ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ಎಎಪಿ ನಾಯಕ ಸತ್ಯೇಂದ್ರ ಜೈನ್‌; ಐಸಿಯುನಲ್ಲಿ ಚಿಕಿತ್ಸೆ

Date:

Advertisements
  • ಅನಾರೋಗ್ಯದ ಕಾರಣ ಸಫ್ಜರ್‌ಜಂಗ್‌ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯೇಂದ್ರ ಜೈನ್
  • ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈನ್‌ ಅವರನ್ನು ಬಂಧಿಸಿರುವ ಇಡಿ

ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್‌ ಅವರು ದೆಹಲಿಯ ತಿಹಾರ್‌ ಜೈಲಿನ ಸ್ನಾನಗೃಹದಲ್ಲಿ ಗುರುವಾರ (ಮೇ 25) ಕುಸಿದು ಬಿದ್ದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ದೆಹಲಿಯ ಮಾಜಿ ಸಚಿವರೂ ಆಗಿರುವ ಜೈನ್‌ ಅವರು ಬೆಳಿಗ್ಗೆ ಜೈಲಿನ ಸ್ನಾನಗೃಹದಲ್ಲಿ ತಲೆ ತಿರುಗಿ ಬಿದ್ದಿದ್ದರು.

ಕೂಡಲೇ ಸತ್ಯೇಂದ್ರ ಜೈನ್‌ ಅವರನ್ನು ದೀನ್‌ ದಯಾಳ್‌ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ನಂತರ ಅವರನ್ನು ಲೋಕ ನಾಯಕ ಜೈಪ್ರಕಾಶ್‌ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಎಎಪಿ ಟ್ವೀಟ್‌ ಮೂಲಕ ತಿಳಿಸಿದೆ.

Advertisements

ಜೈನ್‌ ಅವರನ್ನು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.

ಜೈನ್‌ ಅವರು ಹಿಂದೆಯೂ ಸ್ನಾನಗೃಹದಲ್ಲಿ ಬಿದ್ದಿದ್ದರು. ಪರಿಣಾಮ ಅವರ ಬೆನ್ನಿನ ಮೂಳೆಗೆ ಗಂಭೀರವಾದ ಗಾಯವಾಗಿತ್ತು ಎಂದು ಎಎಪಿ ಹೇಳಿದೆ.

ವಿಚಾರಣಾಧೀನ ಕೈದಿಯಾಗಿರುವ ಸತ್ಯೇಂದ್ರ ಜೈನ್‌ ಅವರು ಬೆಳಿಗ್ಗೆ ಸುಮಾರು 6 ಗಂಟೆ ವೇಳೆ ಕೇಂದ್ರ ಕಾರಾಗೃಹದ ವೈದ್ಯಕೀಯ ತಪಾಸಣೆ ಕೊಠಡಿ ಸ್ನಾನಗೃಹದಲ್ಲಿ ಜಾರಿ ಬಿದ್ದಿದ್ದಾರೆ. ನಿಶ್ಯಕ್ತಿಯ ಕಾರಣದಿಂದ ಅವರನ್ನು ಕಾರಾಗೃಹದ ಆಸ್ಪತ್ರೆಯಲ್ಲಿ ಇರಿಸಿ ನಿಗಾ ಇಡಲಾಗಿತ್ತು ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೇರಳದಲ್ಲಿ ಮೊದಲ ಬಾರಿಗೆ ಮನೆಕೆಲಸಗಾರರ ಹಕ್ಕುಗಳ ರಕ್ಷಣೆಗಾಗಿ ಮಸೂದೆ

ಜೈನ್‌ ಅವರಿಗೆ ಎಲ್ಲ ಅಗತ್ಯ ಪರೀಕ್ಷೆಗಳನ್ನು ಮಾಡಿಸಲಾಯಿತು. ಜೈನ್‌ ಅವರು ಈಗಾಗಲೇ ಬೆನ್ನುಮೂಳೆ ನೋವಿನಿಂದ ಬಳಲುತ್ತಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಜೈನ್‌ ಅವರು ಜಾರಿ ಬಿದ್ದಿದ್ದರಿಂದ ಅವರಿಗೆ ತೀವ್ರ ಸ್ವರೂಪದಲ್ಲಿ ನೋವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಜೈನ್‌ ಅವರು ಶೀಘ್ರ ಚೇತರಿಸಿಕೊಳ್ಳಲಿ. ಈ ಪ್ರತಿಕೂಲ ಸನ್ನಿವೇಶದ ವಿರುದ್ದ ಹೋರಾಡಲು ದೇವರು ಅವರಿಗೆ ಶಕ್ತಿ ನೀಡಲಿ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ತಿಳಿಸಿದ್ದಾರೆ.

ಸತ್ಯೇಂದ್ರ ಜೈನ್‌ ಅವರು ಸೋಮವಾರ ಅನಾರೋಗ್ಯದ ಕಾರಣ ದೆಹಲಿಯ ಸಫ್ಜರ್‌ಜಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X