ಧರ್ಮದ ಹೆಸರಲ್ಲಿ ಜನರು ಬಡಿದಾಡಿಕೊಳ್ಳುವಂತೆ ಮಾಡುವುದು ಸಂವಿಧಾನದ ಅಣಕ : ಮಲ್ಲಿಕಾರ್ಜುನ ಖರ್ಗೆ

Date:

  • ಹಿಂದಿಯಲ್ಲಿ ಟ್ವೀಟ್ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
  • ‘ಅಧಿಕಾರ ದಾಹದಿಂದಾಗಿ ದ್ವೇಷ ಹರಡುವ ಕಾರ್ಯ ನಡೆಯುತ್ತಿದೆ’

‘ಧರ್ಮದ ಹೆಸರಲ್ಲಿ ಜನರು ಪರಸ್ಪರ ಬಡಿದಾಡಿಕೊಳ್ಳುವಂತೆ ಮಾಡುವುದು ಸಂವಿಧಾನದ ಅಣಕ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

- Advertisement -

ದೇಶದಲ್ಲಿ ನಡೆಯುತ್ತಿರುವ ನಾನಾ ಹಿಂಸಾತ್ಮಕ ಘಟನೆಗಳ ಹಿನ್ನೆಲೆಯಲ್ಲಿ ಮಂಗಳವಾರ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ‘ಹರಿಯಾಣದ ಕೆಲವೆಡೆ ನಡೆಯುತ್ತಿರುವ ಘಟನೆಗಳಾಗಲಿ ಅಥವಾ ಆರ್‌ಪಿಎಫ್‌ ಯೋಧ ರೈಲಿನಲ್ಲಿ ಗುಂಡಿಟ್ಟು ಕೊಂದ ಕೃತ್ಯಗಳೆಲ್ಲವೂ ಭಾರತ ಮಾತೆಯ ಹೃದಯದಲ್ಲಿ ಆಳವಾದ ಗಾಯ ಮಾಡುತ್ತಿವೆ’ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

‘ಧರ್ಮದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಈ 21ನೇ ಶತಮಾನದ ಭಾರತ ಸಹಿಸುವುದಿಲ್ಲ. ಇಂತಹ ವಿಭಜಕ ಶಕ್ತಿಗಳ ವಿರುದ್ಧ ಜನರು ಒಂದಾಗಬೇಕಿದೆ. ಒಂದು ವೇಳೆ ಒಂದಾಗದೇ ಇದ್ದರೆ ನಮ್ಮ ಮುಂದಿನ ಪೀಳಿಗೆಗಳು ಇದರ ಪರಿಣಾಮ ಅನುಭವಿಸಬೇಕಾಗುತ್ತದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶದ ಜನರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

‘ನಫ್ರತ್ ಚೋಡೋ; ಭಾರತ್ ಜೋಡೋ'(ದ್ವೇಷ ಬಿಡಿ; ಭಾರತ ಒಗ್ಗೂಡಿಸಿ) ಎಂದು ಮನವಿ ಮಾಡಿರುವ ಖರ್ಗೆ, ಹಿಂಸಾಚಾರದ ಘಟನೆಗಳ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ದುರ್ಬಲ ಕಾನೂನು-ಸುವ್ಯವಸ್ಥೆ ಹಾಗೂ ದುರ್ಬಲ ಸಾಂವಿಧಾನಿಕ ಸಂಸ್ಥೆಗಳ ಕುರಿತು ಎಲ್ಲ ಘಟನೆಗಳು ಗಂಭೀರ ಪ್ರಶ್ನೆಗಳನ್ನು ಎತ್ತುತ್ತವೆ. ದೇಶದಲ್ಲಿ ಅಧಿಕಾರದ ದಾಹದ ಉದ್ದೇಶಕ್ಕಾಗಿ ದ್ವೇಷ ಹರಡುವ ಕಾರ್ಯ ನಡೆಯುತ್ತಿದೆ. ಇದರಿಂದಾಗಿಯೇ ಸಾಮಾಜಿಕ ಸಾಮರಸ್ಯ ಹಾಳಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...