ಮೀಸಲು ಹಂಚಿಕೆ | ಜಾತ್ರೆಯ ಬೆಂಡು-ಬತ್ತಾಸು ಹಂಚಿಕೆಯೂ ಇಷ್ಟೊಂದು ಕಳಪೆಯಾಗಿ ಇರುವುದಿಲ್ಲ ಎಂದ ಜೆಡಿಎಸ್‌

Date:

  • ‘ಮೀಸಲು ಹಂಚಿಕೆ ಚುನಾವಣಾ ಗಿಮಿಕ್’
  • ‘ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರಲಾಗಿದೆ’

ರಾಜ್ಯ ಸರ್ಕಾರದ ಮೀಸಲಾತಿ ಹಂಚಿಕೆಯ ನಿರ್ಧಾರದ ಕುರಿತು ಜೆಡಿಎಸ್‌ ಸರಣಿ ಟ್ವೀಟ್ ಮಾಡಿ, ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಬದಲು ಮಾಡಿದೆ. ಅಂತೆಯೇ, ಪರಿಶಿಷ್ಟ ಜಾತಿಯ ಎಡಗೈ–ಬಲಗೈ ಸಮುದಾಯದವರಿಗೆ ಒಳಮೀಸಲಾತಿ ಕಲ್ಪಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ.

ರಾಜ್ಯ ಸರ್ಕಾರದ ಮೀಸಲಾತಿ ಹಂಚಿಕೆಯ ಕುರಿತು ಜೆಡಿಎಸ್‌ ಸರಣಿ ಟ್ವೀಟ್ ಮಾಡಿದ್ದು, “ರಾಜ್ಯ ಬಿಜೆಪಿ ಸರ್ಕಾರ ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೂತ್ರ-ಸಂಬಂಧವಿಲ್ಲದ ರೀತಿ ಮೀಸಲಾತಿ ವರ್ಗೀಕರಣ ಮಾಡಿದೆ. ಒಂದು ಕಡೆ ಒಳ ಮೀಸಲಾತಿ ಘೋಷಣೆ, ಇನ್ನೊಂದು ಕಡೆ 2 ಸಿ, 2 ಡಿ ಎಂಬ ಹೊಸ ವರ್ಗೀಕರಣ. ಜಾತ್ರೆಯಲ್ಲಿ ಬೆಂಡು-ಬತ್ತಾಸು-ಕಡ್ಲೆಪುರಿ ಹಂಚಿಕೆಯನ್ನೂ ಇಷ್ಟು ಕಳಪೆಯಾಗಿ ಮಾಡುವುದಿಲ್ಲ. ಇದು ಅಪ್ಪಟ ಚುನಾವಣೆ ಗಿಮಿಕ್!” ಎಂದು ಹರಿಹಾಯ್ದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯ ಸರ್ಕಾರವು ಮುಸ್ಲಿಮರಿಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಿದೆ. ಈ ಕುರಿತು ಟ್ವೀಟ್ ಮಾಡಿದ ಜೆಡಿಎಸ್‌, “ಮುಸ್ಲಿಂ ಸಮುದಾಯದ ನಾಲ್ಕು ಪ್ರತಿಶತವನ್ನು ಮೀಸಲಾತಿ ರದ್ದು ಪಡಿಸಿ ಅವರನ್ನು ‘ಆರ್ಥಿಕವಾಗಿ ಹಿಂದುಳಿದ’ವರ ಮೀಸಲಾತಿಗೆ ವರ್ಗಾಯಿಸಲಾಗಿದೆ. ದ್ವೇಷದ ರಾಜಕಾರಣ ಎಲ್ಲೆ ಮೀರಿದೆ. ಕಾನೂನು, ಸಂವಿಧಾನ, ನೀತಿ-ನಿಯಮ ಎಲ್ಲವನ್ನೂ ಗಾಳಿಗೆ ತೂರಲಾಗಿದೆ. ಇದು ದೊಡ್ಡ ಅನ್ಯಾಯಕ್ಕೆ ದಾರಿ ಮಾಡಿಕೊಡಲಿದೆ” ಎಂದು ವ್ಯಂಗ್ಯವಾಡಿದೆ.

