‘ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ’ ಎಂದ ಚುನಾವಣಾ ಆಯೋಗ: ‘ಗಡಿಯಾರ’ ಕಳಕೊಂಡ ಶರದ್ ಪವಾರ್

Date:

Advertisements

ಮಹಾರಾಷ್ಟ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಇಂಡಿಯಾ ಮೈತ್ರಿಯ ನಾಯಕರಾಗಿದ್ದ ಶರದ್‌ ಪವಾರ್‌ಗೆ ದೊಡ್ಡ ಹಿನ್ನಡೆಯಾಗಿದ್ದು, ತಾವೇ ಕಟ್ಟಿ ಬೆಳೆಸಿದ್ದ ಎನ್‌ಸಿಪಿ ಪಕ್ಷದ ಚಿಹ್ನೆಯಾದ ಗಡಿಯಾರ ಹಾಗೂ ಎನ್‌ಸಿಪಿ ಹೆಸರನ್ನು ಕಳೆದುಕೊಂಡಿದ್ದಾರೆ.

‘ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ’ ಎಂದ ಚುನಾವಣಾ ಆಯೋಗ ಆದೇಶ ನೀಡಿರುವುದಾಗಿ ವರದಿಯಾಗಿದೆ. ಅಜಿತ್ ಪವಾರ್ ಅವರು ಶರದ್ ಪವಾರ್ ಅವರ ಸೋದರಳಿಯನಾಗಿದ್ದು, ಸದ್ಯ ಮಹಾರಾಷ್ಟ್ರದ ಏಕನಾಥ್ ಶಿಂಧೆ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ.

“6 ತಿಂಗಳಿಗಿಂತ ಹೆಚ್ಚು ಕಾಲ 10ಕ್ಕೂ ಹೆಚ್ಚು ವಿಚಾರಣೆಗಳ ನಂತರ ಅಜಿತ್ ಪವಾರ್ ನೇತೃತ್ವದ ಬಣದ ಪರವಾಗಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ವಿಚಾರದ ವಿವಾದವನ್ನು ಇತ್ಯರ್ಥ ಮಾಡಲಾಗಿದೆ” ಎಂದು ಚುನಾವಣಾ ಆಯೋಗ ತಿಳಿಸಿದೆ. ಇದರೊಂದಿಗೆ ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿಯೇ ನಿಜವಾದ ಪಕ್ಷ ಎಂದು ಚುನಾವಣಾ ಆಯೋಗ ಪರಿಗಣಿಸಿದೆ ಎಂದು ‘ಲೈವ್ ಲಾ’ ವೆಬ್‌ಸೈಟ್ ಮಾಹಿತಿ ನೀಡಿದೆ.

Advertisements

ಎನ್‌ಸಿಪಿಯ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸಲು ಅಜಿತ್ ಪವಾರ್ ಬಣಕ್ಕೆ ಹಕ್ಕಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಆದರೆ, ಹೊಸ ಪಕ್ಷ ರಚನೆಗೆ ಮೂರು ಹೆಸರುಗಳನ್ನು ನೀಡುವಂತೆ ಆಯೋಗವು ಇದೇ ವೇಳೆ ಶರದ್ ಪವಾರ್ ಅವರನ್ನು ಕೇಳಿದ್ದು, ಆ ಹೆಸರುಗಳನ್ನು ಬುಧವಾರ ಮಧ್ಯಾಹ್ನ 3 ಗಂಟೆಯೊಳಗೆ ಆಯೋಗಕ್ಕೆ ತಿಳಿಸಬೇಕು ಎಂದು ಸೂಚಿಸಿರುವುದಾಗಿ ವರದಿಯಾಗಿದೆ.

2023ರ ಜುಲೈನಲ್ಲಿ ಅಜಿತ್ ಪವಾರ್ ಮತ್ತು ಪ್ರಫುಲ್ ಪಟೇಲ್ ನೇತೃತ್ವದ ಒಂದು ವಿಭಾಗವು ಆಗಿನ ಪಕ್ಷದ ವರಿಷ್ಠ ಶರದ್ ಪವಾರ್ ಜೊತೆಗಿನ ಸಂಬಂಧ ಮುರಿದು ಬಿಜೆಪಿ-ಶಿವಸೇನಾ (ಏಕನಾಥ್ ಶಿಂಧೆ) ಮೈತ್ರಿಯೊಂದಿಗೆ ಕೈಜೋಡಿಸಿದ ನಂತರ ಎನ್‌ಸಿಪಿಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. ದಿಡೀರ್ ಬೆಳವಣಿಗೆಯಲ್ಲಿ, ಅಜಿತ್ ಪವಾರ್ ಅವರು ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಈ ಹಿಂದೆ ಚುನಾವಣಾ ಆಯೋಗವು ಮಹಾರಾಷ್ಟ್ರದ  ಏಕನಾಥ್ ಶಿಂಧೆಯವರ ಶಿವಸೇನೆಯ ಬಣವು ನಿಜವಾದ ಶಿವಸೇನೆ ಎಂದು ಹೇಳಿತ್ತು. ಇದರಿಂದಾಗಿ ಉದ್ಧವ್ ಠಾಕ್ರೆಯವರು ಶಿವಸೇನೆ ಪಕ್ಷದ ಹೆಸರು ಹಾಗೂ ಚಿಹ್ನೆ ಕಳೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X