ಸಕಾಲ ಯೋಜನೆ ಅಡಿ 120 ಸೇವೆಗಳ ಸೇರ್ಪಡೆ: ಸಚಿವ ಕೃಷ್ಣ ಬೈರೇಗೌಡ

Date:

Advertisements

ಸಕಾಲ ಯೋಜನೆಗೆ ಇಂದಿನಿಂದ ಹೊಸದಾಗಿ 120 ಸೇವೆಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಮೂಲಕ ಸೇವೆಗಳ ಸಂಖ್ಯೆ 1202ಕ್ಕೆ ಏರಿಕೆಯಾಗಿದೆ. ಎಲ್ಲ ಸೇವೆಗಳನ್ನೂ ಡಿಜಿಟಲೀಕರಣಗೊಳಿಸಬೇಕು. ಏಕ ಗವಾಕ್ಷಿ ಸೇವಾ ಸಿಂಧು ಪೋರ್ಟಲ್‌ನೊಂದಿಗೆ ಸಂಯೋಜಿಸಿ, ಸೇವಾ ಸಿಂಧು ಪೋರ್ಟಲ್ ಮೂಲಕ ಲಭ್ಯವಾಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳ ಜೊತೆ ಅವರು ಸಭೆ ನಡೆಸಿದ್ದಾರೆ. “ಸಕಾಲ ಯೋಜನೆಯ ಅಡಿ 101 ಇಲಾಖೆಯ 1082 ಸೇವೆಗಳನ್ನು ಈಗಾಗಲೆ ಜನರಿಗೆ ಒದಗಿಸಲಾಗುತ್ತಿದೆ. ಇದೀಗ ಹೊಸ 120 ಹೊಸ ಸೇವೆಗಳನ್ನು ಸೇರಿಸಲಾಗಿದೆ. ಹೊಸ ಸೇವೆ ಸೇರಿದಂತೆ ಕೆಲವು ಸೇವೆಗಳು ಇನ್ನೂ ಪೇಪರ್ ಅಪ್ಲಿಕೇಶನ್ ಮೋಡ್‌ನಲ್ಲಿಯೇ ಇವೆ. ಅವುಗಳನ್ನು ಮುಂದಿನ 8 ಟಿಂಗಳೊಳಗೆ ಡಿಜಿಟಲೀಕರಣ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

“1202 ಸಕಾಲ ಸೇವೆಗಳ ಪೈಕಿ 922 ನಾಗರಿಕ ಹಾಗೂ 280 ಸಿಬ್ಬಂದಿ ಸೇವೆಗಳನ್ನು ನೀಡಲಾಗುತ್ತಿದೆ. ಇವುಗಳಲ್ಲಿ ಪ್ರಸ್ತುತ 802 ಸೇವೆಗಳನ್ನು ಮಾತ್ರ ಸೇವಾಸಿಂಧು ಮೂಲಕ ಒದಗಿಸಲಾಗುತ್ತಿದೆ. ಉಳಿದ 120 ಸೇವೆಗಳನ್ನು ಆನ್‍ಲೈನ್ ಮೂಲಕ ಒದಗಿಸಲಾಗಿಲ್ಲ. ಅವುಗಳು ಕೂಡ ಡಿಜಿಟಲೀಕರಣ ಆಗಬೇಕು” ಎಂದು ವಿವರಿಸಿದ್ದಾರೆ.

Advertisements

 

ಸಭೆಯಲ್ಲಿ ಕಂದಾಯ ಆಯುಕ್ತ ಸುನೀಲ್ ಕುಮಾರ್, ಸಕಾಲ ನಿರ್ದೇಶಕ ಉಜ್ವಲ್ ಕುಮಾರ್ ಘೋಷ್ ಹಾಗೂ ಸಕಾಲ ಉಪ ನಿರ್ದೇಶಕಿ ಪಲ್ಲವಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X