ಇಂಡಿಯಾ ಕೂಟ | ರಾಷ್ಟ್ರೀಯ ಚುನಾವಣೆಗೆ ಮೈತ್ರಿ – ಸ್ಥಳೀಯ ಚುನಾವಣೆಗೆ ಪ್ರತಿಸ್ಪರ್ಧಿ!

Date:

Advertisements

ಲೋಕಸಭಾ ಚುನಾವಣೆಯ ಸಮಯದಲ್ಲಿ ಒಗ್ಗೂಡಿದ್ದ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಲ್ಲಿ ಅಸಮಾಧಾನ, ವಿರೋಧಗಳು ವ್ಯಕ್ತವಾಗುತ್ತಿವೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದ ಎಎಪಿ ಮತ್ತು ಕಾಂಗ್ರೆಸ್‌ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆಗಿಳಿದಿವೆ. ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿವೆ. ಮಹಾರಾಷ್ಟ್ರದ ಮುಂಬೈನಲ್ಲಿ ನಡೆಯಲಿರುವ ಮುಂಬೈ ಪಾಲಿಕೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಶಿವಸೇನೆ (ಉದ್ದವ್ ಬಣ) ಘೋಷಿಸಿದೆ. ಇದೆಲ್ಲವೂ, ಇಂಡಿಯಾ ಮೈತ್ರಿಯಲ್ಲಿ ಬಿರುಕು ಮೂಡಿದೆ ಎಂಬುದನ್ನು ಸೂಚಿಸುತ್ತಿದೆ.

ಈ ನಡುವೆ, ಮುಂಬೈ ಪಾಲಿಕೆ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿರುವ ಎನ್‌ಸಿಪಿ (ಶರದ್‌ ಬಣ) ನಾಯಕ ಶರದ್ ಪವಾರ್, “ಇಂಡಿಯಾ ಬಣವನ್ನು ರಾಷ್ಟ್ರೀಯ ಮಟ್ಟದ ಚುನಾವಣೆಗಳಿಗಾಗಿ ಮಾತ್ರ ರಚಿಸಲಾಗಿದೆ. ಪುರಸಭೆ ಅಥವಾ ರಾಜ್ಯ ಚುನಾವಣೆಗಳಲ್ಲಿ ಒಟ್ಟಿಗೆ ಸ್ಪರ್ಧೆ ಮಾಡುವ ಬಗ್ಗೆ ಏನೂ ಚರ್ಚಿಸಲಾಗಿಲ್ಲ” ಎಂದಿದ್ದಾರೆ. ಆ ಮೂಲಕ ಮುಂಬೈ ಸ್ಥಳೀಯ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಸುಳಿವು ನೀಡಿದ್ದಾರೆ.

“ಇಂಡಿಯಾ ರಂಗ ರಚನೆಯಾದಾಗ, ಚರ್ಚೆ ರಾಷ್ಟ್ರೀಯ ಸಮಸ್ಯೆಗಳು ಮತ್ತು ಚುನಾವಣೆಗಳ ಬಗ್ಗೆ ಮಾತ್ರ. ಸ್ಥಳೀಯ ಸಂಸ್ಥೆ ಚುನಾವಣೆ ಅಥವಾ ರಾಜ್ಯ ಚುನಾವಣೆಗಳ ಬಗ್ಗೆ ಯಾವುದೇ ಚರ್ಚೆ ಇರಲಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷಗಳು ಒಟ್ಟಾಗಿ ಅಥವಾ ಏಕಾಂಗಿಯಾಗಿ ಸ್ಪರ್ಧಿಸುತ್ತವೆಯೇ ಎಂದು ನಿರ್ಧರಿಸಲು ಎಂವಿಎ ಸಭೆ ನಡೆಸಲಾಗುವುದು” ಎಂದು ಶರದ್ ಪವಾರ್ ಹೇಳಿದ್ದಾರೆ.

Advertisements

“ಮಹಾರಾಷ್ಟ್ರದಲ್ಲಿ ಮುಂಬರುವ ಪುರಸಭೆ ಚುನಾವಣೆಯಲ್ಲಿ, ನಾವು ಒಟ್ಟಾಗಿ ಅಥವಾ ಏಕಾಂಗಿಯಾಗಿ ಹೋರಾಡುತ್ತೇವೆಯೇ ಎಂಬುದರ ಬಗ್ಗೆ 8-10 ದಿನಗಳಲ್ಲಿ ಸಭೆ ನಡೆಸಿ, ನಿರ್ಧರಿಸುತ್ತೇವೆ. ಮೈತ್ರಿಕೂಟದೊಳಗೆ ನಮಗೆ ಸಂವಹನವಿದೆ” ಎಂದಿದ್ದಾರೆ.

ಪವಾರ್ ಅವರ ಈ ಹೇಳಿಕೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯು ಒಡೆಯುತ್ತಿದೆ ಎಂಬ ವದಂತಿಗಳಿಗೆ ಮತ್ತಷ್ಟು ಬಲ ತುಂಬಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X