರ ಸರ್ಕಾರದ ನಿರ್ಧಾರ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್‌ “ಇದು ಹಗಲು ದರೋಡೆ ಅಲ್ಲದೆ ಮತ್ತೇನು?” ಎಂದು ಪ್ರಶ್ನಿಸಿದೆ.

ಪ್ಯಾನ್‌ ಮತ್ತು ಆಧಾರ್ ಲಿಂಕ್‌ ಮಾಡುವ ದಿನಾಂಕವನ್ನು ಮಾರ್ಚ್ 31 ಕೊನೆಯ ದಿನಾಂಕ ಎಂದು ಹೇಳಲಾಗಿತ್ತು. ಆದರೆ, ಜೂನ್‌ 30ರವರೆಗೆ ಸರ್ಕಾರ ಗಡುವು ವಿಸ್ತರಿಸಿದೆ. ದುಬಾರಿ ಶುಲ್ಕದೊಂದಿಗೆ ಪ್ಯಾನ್‌ ಜೋಡಣೆ ಮಾಡುವ ಪ್ರಕ್ರಿಯೆ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್‌, “ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆ ಮಾಡಲು ಸಾವಿರ ರೂಪಾಯಿ ಶುಲ್ಕ ನಿಗದಿ ಮಾಡಿರುವುದು ಹಗಲು ದರೋಡೆ‌ ಅಲ್ಲದೆ ಮತ್ತೇನು? ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಜನಸಾಮಾನ್ಯರ ದುಡ್ಡು ಈ ರೀತಿ ಸುಲಿಗೆ ‌ಮಾಡುವುದು ಅಭ್ಯಾಸವಾಗಿಬಿಟ್ಟಿದೆ. ಇವರನ್ನು ಅಧಿಕಾರಕ್ಕೆ ತಂದು ಜನಸಾಮಾನ್ಯರು ಪರಿತಪಿಸುತ್ತಿದ್ದಾರೆ” ಎಂದು ವ್ಯಂಗ್ಯವಾಡಿದೆ.

Advertisements

“ನಕಲಿ ಪ್ಯಾನ್ ಕಾರ್ಡು ಹೊಂದಿದವರನ್ನು ಹಿಡಿಯಲು ಈ ಕ್ರಮ ಎಂದು ಪ್ರಲಾಪ‌ ಕೊಚ್ಚುವವರೆ, ನಾಲ್ಕು ಜನ ಕಳ್ಳರನ್ನು ಹಿಡಿಯಲು ಸಕಲ ಜನಸಾಮಾನ್ಯರೇಕೆ ಶುಲ್ಕ ತೆರಬೇಕು? ಇದನ್ನು ದುಡ್ಡು ಕೊಟ್ಟು ಮಾಡಿಸಿಕೊಳ್ಳುವಂತೆ ಕಡ್ಡಾಯಗೊಳಿಸಿದ್ದು ಏಕೆ? ಹೀಗೆ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ವ್ಯವಸ್ಥೆಯೇ ಜನದ್ರೋಹಿಯಾದದ್ದು. ನಾಚಿಕೆಯಾಗಬೇಕು” ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದೆ.

“ಈ ಜೋಡಣೆ ಪ್ರಕ್ರಿಯೆ ಈ ತಿಂಗಳೊಳಗೆ ಮಾಡದಿದ್ದರೆ 10 ಸಾವಿರ ರೂ. ದಂಡ ತೆರಬೇಕಂತೆ! ಪ್ಯಾನ್ ಕಾರ್ಡ್‌ಗೆ ಆಧಾರ್ ಜೋಡಿಸದಿದ್ದರೆ ಅಥವಾ ತಡವಾಗಿ ಜೋಡಿಸುವುದಕ್ಕೆ ದಂಡ ವಿಧಿಸಲು ಯಾವ ಕಾನೂನಿನಲ್ಲಿ ಅವಕಾಶವಿದೆ? ಇದು ಸರ್ವಾಧಿಕಾರಿ ನಡೆ. ಹೇಳುವವರು-ಕೇಳುವವರು ಇಲ್ಲದ ಕುಸಿದ ವ್ಯವಸ್ಥೆಗೆ ಹಿಡಿದ ಕನ್ನಡಿ” ಎಂದು ಹೇಳಿದೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X