ಪಂಜಾಬ್ ಮಾದಕವಸ್ತು ಬಿಕ್ಕಟ್ಟಿಗೆ ಅಕಾಲಿದಳ, ಬಿಜೆಪಿ ಮತ್ತು ಕಾಂಗ್ರೆಸ್ ಕಾರಣ: ಎಎಪಿ ಆರೋಪ

Date:

Advertisements

ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಈ ಹಿಂದಿನ ಅಕಾಲಿದಳ-ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳೇ ಕಾರಣ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಈ ಹಿಂದಿನ ಸರ್ಕಾರಗಳ ನಿರ್ಲಕ್ಷ್ಯವೇ ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಆರೋಪಿಸಿದೆ.

ಎಎಪಿ ವಕ್ತಾರ ಮತ್ತು ಸಂಸತ್ ಸದಸ್ಯ ಮಲ್ವಿಂದರ್ ಸಿಂಗ್ ಕಾಂಗ್ ಈ ಬಗ್ಗೆ ಹೇಳಿಕೆ ನೀಡಿದ್ದು, “2007ರಿಂದ ಅಕಾಲಿ ದಳ-ಬಿಜೆಪಿ ಸರ್ಕಾರವು ಮಾದಕವಸ್ತು ವ್ಯಾಪಾರವನ್ನು ಸಾಂಸ್ಥೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹಲವು ಉನ್ನತ ನಾಯಕರು ಕಳ್ಳಸಾಗಣೆದಾರರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? 32 ಎಎಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಪಂಜಾಬ್ ಕಾಂಗ್ರೆಸ್ ನಾಯಕ ಬಾಜ್ವಾ

Advertisements

“ಅವರು (ಬಿಜೆಪಿ-ಅಕಾಲಿದಳ, ಕಾಂಗ್ರೆಸ್) ಪಂಜಾಬ್‌ನ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬದಲು, ಮಾದಕವಸ್ತು ವ್ಯಾಪಾರವನ್ನು ಸುಗಮಗೊಳಿಸಿದರು. ಇಡೀ ಪೀಳಿಗೆಯನ್ನು ವ್ಯಸನಕ್ಕೆ ತಳ್ಳಿದರು” ಎಂದು ಕಾಂಗ್ ಆರೋಪಿಸಿದ್ದಾರೆ.

ಹಾಗೆಯೇ ಕಾಂಗ್ರೆಸ್ ಸರ್ಕಾರವನ್ನು ಅದರಲ್ಲೂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಸರ್ಕಾರವನ್ನು ಟೀಕಿಸಿದ ಎಎಪಿ ನಾಯಕ, “ಈ ಸಮಸ್ಯೆಯನ್ನು ಪರಿಹರಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಯಿತು” ಎಂದರು.

“ನಾಲ್ಕು ತಿಂಗಳೊಳಗೆ ಮಾದಕವಸ್ತು ಪಿಡುಗನ್ನು ಕೊನೆಗೊಳಿಸುವುದಾಗಿ ಕ್ಯಾಪ್ಟನ್ ಅಮರಿಂದರ್ ಪ್ರತಿಜ್ಞೆ ಮಾಡಿದರು. ಆದರೆ ಅವರ ಸರ್ಕಾರ ವಿಫಲವಾಗಿದ್ದು ಮಾತ್ರವಲ್ಲದೆ ಮಾದಕವಸ್ತು ಬಿಕ್ಕಟ್ಟು ಹೆಚ್ಚಾಗಲು ಕೊಡುಗೆ ನೀಡಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಪಂಜಾಬ್ | ಭೀಕರ ಬಸ್ ಅಪಘಾತ; ಐವರ ದಾರುಣ ಸಾವು

“ಪ್ರಸ್ತುತ ಎಎಪಿ ಸರ್ಕಾರ ಮಾದಕವಸ್ತು ಕಳ್ಳಸಾಗಣೆ ಬಗ್ಗೆ ಯಾವುದೇ ಸಹಿಷ್ಣುತೆಯನ್ನು ಹೊಂದಿಲ್ಲ. ನಮ್ಮ ಸರ್ಕಾರ ಮಾದಕ ವಸ್ತುಗಳ ಕಿಂಗ್‌ಪಿನ್‌ಗಳನ್ನು ಬಂಧಿಸುವುದಲ್ಲದೆ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ, ಅವರ ಸಾಮ್ರಾಜ್ಯಗಳನ್ನೇ ಕೆಡವಿದೆ. ಮಾನ್ ಸರ್ಕಾರವು ಪಂಜಾಬ್‌ನಿಂದ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಬದ್ಧವಾಗಿದೆ” ಎಂದು ಭರವಸೆ ನೀಡಿದರು.

ಪಂಜಾಬ್‌ನಲ್ಲಿ ಮಾದಕವಸ್ತು ಪಿಡುಗು ಅಧಿಕವಾಗಿದೆ. ಸದ್ಯ ಪಂಜಾಬ್ ಸರ್ಕಾರವು ರಾಜ್ಯದಲ್ಲಿ ಮಾದಕ ದ್ರವ್ಯ ದುರುಪಯೋಗದ ವಿರುದ್ಧ ಕಠಿಣ ಕ್ರಮವನ್ನು ಘೋಷಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X