ದೆಹಲಿ ವಿಧಾನಸಭೆ ಚುನಾವಣೆ | ಎಎಪಿಯ ಅಂತಿಮ ಅಭ್ಯರ್ಥಿ ಪಟ್ಟಿ ಬಿಡುಗಡೆ

Date:

Advertisements

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ (ಡಿಸೆಂಬರ್ 15) 38 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತೊಮ್ಮೆ ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್‌ನಲ್ಲಿ ಎಎಪಿ ಟಿಕೆಟ್‌ನಲ್ಲಿ ಕಣಕ್ಕಿಳಿಯಲಿದ್ದಾರೆ.

ಇದನ್ನು ಓದಿದ್ದೀರಾ? ಆರೋಪ-ಜೈಲು-ಜಾಮೀನು; ದೆಹಲಿಯನ್ನು ಮತ್ತೆ ಗೆಲ್ಲುವರೇ ಕೇಜ್ರಿವಾಲ್‌?

Advertisements

ಕಸ್ತೂರ್ಬಾ ನಗರದಲ್ಲಿ ಹಾಲಿ ಶಾಸಕ ಮದನ್ ಲಾಲ್ ಬದಲಿಗೆ ರಮೇಶ್ ಪೆಹಲ್ವಾನ್‌ಗೆ ಎಎಪಿ ಟಿಕೆಟ್ ನೀಡಿದೆ. ರಮೇಶ್ ಪೆಹಲ್ವಾನ್‌ ಮತ್ತು ಕೌನ್ಸಿಲರ್ ಕುಸುಮ್ ಲತಾ ಇಂದೇ ಬಿಜೆಪಿಯಿಂದ ಎಎಪಿಗೆ ಸೇರ್ಪಡೆಯಾಗಿದ್ದಾರೆ.

ಇನ್ನು ಎಎಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಗೋಪಾಲ್ ರೈ (ಬಾಬರ್‌ಪುರ), ಅಮಾನತುಲ್ಲಾ ಖಾನ್ (ಓಖ್ಲಾ) ಮತ್ತು ಸತ್ಯೇಂದ್ರ ಕುಮಾರ್ ಜೈನ್ (ಶಕುರ್ ಬಸ್ತಿ) ಹೆಸರುಗಳಿವೆ. ಮುಂಬರುವ ದೆಹಲಿ ಚುನಾವಣೆಗೆ ಎಎಪಿ ತನ್ನ 20 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ.

ಎಎಪಿಯ ಮೊದಲ ಅಭ್ಯರ್ಥಿ ಪಟ್ಟಿಯಲ್ಲಿ, 11 ಹೆಸರುಗಳನ್ನು ಪ್ರಕಟಿಸಲಾಗಿತ್ತು. ಆ ಪೈಕಿ ಆರು ಮಂದಿ ಈ ಹಿಂದೆ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಎಎಪಿಗೆ ಸೇರ್ಪಡೆಗೊಂಡ ನಾಯಕರಾಗಿದ್ದು ಮೂವರು ಎಎಪಿ ನಾಯಕರಾಗಿದ್ದಾರೆ.

ಇದನ್ನು ಓದಿದ್ದೀರಾ? ಬ್ರೇಕಿಂಗ್ ನ್ಯೂಸ್ | ಕೈಲಾಶ್ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ಮಾಜಿ ಶಾಸಕ ಅನಿಲ್ ಝಾ ಎಎಪಿ ಸೇರ್ಪಡೆ

ಎರಡನೇ ಪಟ್ಟಿಯಲ್ಲಿ ಎಎಪಿ 15 ಹಾಲಿ ಶಾಸಕರ ಹೆಸರನ್ನು ಬದಲಿಸಿದೆ. ಬದಲಿಗೆ ಎಎಪಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಾಯಕರನ್ನು ಆಯ್ಕೆ ಮಾಡಿದೆ.

ದೆಹಲಿ ವಿಧಾನಸಭೆಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಶೀಘ್ರದಲ್ಲೇ ಚುನಾವಣೆಯ ಘೋಷಣೆಯನ್ನು ಮಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X