ಪ್ರವೇಶ ಪತ್ರ ಡೌನ್ಲೋಡ್ ಪ್ರಕ್ರಿಯೆ ಸ್ಥಗಿತ, ಸರ್ಕಾರದ ಹುಳುಕು ಬಯಲು: ಬಿ ವೈ ವಿಜಯೇಂದ್ರ ಟೀಕೆ

Date:

Advertisements

ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆ. 14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೆ. 5ರಂದೇ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಕೆಲವು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳ ಹಂಚಿಕೆಯಲ್ಲಿಯೂ ವ್ಯತ್ಯಯ ಕಂಡುಬಂದಿದ್ದು, ತಾತ್ಕಾಲಿಕವಾಗಿ ಪ್ರವೇಶ ಪತ್ರದ ಡೌನ್ಲೋಡ್ ಪ್ರಕ್ರಿಯೆ ಸಹ ಸ್ಥಗಿತಗೊಳಿಸುವ ಮೂಲಕ ಕೆಪಿಎಸ್‌ಸಿ ಹಾಗೂ ಸರ್ಕಾರದ ಹುಳುಕು ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಕೆಪಿಎಸ್‌ಸಿ ಪರೀಕ್ಷೆಯ ಗೊಂದಲಗಳ ನಡುವೆ ಹಠಕ್ಕೆ ಬಿದ್ದವರಂತೆ ಪರೀಕ್ಷೆ ನಡೆಸಿದ್ದ ರಾಜ್ಯ ಸರ್ಕಾರ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ನ್ಯೂನತೆ ಬಯಲಾದ ಬೆನ್ನಲ್ಲೇ ಮತ್ತೆ ಮರು ಪರೀಕ್ಷೆಗೆ ಆದೇಶ ಹೊರಡಿಸಿ ಸಾವಿರಾರು ಪರೀಕ್ಷಾರ್ಥಿಗಳ ಶಾಪಕ್ಕೆ ಗುರಿಯಾಗಿತ್ತು” ಎಂದಿದ್ದಾರೆ.

“ಇದೀಗ ಅಂತದ್ದೇ ಮತ್ತೊಂದು ಎಡವಟ್ಟು ಮಾಡಲು ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 22ರಂದು ಯುಪಿಎಸ್ಸಿ ಹಾಗೂ ಎಸ್‌.ಎಸ್.ಸಿ ಪರೀಕ್ಷೆಗಳ ದಿನಾಂಕ ನಿಗದಿಯಾಗಿದ್ದು, ಅದೇ ದಿನ ಪಿಎಸ್ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಉದ್ಯೋಗಾಕಾಂಕ್ಷಿಗಳ ವಿರೋಧಿ ಧೋರಣೆ ಅಲ್ಲದೆ ಬೇರೇನೂ ಅಲ್ಲ” ಎಂದು ಆರೋಪಿಸಿದ್ದಾರೆ.

Advertisements

“ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಉದ್ಯೋಗಾಕಾಂಕ್ಷಿಗಳನ್ನು ಮತ್ತೊಮ್ಮೆ ಸಂಕಷ್ಟಕ್ಕೆ ದೂಡುವ ಮುನ್ನವೇ ರಾಜ್ಯದ ಸರ್ಕಾರ ಸೆಪ್ಟೆಂಬರ್ 22 ರಂದು ನಡೆಸಲು ನಿರ್ಧರಿಸಿರುವ ಪಿಎಸ್ಐ ಪರೀಕ್ಷೆ ಮುಂದೂಡಿಕೆ ಮಾಡಿ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಹಾಗೂ ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಗಳಾಗದಂತೆ ಎಚ್ಚರ ವಹಿಸಿ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X