ತನಿಖಾ ಸಂಸ್ಥೆಗಳ ಪ್ರಕಾರ ಬಿಜೆಪಿಯವರೆಲ್ಲರೂ ಪರಮ ಪ್ರಾಮಾಣಿಕರೆ: ಗುಂಡೂರಾವ್‌ ಪ್ರಶ್ನೆ

Date:

Advertisements

ವಿಪಕ್ಷ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರೀಯ ತನಿಖಾ ಸಂಸ್ಥೆಗಳು ದಾಳಿ ನಡೆಸುವ ಮರ್ಮವೇನು? ಈ ತನಿಖಾ ಸಂಸ್ಥೆಗಳ ಪ್ರಕಾರ ಬಿಜೆಪಿಯಲ್ಲಿರುವವರೆಲ್ಲರೂ ಪರಮ ಪ್ರಾಮಾಣಿಕರೆ” ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಹಂಚಿಕೊಂಡಿರುವ ಅವರು, “ತನಿಖಾ ಸಂಸ್ಥೆಗಳ ಪ್ರಕಾರ ಬಿಜೆಪಿಯವರು ಭ್ರಷ್ಟಾಚಾರ ಮಾಡೇ ಇಲ್ಲವೇ? ಬಿಜೆಪಿಯವರ ವಿರುದ್ಧ ಸಾಲು ಸಾಲು ಭ್ರಷ್ಟಾಚಾರದ ಆರೋಪವಿದ್ದರೂ ಕೇಂದ್ರೀಯ ತನಿಖಾ ಸಂಸ್ಥೆಗಳ್ಯಾಕೆ ಅವರ ವಿರುದ್ಧ ಒಂದೇ ಒಂದು ಪ್ರಕರಣ ದಾಖಲಿಸುವುದಿಲ್ಲ?” ಎಂದು ವಾಗ್ದಾಳಿ ನಡೆಸಿದ್ದಾರೆ.

“ಭ್ರಷ್ಟ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸದಿರಲು ನರೇಂದ್ರ ಮೋದಿಯವರ ಪ್ರಭಾವ ಇಲ್ಲದೆ ಬೇರೇನು ಕಾರಣವಿದೆ?” ಎಂದು ಕೇಳಿದ್ದಾರೆ.

Advertisements

“ಸ್ವತಂತ್ರ ಭಾರತದಲ್ಲಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ಗರಿಷ್ಟ ಮಟ್ಟದಲ್ಲಿ ದುರಪಯೋಗಪಡಿಸಿಕೊಂಡ ಯಾವುದಾದರೂ ಸರ್ಕಾರವಿದ್ದರೆ ಅದು‌ ಮೋದಿ ಸರ್ಕಾರ ಮಾತ್ರ. ಮೋದಿಯವರ ಆಡಳಿತದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗಳು ದಾಖಲಿಸಿರುವ ಪ್ರಕರಣಗಳಲ್ಲಿ ಶೇ.95% ರಷ್ಟು ಪ್ರಕರಣಗಳು ವಿಪಕ್ಷ ನಾಯಕರ ವಿರುದ್ಧ. ಈ ಅಂಕಿ- ಅಂಶವೇ ತನಿಖಾ ಸಂಸ್ಥೆಗಳ ದುರ್ಬಳಕೆಯ ಸತ್ಯ ದರ್ಶನ ತೋರಿಸುತ್ತವೆ” ಎಂದಿದ್ದಾರೆ.

“ಮೋದಿಯವರಿಗೆ ಹಾಗೂ ಅವರ ಸರ್ಕಾರಕ್ಕೆ ವಿರೋಧ ಪಕ್ಷಗಳನ್ನು ರಾಜಕೀಯವಾಗಿ ಎದುರಿಸುವ ಎದೆಗಾರಿಕೆ ಇಲ್ಲ. ಹಾಗಾಗಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ವಿಪಕ್ಷದವರನ್ನು ಬೆದರಿಸುವ ಪ್ರಯತ್ನ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X