ಜ್ಞಾನವಾಪಿ ಮಸೀದಿ | ಪೂಜೆ ಆದೇಶಕ್ಕೆ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಣೆ

Date:

Advertisements
ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. 

ಜ್ಞಾನವಾಪಿ ಮಸೀದಿ ಆವರಣದ ವ್ಯಾಸ್ ತೆಹ್‌ಖಾನದಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ (ಫೆಬ್ರವರಿ 2) ನಿರಾಕರಿಸಿದೆ. 

ಮಸೀದಿ ವ್ಯವಹಾರಗಳ ನೇತೃತ್ವ ವಹಿಸಿರುವ ಅಂಜುಮನ್ ಇನ್‌ತೆಜಾಮಿಯ ಮಸ್ಜಿದ್ ಸಮಿತಿಗೆ (ಎಐಎಂಸಿ) ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರವಾಲ್ ಪೀಠ ತಡೆಯಾಜ್ಞೆ ನಿರಾಕರಿಸಿದೆ.

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಪೂಜೆಗೆ ಅವಕಾಶ ನೀಡಿರುವ ಜನವರಿ 31ರ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ಮೂಲ ಕಾರಣವಾಗಿರುವ ಜನವರಿ 17ರ ಆದೇಶಕ್ಕೆ ತಡೆಯಾಜ್ಞೆ ಮನವಿಯನ್ನು ಸೇರಿಸಲು ಮುಸ್ಲಿಂ ಪರವಾಗಿ ಅರ್ಜಿ ಸಲ್ಲಿಸಿರುವ ಎಐಎಂಸಿಗೆ  ಫೆಬ್ರವರಿ 6ರವರೆಗೆ ಅಲಹಾಬಾದ್ ಹೈಕೋರ್ಟ್ ಕಾಲಾವಕಾಶ ನೀಡಿದೆ.

Advertisements

ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡುವ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸುವಂತೆ ತಿಳಿಸಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ಸಮಿತಿ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿತ್ತು.

ಬುಧವಾರ ವಾರಣಾಸಿ ನ್ಯಾಯಾಲಯ ಜ್ಞಾನವಾಪಿ ಮಸೀದಿಯ ದಕ್ಷಿಣ ಮೂಲೆಯಲ್ಲಿರುವ ಕೊಠಡಿಯಲ್ಲಿರುವ ಪ್ರತಿಮೆಗೆ ಪುರೋಹಿತರು ಪೂಜೆ ಸಲ್ಲಿಸಬಹುದು ಎಂದು ಆದೇಶ ನೀಡಿತ್ತು.

ಜಿಲ್ಲಾ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಶುಕ್ರವಾರದ ನಮಾಜ್‌ಗೆ ಮೊದಲು ವಾರಣಾಸಿ ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯದ ಪ್ರಭಾವವಿರುವ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಪೊಲೀಸರು ಪ್ರದೇಶಗಳಲ್ಲಿ ಗಸ್ತು ತಿರುಗುತ್ತಾ ನಿಗಾ ಇಟ್ಟಿದ್ದರು. ತೀರ್ಪಿನ ಹಿನ್ನೆಲೆಯಲ್ಲಿ ಶುಕ್ರವಾರದಂದು ವಾರಣಾಸಿ ಪಟ್ಟಣದಲ್ಲಿ ಅಂಜುಮಾನ್ ಸಮಿತಿ ಬಂದ್‌ಗೆ ಕರೆ ನೀಡಿತ್ತು. ದಾಲ್‌ಮಂಡಿ, ನೈ ಸಡಕ್‌, ನಾದೇಸರ್ ಹಾಗೂ ಅರ್ದ್ ಬಾಜಾರ್ ಪ್ರದೇಶಗಳಲ್ಲಿ ಅಂಗಡಿಗಳು ಮುಚ್ಚಿದ್ದವು.

ಆದರೆ ಸಮತಿ ಶಾಂತಿಯುತವಾಗಿ ನಮಾಝ್ ಮುಗಿಸುವಂತೆ ಸಮುದಾಯದ ಸದಸ್ಯರನ್ನು ಮನವಿ ಮಾಡಿಕೊಂಡಿತ್ತು. ಜೊತೆಗೆ ಸಮುದಾಯದ ಮಹಿಳೆಯರನ್ನು ಮನೆಯೊಳಗೇ ಇರುವಂತೆ ಸಲಹೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X