ಡಿಕೆ ಶಿವಕುಮಾರ್ ಸವಾಲನ್ನು ಸ್ವೀಕರಿಸಿದ್ದೇನೆ: ಮಾಜಿ ಸಿಎಂ ಕುಮಾರಸ್ವಾಮಿ

Date:

Advertisements
  • ನಾನೇನು ಕದ್ದು ಓಡಿ ಹೋಗಿ, ಪಲಾಯನ ಮಾಡಲ್ಲ: ಎಚ್‌ಡಿ ಕುಮಾರಸ್ವಾಮಿ
  • ‘ಸಿದ್ದರಾಮಯ್ಯ ಅವರ ಆರ್ಥಿಕ ಶಿಸ್ತು ಎಂತಹದ್ದು ಎಂಬುದು ಕಂಡಿದ್ದೇನೆ’

ರಾಮನಗರ ಜಿಲ್ಲೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಹಿರಂಗ ಚರ್ಚೆಗೆ ಕರೆದಿರುವ ಸವಾಲನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ನಾನೇನು ಕದ್ದು ಓಡಿ ಹೋಗಿ, ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ವಿಜಯದಶಮಿಯ ಆಸುಪಾಸಿನಲ್ಲಿ ಹಬ್ಬದ ಆಚರಣೆ ಜೊತೆಗೆ ಸಿಎಂ ಹಾಗೂ ಡಿಸಿಎಂ ವೈಯಕ್ತಿಕವಾಗಿ ನನ್ನ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಅದಕ್ಕೆ ಸಂಬಂಧಪಟ್ಟ ಎರಡು ಮೂರು ವಿಚಾರಗಳಿಗೆ ಡಿಸಿಎಂ ನನಗೆ ಸವಾಲು ಹಾಕಿದ್ದಾರೆ. ಅದಕ್ಕೆ ನಾನು ಚರ್ಚೆಗೆ ಸಿದ್ದನಿದ್ದೇನೆ. ನಾನು ಸ್ವೀಕಾರ ಮಾಡುತ್ತೇನೆ” ಎಂದರು.

“ಇವತ್ತಿನ ಆರ್ಥಿಕ ಪರಿಸ್ಥಿತಿಗೆ ಹಿಂದಿನ ಬಿಜೆಪಿ ಕಾರಣ ಎಂದು ಸಿಎಂ ಹೇಳಿದ್ದಾರೆ. ಇದಕ್ಕೆ ಶ್ವೇತ ಪತ್ರ ಹೊರಡಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಸ್ವಾಗತ ಮಾಡುತ್ತೇನೆ. ಅವರು ಕೊಟ್ಟಂತಹ ತೀರ್ಮಾನಗಳ ಆಧಾರದ ಮೇಲೆ ಬಿಜೆಪಿ ಸರ್ಕಾರ ನಡೆದಿದೆ. ಸಿದ್ದರಾಮಯ್ಯ ಅವರ ಆರ್ಥಿಕ ಶಿಸ್ತು ಎಂತಹದ್ದು ಎಂಬುದು ನೋಡಿದ್ದೇನೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭೀಕರ ಬರದ ನಡುವೆ ಅನಗತ್ಯ ವಿವಾದಗಳಲ್ಲಿ ಕಾಲಹರಣ ಮಾಡುತ್ತಿರುವ ಸರ್ಕಾರ

ನಾನು ರಾಜಕೀಯದ ಖಳನಾಯಕ

“ಸಿದ್ದರಾಮಯ್ಯ ಅವರಿಗೆ ನಾನು ಸ್ನೇಹಿತನಾಗಲು ಸಾಧ್ಯವೇ? ಅವರು ಹೇಳಿದ ಹಾಗೇ ಸಿದ್ದರಾಮಯ್ಯ ಅವರಿಗೆ ನಾನು ರಾಜಕೀಯ ವಿಲನ್‌ ಹೌದು. ಸಿದ್ದರಾಮಯ್ಯ ಅವರ ತಪ್ಪುಗಳನ್ನು ಜನರ ಎದುರು ಇಡುತ್ತಿದ್ದೇನೆ. ಮಾತು ಎತ್ತಿದರೆ ಸಾಕು ವೆಸ್ಟ್‌ ಎಂಡ್‌ ಹೋಟೆಲ್‌ ಎನ್ನುತ್ತಾರೆ ಸಿದ್ದರಾಮಯ್ಯ. ನಾನು ಆ ಹೋಟೆಲ್‌ನಲ್ಲಿ ಇದ್ದುಕೊಂಡು ಏನೆಲ್ಲ ಕಾರ್ಯಕ್ರಮ ಮಾಡಿದ್ದೇನೆ ಎಂಬುದು ದಾಖಲೆ ಸಮೇತ ಹೇಳುವೆ” ಎಂದರು.

“ಕುಮಾರಸ್ವಾಮಿ ಅವರ ಅನುದಾನದಿಂದ ನಮ್ಮ ಮುಖ ಕ್ಷೇತ್ರದಲ್ಲಿ ಉಳಿದಿದೆ ಎಂದು ಕೆಲವು ಕಾಂಗ್ರೆಸ್‌ ಶಾಸಕರೇ ಹೇಳುತ್ತಿದ್ದಾರೆ. ಈಗ ಅವರು ಸೋತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಡಿಕೆ ಶಿವಕುಮಾರ್‌ ಅವರು ನನ್ನನ್ನು ಕೈಗೊಂಬೆಯಾಗಿ ನಡೆಸಿಕೊಂಡಿದ್ದಾರೆ. ಮನವಿ ಪತ್ರಗಳನ್ನು ನನ್ನ ಟೇಬಲ್‌ ಮೇಲೆ ಎಸೆದು ಅವಮಾನ ಮಾಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X