ಜೆಡಿಎಸ್‌ನಿಂದ ಸಿ ಎಂ ಇಬ್ರಾಹಿಂ ಅಮಾನತುಗೊಳಿಸಿದ ಹೆಚ್‌ ಡಿ ದೇವೇಗೌಡ

Date:

Advertisements

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಸಿ.ಎಂ ಇಬ್ರಾಹಿಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆಯನ್ನು ವಿರೋಧಿಸಿದ್ದ ಸಿ.ಎಂ ಇಬ್ರಾಹಿಂ ಅವರು ‘ಒರಿಜಿನಲ್ ಜೆಡಿಎಸ್ ಪಕ್ಷ ನಮ್ಮದೇ. ನಿಜವಾದ ಜಾತ್ಯಾತೀತ ಜನತಾ ದಳವನ್ನು ಕಟ್ಟುತ್ತೇನೆ’ ಎಂದು ಗುಡುಗಿದ್ದರು. ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ಛಾಟನೆ ಮಾಡಲು ಚಿಂತಿಸುವುದಾಗಿಯೂ ಮಾತನಾಡಿದ್ದರು.

ಸಿ.ಎಂ ಇಬ್ರಾಹಿಂ ಅವರ ಈ ರಾಜಕೀಯ ನಡೆಗೆ ಇದೀಗ ಹೆಚ್.ಡಿ ದೇವೇಗೌಡರೇ ಬ್ರೇಕ್ ಹಾಕಿದ್ದಾರೆ. ಕಳೆದ ನವೆಂಬರ್ 15ರಂದು ಕೇರಳದ ತಿರುವನಂತಪುರಂ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗಿಯಾಗಿದ್ದರು. ಪಕ್ಷದ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂಬ ಕಾರಣದಿಂದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ‌.ದೇವೇಗೌಡರು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Advertisements

suspension

ಸಿ.ಎಂ. ಇಬ್ರಾಹಿಂರವರು ಸಾರ್ವಜನಿಕವಾಗಿ ಪಕ್ಷದ ರಾಷ್ಟ್ರಧ್ಯಕ್ಷ, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಹಾಗೂ ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಮಾಡಿಕೊಂಡ ಮೈತ್ರಿ ಬಗ್ಗೆ, ಪಕ್ಷದ ರಾಜ್ಯ ಪರಿಷತ್‌, ಶಾಸಕಾಂಗ ಪಕ್ಷದ ಸಭೆ, ಕೋಡ್ ಸಮಿತಿ ಮುಂತಾದ ಸಭೆಗಳಲ್ಲಿ ಒಮ್ಮತದ ನಿರ್ಣಯವಾಗಿದೆ. ಆದರೂ ಕೂಡ ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡಿ, ಪಕ್ಷದ ಹಿತಕ್ಕೆ ಧಕ್ಕೆ ತಂದಿರುತ್ತಾರೆ. ಇಂತಹ ನಡವಳಿಕೆ ಮತ್ತು ಹೇಳಿಕೆಗಳು ಪಕ್ಷದ ವಿರೋಧಿ ಚಟುವಟಿಕೆ. ಹಾಗಾಗಿ, ಸಿಎಂ ಇಬ್ರಾಹಿಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X