ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ | ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ಎಚ್ ಡಿ ರೇವಣ್ಣ

Date:

Advertisements

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ, ಶಾಸಕ ಎಚ್‌ ಡಿ ರೇವಣ್ಣ ಅವರನ್ನು ಬೆಂಗಳೂರು ನ್ಯಾಯಾಲಯದ ನ್ಯಾಯಾಧೀಶರು ಮೂರು ದಿನಗಳ ಕಾಲ ಸಿಐಡಿ ಎಸ್‌ಐಟಿ (ವಿಶೇಷ ತನಿಖಾ ತಂಡದ) ವಶಕ್ಕೆ ನೀಡಿದ್ದಾರೆ.

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಪುತ್ರ ಹಾಗೂ ಜೆಡಿಎಸ್‌ ನಾಯಕರಾಗಿರುವ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ಹದಿನೇಳನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಕುಮಾರ್‌ ಎಂ ಕಟ್ಟಿಮನಿ ಅವರ ನಿವಾಸದಲ್ಲಿ ರವಿವಾರ ಸಂಜೆ ಎಸ್‌ಐಟಿ ಹಾಜರುಪಡಿಸಿತು.

ವಿಚಾರಣೆ ವೇಳೆ ಐದು ದಿನಗಳ ಕಾಲ ರೇವಣ್ಣ ಅವರನ್ನು ವಶಕ್ಕೆ ನೀಡಬೇಕೆಂದು ಕೋರಿ ರಿಮ್ಯಾಂಡ್‌ ಅರ್ಜಿ ಸಲ್ಲಿಸಿದ ಎಸ್‌ಐಟಿ “ಇದೊಂದು ಗಂಭೀರ ಪ್ರಕರಣ. ರೇವಣ್ಣ ಅವರು ಮಾಜಿ ಸಚಿವರಾಗಿದ್ದು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ” ಎಂದು ತಿಳಿಸಿತು.

Advertisements

ಇತ್ತ ರೇವಣ್ಣ ಪರ ವಕೀಲರ ಮೂರ್ತಿ ಡಿ ನಾಯಕ್‌ ಅವರು, “ಅಪಹರಣ ಪ್ರಕರಣಕ್ಕೂ ರೇವಣ್ಣನವರಿಗೂ ಯಾವುದೇ ಸಂಬಂಧ ಇಲ್ಲ. ಸಂತ್ರಸ್ತೆ ಈಗಾಗಲೇ ದೊರೆತಿದ್ದಾರೆ. ರೇವಣ್ಣನವರ ಪಾತ್ರದ ಬಗ್ಗೆ ಎಸ್‌ಐಟಿ ಕೂಡ ಏನನ್ನೂ ತಿಳಿಸಿಲ್ಲ. ಯಾವುದೇ ಸಾಕ್ಷ್ಯ ನಾಶ ಮಾಡುವುದಿಲ್ಲ” ಎಂದು ಭರವಸೆ ನೀಡಿದರು.

ಇದನ್ನು ಬಲವಾಗಿ ವಿರೋಧಿಸಿದ ಎಸ್‌ಐಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹದಿನೈದು ಅಂಶಗಳನ್ನು ಪ್ರಸ್ತಾಪಿಸಿತು. ಈ ಹಿನ್ನೆಲೆಯಲ್ಲಿ ರೇವಣ್ಣನವರನ್ನು ತನ್ನ ವಶಕ್ಕೆ ನೀಡಬೇಕೆಂದು ಮನವಿ ಮಾಡಿತು. ವಾದ ಆಲಿಸಿದ ನ್ಯಾಯಾಧೀಶರು ಮೇ 8ರವರೆಗೆ ಎಸ್‌ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದರು.

ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಸಂತ್ರಸ್ತರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರು ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ದೇವೇಗೌಡರ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಕೂಡಲೇ ಬಂಧಿಸಲಾಗಿತ್ತು.

ನಿನ್ನೆ ಎಸ್‌ಐಟಿ ಕಚೇರಿಯಲ್ಲಿದ್ದ ಅವರನ್ನು ಇಂದು (ಭಾನುವಾರ ಸಂಜೆ) ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಆ ಬಳಿಕ ನ್ಯಾಯಾಧೀಶರೆದುರು ಹಾಜರುಪಡಿಸಲಾಗಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X