ಮತದಾನ ಗೌಪ್ಯತೆ ಕಾಪಾಡದ ಆರೋಪ; ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ ವಿರುದ್ಧ ದೂರು ದಾಖಲು

Date:

Advertisements

ಮತದಾನ ಗೌಪ್ಯತೆ ಕಾಪಾಡದ ಆರೋಪದ ಮೇಲೆ ದಾವಣಗೆರೆ ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ ವಿರುದ್ಧ ನಗರದ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ತೋಟಗಾರಿಕೆ ಸಹಾಯಕ ನಿರ್ದೇಶಕ, ಎಫ್ ಎಸ್ ಟಿ ಮುಖ್ಯಸ್ಥ ರಾಜೇಶ್ ಕುಮಾರ್ ಅವರು ಸಂಸದರ ವಿರುದ್ಧ  ಮತದಾನ ಗೌಪ್ಯತೆ ಕಾಪಾಡಿಲ್ಲ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದ 106ನೇ ವೃತ್ತದ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಪಿಎಸ್- 236 ಮಾಗನೂರು ಬಸಪ್ಪ ಪಬ್ಲಿಕ್ ಶಾಲೆಯ ಕೊಠಡಿ ಸಂಖ್ಯೆ- 1ರಲ್ಲಿ ಜಿ ಎಂ ಸಿದ್ದೇಶ್ವರ್ ಅವರು ಮತ ಚಲಾಯಿಸಿದರು. ಇದೇ ವೇಳೆ ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ತಮ್ಮ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರೊಂದಿಗೆ ಹಾಲಿ ಬಿಜೆಪಿ ಸಂಸದರು ಮತದಾನ ಮಾಡಿದರು.

Advertisements

ಮೊದಲು ಮತದಾನ ಮಾಡಿದ ಸಿದ್ದೇಶ್ವರ ಅವರು, ಗಾಯತ್ರಿಯವರ ಮತದಾನ ಆಗುವವರೆಗೆ ಅಲ್ಲೇ (ಮತಯಂತ್ರದ ಪಕ್ಕದಲ್ಲೇ) ಉಳಿದಿದ್ದರು. ಅಲ್ಲದೆ, ಗಾಯಿತ್ರಿ ಸಿದ್ದೇಶ್ವರ್ ರವರು ಮತದಾನ ಮಾಡುತ್ತಿರುವುದನ್ನು ಸಿದ್ದೇಶ್ವರ್ ಜಿಎಂ ರವರು ಪಕ್ಕದಲ್ಲೇ ನಿಂತು ನೋಡಿದರು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಈ ವಿಡಿಯೋ ತುಣುಕು ಜಿಲ್ಲೆಯ ಸಹಾಯಕ ಚುನಾವಣಾಧಿಕಾರಿಗಳಿಗೂ ತಲುಪಿದ್ದು, ಆ ಹಿನ್ನೆಲೆಯಲ್ಲಿ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

ಬಳ್ಳಾರಿಯಲ್ಲಿ ಕಾರ್ಪೊರೇಟರ್ ವಿರುದ್ಧ ಕ್ರಮ

ಮೇ 7ರಂದು ನಡೆದಿದ್ದ ಲೋಕಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ಮತದಾನದ ಗೌಪ್ಯತೆ ನಿಯಮ ಉಲ್ಲಂಘಿಸಿದ್ದ ಬಳ್ಳಾರಿಯ ಕಾರ್ಪೋರೇಟರ್ ಒಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಬಳ್ಳಾರಿ ಪಾಲಿಕೆ 10 ನೇ ವಾರ್ಡ್ ನ ಬಿಜೆಪಿ ಸದಸ್ಯ ಕೋನಂಕಿ ತಿಲಕ್ ಅವರು ಮತದಾನದ ನಂತರ ಮತದಾರರ ಮೇಲೆ ಪ್ರಭಾವ ಬೀರುವಂಥ ಕೆಲಸ ಮಾಡಿದ್ದಾರೆಂಬ ಅವರ ಮೇಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X