ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

Date:

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ 18ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣವಾದ ಬೆಂಬಲವನ್ನು ಘೋಷಿಸಿದೆ.

- Advertisement -

ಕಾಂಗ್ರೆಸ್ ಪಕ್ಷವು ಶ್ರೀಮತಿ ಇಂದಿರಾ ಗಾಂಧಿಯವರು ಪ್ರಧಾನಮಂತ್ರಿ ಆಗಿದ್ದಾಗಿನಿಂದಲೂ ನಮ್ಮ ಸಮುದಾಯಕ್ಕೆ ಆದ್ಯತೆಯನ್ನು ಕೊಟ್ಟಿದೆ. ಹಾಗೆಯೇ ದೇಶದ ಹಲವಾರು ರಾಜ್ಯಗಳಲ್ಲಿ ನಮಗೆ ರಾಜಕೀಯ ಪ್ರಾತಿನಿಧ್ಯತೆಯನ್ನು ಕೊಡುತ್ತಿದೆ. ಮುಖ್ಯವಾಗಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಶ್ರೀಮತಿ ಅಕ್ಕೈ ಪದ್ಮಶಾಲಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದು, ನಮ್ಮ ಸಮುದಾಯದ ಇತರೆ ವ್ಯಕ್ತಿಗಳನ್ನು ವಿವಿಧ ಉತ್ತಮ ಸ್ಥಾನಗಳಲ್ಲಿ ನೇಮಕ ಮಾಡಿರುವುದರಿಂದ ನಾವು ಸಂಪ್ರೀತರಾಗಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರು ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಗಳ ಕುರಿತಾಗಿ ಮುಕ್ತವಾಗಿ ಮಾತನಾಡಿರುವುದು ನಮಗೆ ಸಂತೋಷವನ್ನುಂಟು ಮಾಡಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಪಂಚ ಗ್ಯಾರಂಟಿ ಯೋಜನೆಗಳಲ್ಲಿ ನಮ್ಮನ್ನು ಒಳಗೊಂಡಿದ್ದು, ಈಗಾಗಲೇ ಶಕ್ತಿ ಯೋಜನೆಯ ಫಲವನ್ನು ಪಡೆಯುತ್ತಿದ್ದೇವೆ. ಅತಿ ಶೀಘ್ರವಾಗಿ ಗೃಹಲಕ್ಷ್ಮೀ ಯೋಜನೆಯ ಫಲವು ಕೆಲವರಿಗೆ ಸಿಗುತ್ತಿದ್ದು, ಅತಿ ಶೀಘ್ರವಾಗಿ ನಮ್ಮೆಲ್ಲರಿಗೂ ಈ ಯೋಜನೆಯ ಫಲ ಸಿಗುತ್ತದೆ ಎಂಬ ನಂಬಿಕೆ ನಮಗಿದೆ. ನಮ್ಮ ಪಿಂಚಣಿಯನ್ನು ರೂಪಾಯಿ 1200/-ಕ್ಕೆ ಹೆಚ್ಚಿಸಿದ್ದಾರೆ. ಲಿಂಗಾಧಾರಿತವಾದ ತಾರತಮ್ಯವನ್ನು ನಿರ್ಮೂಲನೆ ಮಾಡುವ ಭರವಸೆಯನ್ನು ನೀಡಿದ್ದಾರೆ.LGBTQAI++( ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರು ) ಸಮುದಾಯದ ವಿವಾಹ ಮತ್ತು ದಾಂಪತ್ಯದ ಕುರಿತಾಗಿಯೂ ಆಶಾದಾಯಕವಾದ ಹೇಳಿಕೆಗಳನ್ನು ಕೊಟ್ಟಿದ್ದಾರೆ” ಎಂದು ಒಕ್ಕೂಟ ತಿಳಿಸಿದೆ.

ಮುಖ್ಯವಾಗಿ ದೇಶವನ್ನು ಧರ್ಮಾಧಾರಿತವಲ್ಲದೆ ಸರ್ವರಿಗೂ ನಾಗರಿಕ ಹಕ್ಕುಗಳನ್ನು ಕೊಡಮಾಡಿರುವ ಸಂವಿಧಾನ ಮತ್ತು ಸಂವಿಧಾನಾತ್ಮಕ ನೈತಿಕತೆಯ ಆಧಾರದ ಮೇಲೆ ಮುನ್ನಡೆಸಿ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಭಾರತವನ್ನು ಪುನರ್ ನಿರ್ಮಾಣ ಮಾಡುತ್ತಾರೆಂಬ ಹೆಗ್ಗನಸು ನಮ್ಮದು. ಹಾಗೆಯೇ ಕಾಂಗ್ರೆಸ್ ಪಕ್ಷದ ನೇತೃತ್ವದ ಕರ್ನಾಟಕ ರಾಜ್ಯದ ಸರ್ಕಾರವು ಶೋಷಿತ ಸಮುದಾಯಗಳ, ಅಲ್ಪಸಂಖ್ಯಾತ ಸಮುದಾಯಗಳ,ಮಹಿಳೆಯರ, ಯುವಕರ, ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಪ್ರಶಂಸಿಸಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ತಿಳಿಸಿದೆ.

ಇದನ್ನು ಓದಿದ್ದೀರಾ? ದ.ಕನ್ನಡ | ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ ಸಹಿಸಲು ಸಾಧ್ಯವೇ? ಬಿಜೆಪಿಗೆ ಮತ ಹಾಕಲು ‘ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರ!

ಒಕ್ಕೂಟದ ಮಾಳವಿಕ, ಪ್ರಕಾಶ್ ರಾಜ್, ಭೀಮಯ್ಯ , ಬೀರಲಿಂಗ, ಪೆದ್ದಣ್ಣ, ನಿತ್ಯಾನಂದ,ಸಂಜೀವನಿ, ಮಹಮ್ಮದ್ ಸೈಫುಲ್ಲಾ, ಕೃಷ್ಣಮೂರ್ತಿ, ಆದಿತ್ಯ, ಸಮೀರ್, ನಿವೇದಿತಾ, ಅಬಿದಾ ಬೇಗಮ್, ಪೂಜಿತಾ ಅವರು ತಮ್ಮ ಬೆಂಬಲವು ಕಾಂಗ್ರೆಸ್ ಪಕ್ಷಕ್ಕೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...