ಗಾಝಾದ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ: ಬೈಡನ್ ಜೊತೆಗಿನ ಸಭೆ ರದ್ದುಗೊಳಿಸಿದ ಅರಬ್ ದೇಶಗಳ ನಾಯಕರು

Date:

Advertisements

ಗಾಝಾದ ಆಸ್ಪತ್ರೆಯೊಂದರ ಮೇಲೆ ಇಸ್ರೇಲ್ ವಾಯು ದಾಳಿ ನಡೆಸಿ, ಸುಮಾರು 500ಕ್ಕೂ ಹೆಚ್ಚು ಜನರ ಬಲಿ ಪಡೆದುಕೊಂಡ ಘಟನೆಯ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜೊತೆಗಿನ ಸಭೆಯನ್ನು ಅರಬ್ ದೇಶಗಳ ನಾಯಕರು ರದ್ದುಗೊಳಿಸಿದ್ದಾರೆ.

ಗಾಝಾದ ಆಸ್ಪತ್ರೆಯೊಂದರ ಮೇಲೆ ವಾಯು ದಾಳಿ ನಡೆಸಿ, ಸುಮಾರು 500ಕ್ಕೂ ಹೆಚ್ಚು ಜನರ ಬಲಿ ಪಡೆದುಕೊಂಡ ಘಟನೆಯ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜೊತೆಗಿನ ಸಭೆಯನ್ನು ಅರಬ್ ದೇಶಗಳ ನಾಯಕರು ರದ್ದುಗೊಳಿಸಿರುವುದಾಗಿ ‘ಅಲ್-ಜಝೀರಾ’ ವರದಿ ಮಾಡಿದೆ.

ಅರಬ್ ನಾಯಕರು ಶೃಂಗಸಭೆಯನ್ನು ರದ್ದುಗೊಳಿಸಿರುವ ಬೆಳವಣಿಗೆಯು ಅಮೆರಿಕದ ಅಧ್ಯಕ್ಷರಿಗಾದ ದೊಡ್ಡ ಹಿನ್ನಡೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವಿಶ್ಲೇಷಣೆ ಮಾಡಿವೆ. ಯುದ್ಧ ಈವರೆಗೆ ಮುಂದುವರೆಯಲು ಅಮೆರಿಕಾವು ಇಸ್ರೇಲ್‌ಗೆ ನೀಡಿದ ನೇರ ಬೆಂಬಲವೇ ಕಾರಣ ಎಂದು ಮಾನವ ಹಕ್ಕುಗಳ ಹೋರಾಟಗಾರರು ಆರೋಪಿಸುತ್ತಿದ್ದಾರೆ.

Advertisements

ಇಸ್ರೇಲ್‌ಗೆ ಬೆಂಬಲ ಸೂಚಿಸುವುದಕ್ಕಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಇಂದು ಇಸ್ರೇಲ್‌ಗೆ ಆಗಮಿಸುತ್ತಿದ್ದಾರೆ. ಇದರ ಮುನ್ನಾದಿನವೇ ಗಾಝಾದ ಅಹ್ಲಿ ಅರಬ್ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ದಾಳಿಯಿಂದ 500ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ಇಸ್ರೇಲ್‌ನಿಂದ ಅಮಾನವೀಯ ಕೃತ್ಯ: ಆಸ್ಪತ್ರೆ ಮೇಲೆ ಬಾಂಬ್ ದಾಳಿ; 500ಕ್ಕೂ ಹೆಚ್ಚು ಮಂದಿ ಬಲಿ

ಈ ಘಟನೆಯ ಬೆನ್ನಲ್ಲೇ, ಜೋರ್ಡಾನ್‌ನ ವಿದೇಶಾಂಗ ಸಚಿವ ಅಬ್ದುಲ್ಲಾ ಹೇಳಿಕೆ ನೀಡಿದ್ದು, ಈಜಿಪ್ಟ್ ಅಧ್ಯಕ್ಷ ಅಬುಲ್ ಫತ್ತಾಹ್ ಎಲ್-ಸಿಸ್ಸಿ ಮತ್ತು ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಜೋ ಬೈಡನ್ ನಡೆಸಬೇಕಿದ್ದ ಶೃಂಗಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದ್ದಾರೆ.

‘ಆಸ್ಪತ್ರೆ ಘಟನೆಗೆ ಹಮಾಸ್ ಕಾರಣ’ ಎಂದು ಆರೋಪಿಸಿದ ಇಸ್ರೇಲ್ ಪ್ರಧಾನಿ

ಈ ನಡುವೆ ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಗಾಝಾದ ಅಹ್ಲಿ ಅರಬ್ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ ನಡೆಸಿಲ್ಲ. ಈ ದುರಂತಕ್ಕೆ ಗಾಝಾದಲ್ಲಿನ ಹಮಾಸ್‌ ಅವರೇ ಹೊಣೆಗಾರರಾಗಿದ್ದಾರೆ. ಅವರು ಇಸ್ರೇಲ್ ಅನ್ನು ಗುರಿಯಾಗಿರಿಸಿ ಹಾರಿಸಿರುವ ರಾಕೆಟ್ ಆಸ್ಪತ್ರೆಗೆ ಬಿದ್ದಿದೆ ಎಂದು ಆರೋಪಿಸಿದ್ದಾರೆ.

ಇಸ್ರೇಲ್ ಪ್ರಧಾನಿ ಓರ್ವ ಸುಳ್ಳುಗಾರ: ವಿಶ್ವಸಂಸ್ಥೆಯ ಪ್ಯಾಲೆಸ್ತೀನ್ ರಾಯಭಾರಿ

ಇಸ್ರೇಲ್ ಪ್ರಧಾನಿಯ ಹೇಳಿಕೆಯ ಬಗ್ಗೆ ಪತ್ರಕರ್ತರೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ವಿಶ್ವಸಂಸ್ಥೆಯ ಪ್ಯಾಲೆಸ್ತೀನ್ ರಾಯಭಾರಿ ರಿಯಾದ್ ಮನ್ಸೂರ್, ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಓರ್ವ ಸುಳ್ಳುಗಾರ. ಈ ಆಸ್ಪತ್ರೆಯ ಸುತ್ತಲೂ ಹಮಾಸ್‌ನ ನೆಲೆ ಇದೆ ಎಂದು ಭಾವಿಸಿ ಇಸ್ರೇಲ್ ದಾಳಿ ಮಾಡಿದೆ ಎಂದು ಅವರ ಡಿಜಿಟಲ್ ವಕ್ತಾರನೋರ್ವ ಟ್ವೀಟ್ ಮಾಡಿದ್ದಾರೆ. ಆ ನಂತರ ಅವರು ಆ ಟ್ವೀಟ್ ಅನ್ನು ಅಳಿಸಿದ್ದಾರೆ. ಆ ಟ್ವೀಟ್‌ನ ಪ್ರತಿ ನಮ್ಮ ಬಳಿ ಇದೆ. ಈಗ ಅವರು ಕಥೆಯನ್ನು ಬದಲಾಯಿಸಿದ್ದಾರೆ. ಪ್ಯಾಲೆಸ್ತೀನಿಯನ್ನರನ್ನು ದೂಷಿಸಲು ಈ ಪ್ರಯತ್ನ ಎಂದು ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X