ರಫ್ತು ಬೆಳವಣಿಗೆಗೆ ಪೂರಕವಾದ ಕೈಗಾರಿಕಾ ನೀತಿ ರೂಪಿಸಲು ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

Date:

  • ಕರ್ನಾಟಕ ರಫ್ತು ಮಾಡುವುದರಲ್ಲಿ ಮೊದಲಿನಿಂದಲೂ ಮುಂಚೂಣಿಯಲ್ಲಿದೆ
  • ಹೂಡಿಕೆಗಳು ಬಂದಲ್ಲಿ ಕೈಗಾರಿಕೆಗಳು ಬಂದು ನಿರುದ್ಯೋಗ ನಿವಾರಣೆಯಾಗುತ್ತದೆ

ಹೊಸ ಕೈಗಾರಿಕಾ ನೀತಿಯನ್ನು ಸರ್ಕಾರ ಘೋಷಣೆ ಮಾಡಿದಾಗ ಕೈಗಾರಿಕೋದ್ಯಮಿಗಳು ಬೆಂಬಲಿಸಿ ಸ್ವಾಗತಿಸಿದರು. ಈಗಲೂ ಎಲ್ಲರೊಂದಿಗೆ ಚರ್ಚೆ ಮಾಡಿ ರಫ್ತು ಬೆಳವಣಿಗೆಗೆ ಪೂರಕವಾದ ಕೈಗಾರಿಕಾ ನೀತಿ ರೂಪಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು ಎರಡನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು. ಕರ್ನಾಟಕ ರಫ್ತು ಮಾಡುವುದರಲ್ಲಿ ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ಕೈಗಾರಿಕೆಗಳ ಅಭಿವೃದ್ಧಿ ಆಗಬೇಕೆಂದು ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕಾ ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಗಿತ್ತು. ಈಗ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಎಂ ಬಿ ಪಾಟೀಲ್ ಅವರು ಕೈಗಾರಿಕಾ ಇಲಾಖೆಯ ನೇತೃತ್ವವನ್ನು ವಹಿಸಿದ್ದು, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆ ಆಗಬೇಕು ಎನ್ನುವ ಆಶಯ ಹೊಂದಿದ್ದು, ಕರ್ನಾಟಕ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ಉದ್ಯಮಿಗಳಿಗೆ ನೀಡಲಿದೆ ಎಂದು ಭರವಸೆ ನೀಡಿದರು.

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ

ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಯುವನಿಧಿ ಅಡಿಯಲ್ಲಿ 2022-23 ರಲ್ಲಿ ಪದವೀಧರರಾಗಿ ನಿರುದ್ಯೋಗಿಗಳಾಗಿರುವವರಿಗೆ 3,000 ರೂ.ಗಳ ನಿರುದ್ಯೋಗ ಭತ್ಯೆ ನೀಡಲಾಗುವುದು. ಡಿಪ್ಲೊಮಾ ಹೊಂದಿದವರಿಗೂ 1,500 ರೂ.ಗಳ ಭತ್ಯೆ ನೀಡಲಾಗುವುದು. ಬಹುತೇಕ ಡಿಸೆಂಬರ್ ತಿಂಗಳಿನಲ್ಲಿ ಪ್ರಾರಂಭವಾಗಲಿದೆ. ಕೌಶಲ್ಯ ಇಲಾಖೆಯಿಂದ ಕೈಗಾರಿಕೆಗಳಿಗೆ ಅಗತ್ಯವಿರುವ ಉದ್ಯೋಗಿಗಳನ್ನು ತಯಾರು ಮಾಡುವ ಸಲುವಾಗಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಾರುಕಟ್ಟೆಗೆ ಸೂಕ್ತವಾಗಿರುವ ಉದ್ಯೋಗಿಗಳನ್ನು ತಯಾರು ಮಾಡಿದರೆ ನಿರುದ್ಯೋಗ ಸಮಸ್ಯೆ ಬಗೆಹರಿಯಲಿದೆ ಎಂದರು.