ಯಾವ ವರದಿ, ಅಧ್ಯಯನ, ವೈಜ್ಞಾನಿಕ ಆಧಾರವೇನೆಂದು ನಾಳೆ ಕೋರ್ಟ್‌ನಲ್ಲಿ ಕೇಳಿದರೆ ಸರ್ಕಾರದ ಉತ್ತರವೇನು? ಎಂದು ಜೆಡಿಎಸ್‌ ಪ್ರಶ್ನಿಸಿದೆ.

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚುವರಿ ಮೀಸಲಾತಿ ಘೋಷಣೆಯೇ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಅದ್ಯಾವ ಮಾನದಂಡದಲ್ಲಿ ಹೆಚ್ಚುವರಿ ಘೋಷಿತ ಮೀಸಲಾತಿ ಪ್ರಮಾಣಕ್ಕೆ ಅನ್ವಯವಾಗುವ ರೀತಿ ಒಳ ಮೀಸಲು ಹಂಚಿಕೆ ಮಾಡಲಾಗಿದೆ? ಒಟ್ಟಿನಲ್ಲಿ ರಾಜ್ಯದ ಪ್ರಜ್ಞಾವಂತ ಜನರು ಈ ಎಲ್ಲ ಅಂಶಗಳನ್ನು ಅರಿಯುವುದು ಅಗತ್ಯ” ಎಂದಿದೆ.

ಮೀಸಲು ಹಂಚಿಕೆ

ಮುಸ್ಲಿಮರಿಗಿದ್ದ ಶೇ 4ರಷ್ಟು ಮೀಸಲಾತಿ ರದ್ದು ಮಾಡಿ, ಈ ಪ್ರಮಾಣವನ್ನು ಲಿಂಗಾಯತರಿಗೆ ಹಾಗೂ ಒಕ್ಕಲಿಗರಿಗೆ ತಲಾ ಶೇ 2ರಷ್ಟು ಹಂಚುವ ನಿರ್ಣಯವನ್ನೂ ಮಾಡಿದೆ. ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯೂಎಸ್‌) ಪಟ್ಟಿಗೆ ಸೇರಿಸುವ ನಿರ್ಧಾರವನ್ನೂ ಮಾಡಿದೆ.

ಪರಿಶಿಷ್ಟ ಜಾತಿ ವಿಚಾರದಲ್ಲಿ ಆರ್ಟಿಕಲ್​ 342 ಅನ್ವಯ 4 ಗುಂಪುಗಳನ್ನು ಮಾಡಿರುವ ಸರ್ಕಾರ ಇವುಗಳಿಗೆ ಒಳಮೀಸಲಾತಿ ಹಂಚಿದೆ. ಈ ಪೈಕಿ ಗುಂಪು ಒಂದು ಆದಿಜಾಂಬವ ಸಮುದಾಯಕ್ಕೆ ಶೇ 6ರಷ್ಟು ಮೀಸಲಾತಿ, ‘ಗುಂಪು 2’ ಆದಿಕರ್ನಾಟಕ ಸಮುದಾಯಕ್ಕೆ ಶೇ 5.5ರಷ್ಟು ಮೀಸಲಾತಿ, ಗುಂಪು 3 ಬಂಜಾರ, ಬೋವಿ, ಕೊರಚರಿಗೆ ಶೇ 4.5ರಷ್ಟು ಮೀಸಲಾತಿ, ಗುಂಪು 4ರಲ್ಲಿರುವ ಮತ್ತಿತರರಿಗೆ ಶೇ.1ರಷ್ಟು ಮೀಸಲಾತಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೀಸಲಾತಿ ಹಂಚಿಕೆಯ ಪ್ರಮಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....