ಪೊಲೀಸ್ ಮೇಲೆ ಹಲ್ಲೆ ಆರೋಪ | ವೈ.ಎಸ್.ಶರ್ಮಿಳಾ ಬಂಧನ

Date:

Advertisements
  • ಜಗನ್‌ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ
  • ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 11 ಮಂದಿ ಬಂಧನ

ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ವಾಗ್ವಾದ ನಡೆಸಿ ಹಲ್ಲೆ ಮಾಡಿದ ಆರೋಪದಲ್ಲಿ ಹೈದರಾಬಾದ್‌ನಲ್ಲಿ ಸೋಮವಾರ (ಏಪ್ರಿಲ್ 24) ವೈಎಸ್‌ಆರ್‌ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್‌ ಶರ್ಮಿಳಾ ಅವರನ್ನು ಬಂಧಿಸಲಾಗಿದೆ.

ಹೈದರಾಬಾದ್‌ನ ತಮ್ಮ ನಿವಾಸದ ಹೊರಗೆ ಶರ್ಮಿಳಾ ಅವರು ಸೋಮವಾರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರಲ್ಲದೆ ವೈ.ಎಸ್‌ ಶರ್ಮಿಳಾ ಅವರು ಅಧಿಕಾರಿಯೊಬ್ಬರ ಕೆನ್ನೆಗೆ ಹೊಡೆದಿದ್ದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.

ಘಟನೆಯ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇನೆ. ಅನುಮತಿ ಪಡೆಯದೆ ಶರ್ಮಿಳಾ ಅವರು ಪ್ರತಿಭಟನೆ ನಡೆಸಲು ತೆರಳುತ್ತಿದ್ದಾಗ ಪೊಲೀಸರು ಅವರನ್ನು ತಡೆದಿದ್ದಾರೆ.

Advertisements

ಅವರ ಮೇಲೆ ಶರ್ಮಿಳಾ ಅವರು ಹಲ್ಲೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಶರ್ಮಿಳಾ ಅವರು ಯಾವುದೇ ಪೂರ್ವಾನುಮತಿ ಪಡೆಯದೆ ಎಸ್‌ಐಟಿ ಕಚೇರಿಗೆ ತೆರಳುತ್ತಿರುವುದು ತಿಳಿದು ಬಂದಿದೆ.

“ಎಸ್‌ಐಟಿ ಅಧಿಕಾರಿಗಳು ಶರ್ಮಿಳಾ ಅವರ ನಿವಾಸಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇವೆ” ಎಂದು ಉಪ ಪೊಲೀಸ್‌ ಆಯುಕ್ತ (ಪಶ್ಚಿಮ ವಲಯ) ಜೋಯಲ್‌ ಡೇವಿಸ್‌ ಅವರು ತಿಳಿಸಿದ್ದಾರೆ.

ಪೊಲೀಸರ ಮೇಲೆ ವೈ.ಎಸ್ ಶರ್ಮಿಳಾ ಆರೋಪಿಸಿದ್ದಾರೆ.

“ತೆಲಂಗಾಣ ನಾಗರಿಕ ಸೇವಾ ಆಯೋಗ (ಟಿಎಸ್‌ಪಿಎಸ್‌) ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಮನವಿ ಸಲ್ಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಕಚೇರಿಗೆ ತೆರಳುತ್ತಿದ್ದಾಗ ನನ್ನನ್ನು ಅಕ್ರಮವಾಗಿ ಬಂಧಿಸಿ ಗೃಹಬಂಧನ ವಿಧಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಎಸ್‌ಐಟಿ ತನಿಖೆ ನಡೆಸುತ್ತಿದೆ. ತೆಲಂಗಾಣ ಸರ್ಕಾರ ಈ ಪರೀಕ್ಷೆ ನಡೆಸುತ್ತದೆ.

ಪೊಲೀಸ್‌ ಸಿಬ್ಬಂದಿಯನ್ನು ತಳ್ಳುತ್ತಿರುವುದು, ಪೊಲೀಸ್‌ ಅಧಿಕಾರಿಯ ಕೆನ್ನೆಗೆ ಹೊಡೆಯುತ್ತಿರುವ ವೈ.ಎಸ್‌ ಶರ್ಮಿಳಾ ಅವರ ದೃಶ್ಯಗಳು ಜಾಲತಾಣದಲ್ಲಿ ಹರಿದಾಡಿವೆ.

ಘಟನೆ ನಂತರ ಶರ್ಮಿಳಾ ಅವರನ್ನು ಅಲ್ಲಿಂದ ಕರೆದೊಯ್ಯಲಾಗಿದೆ. ಈ ಕುರಿತು ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ.

ಈ ಸುದ್ದಿ ಓದಿದ್ದೀರಾ? ಲಲಿತ್‌ ಮೋದಿ ನ್ಯಾಯಾಂಗ ನಿಂದನೆ | ಬೇಷರತ್‌ ಕ್ಷಮೆ ನಂತರ ವಿಚಾರಣಾ ಪ್ರಕ್ರಿಯೆ ತೆರವುಗೊಳಿಸಿದ ‘ಸುಪ್ರೀಂ’

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರ ಸಹೋದರಿ ಈ ವೈ.ಎಸ್‌ ಶರ್ಮಿಳಾ ಆಗಿದ್ದಾರೆ. ಶರ್ಮಿಳಾ ಅವರನ್ನು ಹೈದರಾಬಾದ್‌ನ ಜುಬ್ಲೀ ಹಿಲ್ಸ್‌ ಪೊಲೀಸ್‌ ಠಾಣೆಗೆ ಕರೆದೊಯ್ದರು. ಈ ವೇಳೆ ತಮ್ಮ ಪುತ್ರಿಯನ್ನು ಭೇಟಿ ಮಾಡಲು ಶರ್ಮಿಳಾ ಅವರ ತಾಯಿ ವೈ.ಎಸ್‌ ವಿಜಯಮ್ಮ ಅಲ್ಲಿಗೆ ತೆರಳಿದ್ದರು.

ಪ್ರಕರಣ ಸಂಬಂಧ ಈಗಾಗಲೇ 11 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಮೂರು ಸರ್ಕಾರಿ ಹುದ್ದೆಗಳ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಸರ್ಕಾರದ ವಿರುದ್ಧ ತೆಲಂಗಾಣ ರಾಜ್ಯದಾದ್ಯಂತ ಶರ್ಮಿಳಾ ಅವರ ಪಕ್ಷ ವ್ಯಾಪಕ ಪ್ರತಿಭಟನೆ ನಡೆಸುತ್ತಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಸರ್ಕಾರ ಕಾರಣ ಎಂದು ಆರೋಪಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಶರ್ಮಿಳಾ ಅವರ ಪಕ್ಷ ಸೇರಿದಂತೆ ಇತರ ಪ್ರತಿಪಕ್ಷಗಳು ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿವೆ.

ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಸರ್ಕಾರದ ವಿರುದ್ಧ ತೆಲಂಗಾಣ ರಾಜ್ಯದಾದ್ಯಂತ ಶರ್ಮಿಳಾ ಅವರ ಪಕ್ಷ ವ್ಯಾಪಕ ಪ್ರತಿಭಟನೆ ನಡೆಸುತ್ತಿದೆ. ಶರ್ಮಿಳಾ ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌ ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X