ನೈತಿಕ ಪೊಲೀಸ್‌ಗಿರಿ ಕಡಿವಾಣಕ್ಕೆ ʼಆ್ಯಂಟಿ ಕಮ್ಯುನಲ್ ವಿಂಗ್ʼ ಸ್ಥಾಪನೆಗೆ ಮುಂದಾದ ಸರ್ಕಾರ

Date:

Advertisements
  • ಮಂಗಳೂರು ನೈತಿಕ ಪೊಲೀಸ್‌ಗಿರಿ ಖಂಡಿಸಿದ ಗೃಹ ಸಚಿವ ಜಿ ಪರಮೇಶ್ವರ್
  • ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೆ ಸೂಚನೆ

ರಾಜ್ಯದಲ್ಲಿನ ‘ನೈತಿಕ ಪೊಲೀಸ್‌ಗಿರಿʼ ತಡೆಯಲು ʼಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ ಮಾಡಲಾಗುವುದೆಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದರು.

ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಪಶ್ಚಿಮ ವಿಭಾಗ ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್‌ ಹೊಸ ಘಟಕ ಆರಂಭಿಸುವುದಾಗಿ ತಿಳಿಸಿದರು.

ಹೊಸ ವಿಭಾಗದಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ. ಕರಾವಳಿ ಭಾಗದಲ್ಲಿ ಶಾಂತಿ ಕಾಪಾಡುವುದರ ಜೊತೆಗೆ ಸಹಬಾಳ್ವೆ ನಡೆಸುವ ಒಳ್ಳೆಯ ಜನರ ಸ್ವಾಭಿಮಾನಕ್ಕೆ ಧಕ್ಕೆಯಾಗದ ಘಟನೆಗಳು ನಡೆಯದಂತೆ ಇವರು ನೋಡಿಕೊಳ್ಳಲಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

Advertisements

ಈ ಭಾಗದ ಜನ ಒಳ್ಳೆಯವರು, ಕೆಲವರಿಂದಾಗಿ ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತನಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಮು ಸೌಹಾರ್ದತೆ ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಅನೈತಿಕ ಪೊಲೀಸ್ ಗಿರಿ : ಪಶ್ವಿಮ ವಲಯ ಪೊಲೀಸರೊಂದಿಗೆ ಗೃಹ ಸಚಿವರ ಸಭೆ

ನೈತಿಕ ಪೊಲೀಸ್‌ಗಿರಿಯ ಸಮಸ್ಯೆಗಳು ಸವಾಲುಗಳ ಬಗ್ಗೆ ವಿಚಾರಿಸಿದ್ದೇನೆ. ಈ ರೀತಿಯ ಘಟನೆ ವಿಚಾರಗಳು ನಮಗೆ ಹೊಸದೇನಲ್ಲ. ಮೂರನೇ ಭಾರಿ ನಾನು ಗೃಹ ಸಚಿವನಾಗಿದ್ದೇನೆ. ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‌ಗಿರಿಯಿಂದಾಗಿ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದೆ. ಇದನ್ನು ತಡೆಯದಿದ್ರೆ ಇಲಾಖೆಗೆ ಕೆಟ್ಟ ಹೆಸರು ಬರಲಿದೆ. ಹೀಗಾಗಿ ಇದರ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದರ ಜೊತೆಗೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ ಗೃಹ ಸಚಿವರು, ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಹೇಳಿದರು.

ಇದೇ ವೇಳೆ ಕರಾವಳಿಯ ಕೋಮುದ್ವೇಷಕ್ಕೆ ಬಲಿಯಾದ ದೀಪಕ್ ರಾವ್, ಫಾಜಿಲ್, ಜಲೀಲ್, ಮಸೂದ್ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ನೀಡಲಿದೆ. ಈ ಸಂಬಂಧ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X