ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ʻಜಾಹೀರಾತುʼ; ಫಡ್ನವಿಸ್‌ ನಿರ್ಲಕ್ಷಿಸಿದ ಶಿಂಧೆ ಬಣ

Date:

Advertisements

ಮಹಾರಾಷ್ಟ್ರದ ಪ್ರಮುಖ ದಿನ ಪತ್ರಿಕೆಗಳಲ್ಲಿ ಮಂಗಳವಾರ ಪ್ರಕಟವಾದ ಜಾಹೀರಾತು ಒಂದು ಇದೀಗ ʻಮಹಾʼ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ನೀಡಿರುವ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಚಿತ್ರಗಳು ಮಾತ್ರ ಕಾಣಿಸಿಕೊಂಡಿದ್ದು, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ನಿರ್ಲಕ್ಷಿಸಲಾಗಿದೆ. ಇದು ಹೊಸ ರಾಜಕೀಯ ವಿವಾದಕ್ಕೆ ನಾಂದಿ ಹಾಡಿದೆ.

ಜಾಹೀರಾತಿನ ಮೂಲಕ, ʻಏಕ್​ನಾಥ್​ ಶಿಂಧೆ ಅವರೇ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಆಗಬೇಕು, ಶಿಂಧೆ ಅವರೇ ಈಗಿನ ಸರ್ಕಾರದ ಅವಧಿ ಮುಗಿಯುವವರೆಗೆ ಸಿಎಂ ಆಗಿರಬೇಕು, ಮುಂದಿನ ಚುನಾವಣೆಯ ಬಳಿಕವೂ ಶಿವಸೇನೆಗೆ ಸಿಎಂ ಸ್ಥಾನ ಬಿಟ್ಟುಕೊಟ್ಟು ಬಿಜೆಪಿ ಕಿರಿಯ ಪಾಲುದಾರನಂತೆ ಇರಬೇಕುʼ ಎಂಬ ಸಂದೇಶವನ್ನು ಶಿವಸೇನೆ, ಬಿಜೆಪಿಗೆ ರವಾನಿಸಿದೆ.

Advertisements

ʻಬಿಜೆಪಿ ಸಾಕಷ್ಟು ತ್ಯಾಗ ಮಾಡಿದೆʼ

ಶಿವಸೇನೆ ನೀಡಿರುವ ಜಾಹೀರಾತು ರಾಜ್ಯ ಬಿಜೆಪಿಯ ಕಣ್ಣು ಕೆಂಪಾಗಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಪ್ರವೀಣ್‌  ದಾರೇಕರ್, ʻಫಡ್ನವೀಸ್ ಅವರನ್ನು ಅವಮಾನಿಸುವ ರೀತಿಯಲ್ಲಿನ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಇದು ಅತ್ಯಂತ ದುರದೃಷ್ಟಕರ. ಶಿಂಧೆ ಮತ್ತು ಫಡ್ನವಿಸ್ ಇಬ್ಬರೂ ಜನರೆಡೆಯಲ್ಲಿ ಜನಪ್ರಿಯರು. ಇಬ್ಬರೂ ರಾಜ್ಯ ಸರ್ಕಾರವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುತ್ತಿದ್ದಾರೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಇಬ್ಬರೂ ಒಟ್ಟಾಗಿ ಇರುವ ವೇಳೆ ಒಬ್ಬರನ್ನು ನಿರ್ಲಕ್ಷಿಸುವುದು ಸರಿಯಲ್ಲ. ಇದರಿಂದ ಮೈತ್ರಿಯಲ್ಲಿ ಮುನಿಸು ಕಾಣಿಕೊಳ್ಳಬಹುದು. 40 ಶಾಸಕರು ಇರುವ (ಶಿಂಧೆ- ನೇತೃತ್ವದ ಶಿವಸೇನೆ) ಏಕಾಂಗಿಯಾಗಿ ಸರ್ಕಾರ ರಚಿಸಲು ಸಾಧ್ಯವಿತ್ತೇ? ಬಿಜೆಪಿ ಸಾಕಷ್ಟು ತ್ಯಾಗ ಮಾಡಿದೆ. 105 ಶಾಸಕರಿದ್ದರೂ ಫಡ್ನವೀಸ್ ಉಪ ಮುಖ್ಯಮಂತ್ರಿಯಾದರು. ಅವರಿಗಿಂತಲೂ ಬಿಜೆಪಿ ಮೂರು ಪಟ್ಟು ಶಾಸಕರನ್ನು ಹೊಂದಿದೆ.ʼ ಎಂದು ಶಾಸಕ ಪ್ರವೀಣ್‌ ದಾರೇಕರ್ ಹೇಳಿದ್ದಾರೆ.

addvt

ಈ ಸುದ್ದಿ ಓದಿದ್ದೀರಾ?: ಆಟಿಸಂ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕನನ್ನು ಎಳೆದೊಯ್ದ ಬೀದಿ ನಾಯಿಗಳು: ಸಾವು

ಜಾಹೀರಾತಿನಲ್ಲೇನಿದೆ?

ಚುನಾವಣಾ ಸಮೀಕ್ಷೆಗಳ ಪ್ರಕಾರ ಶೇಕಡಾ 30.2ರಷ್ಟು ಮಹಾರಾಷ್ಟ್ರದ ಜನತೆ ಬಿಜೆಪಿಯನ್ನೂ ಶೇಕಡಾ 16.2ರಷ್ಟು ಮಹಾರಾಷ್ಟ್ರದ ಜನತೆ ಏಕ್​ನಾಥ್​ ಶಿಂಧೆ ನೇತೃತ್ವದ ಶಿವಸೇನೆಯನ್ನು ಬಯಸುತ್ತಿದ್ದಾರೆ.

ಈ ಅಂಕಿಗಳ ಪ್ರಕಾರ ಮಹಾರಾಷ್ಟ್ರದಲ್ಲಿ ಒಟ್ಟು ಶೇಕಡಾ 46.4ರಷ್ಟು ಮಂದಿ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಏಕ್​ನಾಥ್​ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟದ ಮೇಲೆ ವಿಶ್ವಾಸವಿಟ್ಟಿದ್ದಾರೆ.

ಅದಕ್ಕಿಂತಲೂ ಹೆಚ್ಚಾಗಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಡಲಾದ ಸಮೀಕ್ಷೆಯಲ್ಲಿ ಶೇಕಡಾ 26.1ರಷ್ಟು ಮಹಾರಾಷ್ಟ್ರದ ಜನತೆ ಏಕ್​ನಾಥ್​ ಶಿಂಧೆ ಅವರನ್ನೂ ಮತ್ತು ಶೇಕಡಾ 23.2ರಷ್ಟು ಮಂದಿ ದೇವೇಂದ್ರ ಫಡ್ನವೀಸ್​ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಕಾಣಲು ಬಯಸಿದ್ದಾರೆ ಸಮೀಕ್ಷೆ ಹೇಳಿದೆ.

ಈ ಮೂಲಕ ಶೇಕಡಾ 49.3ರಷ್ಟು ಮಹಾರಾಷ್ಟ್ರದ ಜನತೆ ರಾಜ್ಯದಲ್ಲಿ ನಾಯಕತ್ವಕ್ಕಾಗಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟವನ್ನು ಬಯಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X