ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿಗೆ ಲಾಭ: ಸಚಿವ ಚಲುವರಾಯಸ್ವಾಮಿ

Date:

Advertisements

ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಲಾಭ ಪಡೆದಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ವಿಚಾರವಾಗಿ, ದೆಹಲಿ ಫಲಿತಾಂಶದಲ್ಲಿ ವಿಶೇಷ ಏನಿಲ್ಲ. ಕೇಜ್ರಿವಾಲ್ ಇಂಡಿಯಾ ಒಕ್ಕೂಟದ ಜೊತೆ ಹೋಗಿದ್ದರೆ ಬಿಜೆಪಿಗೆ ಗೆಲ್ಲುವ ಅವಕಾಶ ಇರಲಿಲ್ಲ. ಆದರೆ ಕೇಜ್ರಿವಾಲ್ ಸ್ವಲ್ಪ ದುಡುಕಿ ನಿರ್ಧಾರ ಮಾಡಿದರು. ಹೀಗಾಗಿ ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಲಾಭ ಪಡೆದಿದೆ ಎಂದರು.

ಕಳೆದ ಬಾರಿಯೂ ಕೃಷಿ ಇಲಾಖೆಗೆ ಹೊಸ ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡಿದ್ದರು. ಈ ಬಾರಿಯೂ ಉತ್ತಮ ಕಾರ್ಯಕ್ರಮಗಳು ಸಿಗುವ ನಿರೀಕ್ಷೆ ಇದೆ. ಇನ್ನೂ ಸಚಿವಾಕಾಂಕ್ಷಿಗಳಿಗೆ ನಿಗಮ ಮಂಡಳಿ ನೀಡಿ ಸಮಾಧಾನಪಡಿಸಿರುವ ವಿಚಾರವಾಗಿ ಮಾತನಾಡಿದ ಸಚಿವರು, ಸಚಿವಾಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಅವಕಾಶ ಸಿಗಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹುದ್ದೆ ಒಳ್ಳೆಯ ಹುದ್ದೆಯಾಗಿದ್ದು, ರಾಜ್ಯಾದ್ಯಂತ ಕೆಲಸ ಮಾಡಲು ಉತ್ತಮ ಅವಕಾಶವಿದೆ. ನರೇಂದ್ರ ಸ್ವಾಮಿಯವರು ಎಂಜಿನಿಯರ್ ಆಗಿದ್ದರಿಂದ ಅವಕಾಶ ಸಿಕ್ಕಿದೆ ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಮಂಡ್ಯ ಮಿಮ್ಸ್ ಸಮಸ್ಯೆಯ ಆಗರ
ಮಿಮ್ಸ್‌ನಲ್ಲಿ ತುಂಬಾ ಸಮಸ್ಯೆ ಇದೆ. ಹೀಗಾಗಿ ಜಿಲ್ಲಾಧಿಕಾರಿ ಮೂಲಕ ಸಮಸ್ಯೆಗಳ ಪಟ್ಟಿ ಮಾಡಿಸಲಾಗಿದೆ. ಮಿಮ್ಸ್‌ಗೆ ಮೇಜರ್ ಸರ್ಜರಿ ಆಗಬೇಕು. ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಶೀಘ್ರವೇ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.

ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೇರಿದೆ. ಆದರೆ ಕಳೆದ 11 ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್ ಸೋಲು ಕಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X