ಕೈಗಾರಿಕೆ ಬೆಳೆದರೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿ ದೇಶದ ಆರ್ಥಿಕತೆ ಬೆಳೆಯಲು ನೆರವಾಗಲಿದೆ. ಜಿಡಿಪಿ ಬೆಳೆದು ರಾಜ್ಯ ಬೆಳೆಯಲು ಸಾಧ್ಯವಾಗಿ ರಾಷ್ಟ್ರದ ಜಿಡಿಪಿಗೆ ದೊಡ್ಡ ಕೊಡುಗೆಯನ್ನು ರಾಜ್ಯದಿಂದ ಕೇಂದ್ರಕ್ಕೆ ಕೊಡಲು ಸಾಧ್ಯವಾಗುತ್ತದೆ. ಇವೆಲ್ಲ ಒಂದಕ್ಕೊಂದು ಸಂಬಂಧ ಹೊಂದಿದೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಹೂಡಿಕೆಗಳು ಬರುತ್ತವೆ. ಹೂಡಿಕೆಗಳು ಬಂದಲ್ಲಿ ಕೈಗಾರಿಕೆಗಳು ಬಂದು ನಿರುದ್ಯೋಗ ನಿವಾರಣೆಯಾಗುತ್ತದೆ. ಕರ್ನಾಟಕದಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಲ್ಪಿಸಲಾಗುವುದು. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಉದ್ಯೋಗಿಗಳನ್ನು ಸೃಷ್ಟಿ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತದೆ. ಶ್ರೇಷ್ಠ ರಫ್ತು ಮಾಡಿ ರಾಜ್ಯಕ್ಕೆ ಕೀರ್ತಿ ತಂದಿರುವ ರಫ್ತುದಾರರನ್ನು ಅಭಿನಂದಿಸಿದರು.

ಈ ಸುದ್ದಿ ಓದಿದ್ದೀರಾ? ಹೇಳಿಕೆ ವಾಪಸ್ ಪಡೆಯುವ ಜಾಯಮಾನ ನನ್ನದಲ್ಲ: ಬಿ ಕೆ ಹರಿಪ್ರಸಾದ್

ಕೈಗಾರಿಕೆಗಳಿಗೆ ಪ್ರೋತ್ಸಾಹದಾಯಕ ವಾತಾವರಣ

ಇಂದು 68 ಉದ್ದಿಮೆಗಳಿಗೆ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ರಫ್ತಿನಲ್ಲಿ ಸಾಧನೆ ಮಾಡಿರುವ ಉದ್ದಿಮೆಗಳಿಗೆ 1992-93 ರಿಂದ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ನೀಡುವ ಪರಿಪಾಠ ಪ್ರಾರಂಭಿಸಲಾಗಿದೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಉದ್ದಿಮೆಗಳನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ವಿಜೇತರು ಇತರ ಉದ್ದಿಮೆದಾರರಿಗೆ ಮಾದರಿ ಹಾಗೂ ಸ್ಪೂರ್ತಿಯಾಗಿದ್ದಾರೆ. ರಾಜ್ಯದಲ್ಲಿ ಉದ್ದಿಮೆಗಳ ಪ್ರಾರಂಭಕ್ಕೆ ಹಾಗೂ ಕೈಗಾರಿಕೆಗಳಿಗೆ ಪ್ರೋತ್ಸಾಹದಾಯಕ ವಾತಾವರಣ ಇದೆ. ಕರ್ನಾಟಕದಲ್ಲಿ ಸುಮಾರು 80ರ ದಶಕದಲ್ಲಿ ಕೈಗಾರಿಕಾ ನೀತಿ ರೂಪಿಸುವತ್ತ ಹೆಜ್ಜೆ ಇಡಲಾಗಿತ್ತು ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...

ಸೂರಜ್ ರೇವಣ್ಣಗೆ ಬಿಗ್ ರಿಲೀಫ್! 2 ಪ್ರಕರಣಗಳ ಬಿ-ರಿಪೋರ್ಟ್ ಸಲ್ಲಿಸಿದ ಸಿಐಡಿ

ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ...

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...